“ಟಿಪ್ಪು ಕುರಿತ ಸಿನಿಮಾ ಮಾಡುವುದಿಲ್ಲ..” ಎಂದ ನಿರ್ಮಾಪಕ; ಎರಡೇ ತಿಂಗಳಿನಲ್ಲಿ ನಿಂತ ಸಿನಿಮಾ

ನನ್ನ ಕುಟುಂಬವನ್ನು ನಿಂದಿಸುವುದನ್ನು ತಡೆಯಿರಿ...

Team Udayavani, Jul 24, 2023, 5:05 PM IST

tdy-18

ಮುಂಬಯಿ: ಇದೇ ವರ್ಷದ ಮೇ ತಿಂಗಳಿನಲ್ಲಿ ನಿರ್ಮಾಪಕ ಸಂದೀಪ್‌ ಸಿಂಗ್‌ ʼಟಿಪ್ಪು ಸುಲ್ತಾನ್‌ʼ ಕುರಿತಂತೆ ಸಿನಿಮಾವನ್ನು ಮಾಡವುದಾಗಿ ಘೋಷಿಸಿದ್ದರು. ಇದೀಗ ಎರಡು ತಿಂಗಳ ಬಳಿಕ ಸಿನಿಮಾ ಮಾಡುವುದಿಲ್ಲ ಎಂದು ಸಂದೀಪ್‌ ಸಿಂಗ್‌ ಅವರು ಹೇಳಿದ್ದಾರೆ.

ಮೇ3 ರಂದು ʼವೀರ ಸಾವರ್ಕರ್ʼ ಹಾಗೂ ʼಅಟಲ್‌ʼ, ʼಬಾಲ್  ಶಿವಾಜಿʼ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಸಂದೀಪ್‌ ಶರ್ಮಾ, ರಶ್ಮಿ‌, ಇರೋಸ್‌ ಇಂಟರ್‌ ನ್ಯಾಷನಲ್‌ ನೊಂದಿಗೆ ಸೇರಿಕೊಂಡು ʼಟಿಪ್ಪುʼ ಈ ಸಿನಿಮಾವನ್ನು ನಿರ್ಮಾಣ ಮಾಡುವುದಾಗಿ ಘೋಷಿಸಿದ್ದರು.

ಈ ಸಂಬಂಧ ಮೋಷನ್‌ ಪಿಕ್ಚರ್‌ ರಿಲೀಸ್‌ ಮಾಡಲಾಗಿತ್ತು. ಈತ ಮತಾಂಧ ಸುಲ್ತಾನ್‌ ಎಂದು ʼಟಿಪ್ಪುʼವಿನ ಮುಖಕ್ಕೆ ಮಸಿ ಬಳಿದಿರುವ ಪೋಸ್ಟರ್‌ ನ್ನು ರಿಲೀಸ್‌ ಮಾಡಲಾಗಿತ್ತು.8 ಸಾವಿರ ದೇವಸ್ಥಾನ, 27 ಚರ್ಚ್‌ ಗಳನ್ನು ನಾಶ ಮಾಡಲಾಗಿದೆ. 4 ಮಿಲಿಯನ್‌ ಹಿಂದೂಗಳನ್ನು ಮತಾಂತರ ಮಾಡಿ, ಬಲವಂತವಾಗಿ ಗೋಮಾಂಸವನ್ನು ಸೇವಿಸಲು ಒತ್ತಾಯಿಸಲಾಗಿದೆ. 1 ಲಕ್ಷಕ್ಕೂ ಅಧಿಕ ಹಿಂದೂಗಳನ್ನು ಜೈಲಿಗೆ ಹಾಕಿ ಶಿಕ್ಷಿಸಿದ್ದಾರೆ. 2000 ಕ್ಕೂ ಅಧಿಕ ಬ್ರಾಹ್ಮಣ ಕುಟುಂಬಕ್ಕೆ ಹಿಂಸೆ ನೀಡಲಾಗಿದೆ. ಆತನ ದುರಾಡಳಿತ 1783 ರಿಂದ ಆರಂಭವಾಯಿತೆಂದು ಮೋಷನ್‌ ಪಿಕ್ಚರ್‌ ನಲ್ಲಿ ಹೇಳಲಾಗಿತ್ತು.

