![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 23, 2023, 7:32 PM IST
ಮಡಿಕೇರಿ: ಕಳೆದ 2-3 ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ ಜುಲೈ 24 ರಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ.
ಪ್ರಮುಖ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಗಾಳಿ ಸಹಿತ ಭಾರೀ ಮಳೆಯಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ, ತಲಕಾವೇರಿ ಹಾಗೂ ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.
You seem to have an Ad Blocker on.
To continue reading, please turn it off or whitelist Udayavani.