ವಿದೇಶಿ ಪೆಡ್ಲರ್ ಸೆರೆ, 2 ಕೋಟಿ ರೂ. ಡ್ರಗ್ಸ್ ವಶ
Team Udayavani, Jul 25, 2023, 10:22 AM IST
ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನೈಜಿರಿಯಾ ಮೂಲದ ಮೋಸ್ಟ್ ವಾಂಟೆಡ್ ಪೆಡ್ಲರ್ನನ್ನು ವಿವಿ ಪುರಂ ಪೊಲೀ ಸರು ಗ್ರಾಹಕರ ಸೋಗಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೈಜಿರಿಯಾ ಮೂಲದ ಜಾನ್ ಇಗ್ವಾ ಯತ್ (28) ಬಂಧಿತ. ಆತನಿಂದ 2 ಕೋಟಿ ರೂ. ಮೌಲ್ಯದ 1 ಕೆ.ಜಿ. 200 ಗ್ರಾಂ ಎಂಡಿ ಎಂಎ ಮತ್ತು 1 ಬೈಕ್ ವಶಕ್ಕೆ ಪಡೆಯಲಾಗಿದೆ.
ಆರೋಪಿಯ ಜುಲೈ 22ರಂದು ಠಾಣೆ ವ್ಯಾಪ್ತಿ ಯ ಎಂಡಿಎಂಎ ಮಾರಾಟಕ್ಕೆ ಬಂದಾಗ ದಾಳಿ ನಡೆಸಿ ಬಂಧಿಸಲಾಗಿದೆ. ಜಾನ್ ಸ್ನೇಹಿತ ನಾಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಐದು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ಆರೋಪಿ, ಮಾದಕ ವಸ್ತು ಮಾರಾಟ ದಂಧೆ ಯಲ್ಲಿ ತೊಡಗಿದ್ದ. ಹೀಗಾಗಿ ಈ ಹಿಂದೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು 2-3 ಬಾರಿ ಬಂಧಿಸಿ, ಜೈಲಿಗೆ ಕಳುಹಿಸಿದ್ದರು. ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿ ಮತ್ತೆ ಅದೇ ಕೃತ್ಯದಲ್ಲಿ ತೊಡಗಿದ್ದಾನೆ. ಆರ್. ಟಿ.ನಗರದಲ್ಲಿ ಬಾಡಿಗೆ ಮನೆಯಲ್ಲಿ ಸ್ನೇಹಿತನ ಜತೆ ವಾಸವಾಗಿದ್ದ ಆರೋಪಿ, ಗೋವಾ ಮತ್ತು ಮಹಾರಾಷ್ಟ್ರದಿಂದ ಕಡಿಮೆ ಮೊತ್ತಕ್ಕೆ ಪರಿಶುದ್ಧ ಕಚ್ಚಾ ವಸ್ತುಗಳನ್ನು ತರಿಸಿ ಎಂಡಿ ಎಂಎ ತಯಾರು ಮಾಡಿ, ಪಾರ್ಟಿ ಹಾಗೂ ಇತರೆ ಮೋಜು-ಮಸ್ತಿಯ ಕೂಟಗಳಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳು, ಟೆಕಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಬಂಧಿತ ಜಾನ್ ಪಾಸ್ಪೋರ್ಟ್ ಮತ್ತು ವೀಸಾವನ್ನು ಈ ಹಿಂದೆಯೇ ಪೊಲೀಸರು ಜಪ್ತಿ ಮಾಡಿದ್ದು, ಅಕ್ರಮವಾಗಿ ವಾಸವಾಗಿ ರುವುದು ಪತ್ತೆಯಾಗಿದೆ. ಹೀಗಾಗಿ ಆರೋಪಿ ಯ ವಿರುದ್ಧ ಎನ್ಡಿಪಿಎಸ್ ಹಾಗೂ ವಿದೇಶಿ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು. ವಿ.ವಿ.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶೌಚಾಲಯದೊಳಗೆ ಡ್ರಗ್ಸ್ ಎಸೆದು ಫ್ಲಶ್ ಮಾಡಿದ! : ಆರೋಪಿಯ ಜಾಲ ಭೇದಿಸಿದ್ದ ಪಿಐ ಮಿರ್ಜಾ ಅಲಿ ರಜಾ ಮತ್ತು ತಂಡ ಗ್ರಾಹಕರ ಸೋಗಿನಲ್ಲಿ ಆರೋಪಿಗೆ ಕರೆ ಮಾಡಿ ಠಾಣೆ ವ್ಯಾಪ್ತಿಗೆ ಕರೆಸಿಕೊಂಡಿದ್ದಾರೆ. ಬಳಿಕ ಮಾದಕ ವಸ್ತು ಪಡೆಯುವಾಗ ಸುತ್ತುವರಿದೂ ಆರೋಪಿಯನ್ನು ಬಂಧಿಸಲಾಗಿದೆ. ಬಳಿಕ ಈತ ವಾಸವಾಗಿದ್ದ ಆರ್.ಟಿ.ನಗರದ ಮನೆಗೆ ಶೋಧಿಸಲು ಕರೆದೊಯ್ಯಲಾಗಿತ್ತು. ಆದರೆ, ಮನೆಯಲ್ಲಿದ್ದ ಮತ್ತೂಬ್ಬ ನೈಜಿರಿಯಾ ಪ್ರಜೆ, ಪೊಲೀಸರನ್ನು ಕಂಡು ಮನೆಯ ಗ್ಯಾಸ್ ಸಿಲಿಂಡರ್ ಹಾಗೂ ಇತರೆಡೆ ಇಟ್ಟಿದ್ದ ಮಾದಕ ವಸ್ತುಗಳನ್ನು ಕಿಟಕಿ ಮತ್ತು ಶೌಚಾಲಯದಲ್ಲಿ ಎಸೆದು ಫ್ಲಶ್ ಮಾಡಿದ್ದಾನೆ. ಬಳಿಕ ಶೌಚಾಲಯದ ಕಿಟಕಿಯಿಂದ ಜಿಗಿದು ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Students ಆತ್ಮಹತ್ಯೆ ತಡೆಗೆ ಕಾಲೇಜುಗಳಲ್ಲಿ ಜಾಗೃತಿ: ಸಚಿವ
Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.