ಈ ಸಿನಿಮಾ ಘೋಷಣೆ ಮಾಡಿದ ಬಳಿಕ ಹತ್ತಾರು ಟೀಕೆಗಳು ಕೇಳಿ ಬಂದಿತ್ತು. ಇದೀಗ ಸಿನಿಮಾ ಘೋಷಣೆಯಾದ ಎರಡೇ ತಿಂಗಳಿಗೆ ಸಿನಿಮಾ ನಿರ್ಮಾಣ ಮಾಡುವುದಿಲ್ಲ ಎಂದು ಸಂದೀಪ್‌ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಶಾರುಖ್‌ ʼಜವಾನ್‌ʼ ಜೊತೆ ಸಲ್ಮಾನ್‌ ʼಟೈಗರ್-3‌ʼ ಟೀಸರ್‌ ರಿಲೀಸ್‌? ಥ್ರಿಲ್‌ ಆದ ಫ್ಯಾನ್ಸ್

“ಹಜರತ್ ಟಿಪ್ಪು ಸುಲ್ತಾನ್ ಕುರಿತ ಚಿತ್ರ ನಿರ್ಮಾಣವಾಗುವುದಿಲ್ಲ. ನನ್ನ ಕುಟುಂಬ, ಸ್ನೇಹಿತರು ಮತ್ತು ನನಗೆ ಬೆದರಿಕೆ ಅಥವಾ ನಿಂದನೆ ಮಾಡುವುದನ್ನು ತಡೆಯಿರಿ ಎಂದು ಈ ಮೂಲಕ ನಾನು ನನ್ನ ಸಹೋದರ- ಸಹೋದರಿಯರಲ್ಲಿ ಕೇಳಿಕೊಳ್ಳುತ್ತೇನೆ.ನಾನು ಉದ್ದೇಶಪೂರ್ವಕವಾಗಿ  ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದರೆ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಹೀಗೆ ಮಾಡುವುದು ನನ್ನ ಉದ್ದೇಶವಾಗಿರಲಿಲ್ಲ. ನಾನು ಎಲ್ಲಾ ನಂಬಿಕೆಗಳನ್ನು ಗೌರವಿಸುತ್ತೇನೆ. ಭಾರತೀಯರಾಗಿ ನಾವು ಎಂದೆಂದಿಗೂ ಒಂದಾಗಿರೋಣ ಮತ್ತು ಯಾವಾಗಲೂ ಪರಸ್ಪರ ಗೌರವವನ್ನು ನೀಡೋಣ” ಎಂದು ಟ್ವೀಟ್‌ ಮಾಡಿದ್ದಾರೆ.

ಸಿನಿಮಾ ಘೋಷಣೆ ಮಾಡುವ ವೇಳೆ  “ಟಿಪ್ಪು ಸುಲ್ತಾನನ ನಿಜವಾದ ಸತ್ಯವನ್ನು ತಿಳಿದು ನಾನು ಬೆಚ್ಚಿಬಿದ್ದೆ. ನಮ್ಮ ಇತಿಹಾಸದ ಪಠ್ಯಪುಸ್ತಕಗಳಲ್ಲಿ ತೋರಿಸಿರುವಂತೆ ಅವನನ್ನು ಧೈರ್ಯಶಾಲಿ ಎಂದು ನಂಬುವಂತೆ ನಮ್ಮ ಬ್ರೈನ್‌ ವಾಶ್‌ ಮಾಡಲಾಗಿದೆ. ಅವನ ದುರುದ್ದೇಶ ಯಾರಿಗೂ ತಿಳಿದಿಲ್ಲ. ಭವಿಷ್ಯದ ಪೀಳಿಗೆಗೆ ಅವರ ಕರಾಳ ಮುಖವನ್ನು ಬಹಿರಂಗಪಡಿಸಲು ನಾನು ಬಯಸುತ್ತೇನೆ” ಎಂದು ಹೇಳಿದ್ದರು.

ಸದ್ಯ ಪಂಕಜ್ ತ್ರಿಪಾಠಿ ನಾಯಕನಾಗಿ ನಟಿಸುತ್ತಿರುವ ‘ಮೇನ್ ಅಟಲ್ ಹೂನ್’ ಸಿನಿಮಾದ ಕೆಲಸದಲ್ಲಿ ಸಂದೀಪ್‌ ಸಿಂಗ್‌ ಬ್ಯಸಿಯಾಗಿದ್ದಾರೆ.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.