UDUPI; ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ: ವದಂತಿಗಳನ್ನು ನಂಬದಂತೆ ಎಸ್ ಪಿ ಮನವಿ

ಯಾವುದೇ ವಿಡಿಯೋ ಸಿಕ್ಕಿಲ್ಲ, ಬೇರೆ ಘಟನೆಗಳನ್ನು ಇದಕ್ಕೆ ಲಿಂಕ್ ಮಾಡಬೇಡಿ

Team Udayavani, Jul 25, 2023, 12:17 PM IST

Udupi college video incident: SP Akshay hakay gave clarification

ಉಡುಪಿ: ಕೆಲ ದಿನಗಳ ಹಿಂದೆ ಇಲ್ಲಿನ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ಉಡುಪಿ ಎಸ್ ಪಿ ಅಕ್ಷಯ್ ಹಾಕೆ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.

ಎಸ್ ಪಿ ಹೇಳಿದ್ದೇನು?: ಘಟನೆಗೆ ಸಂಬಂಧಪಟ್ಟಂತೆ ಹಲವಾರು ವಿಡಿಯೋಗಳನ್ನು ಮಾಡಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು ಸುದ್ದಿಯಾಗುತ್ತಿದೆ. ಆದರೆ ಇಲ್ಲಿಯ ತನಕ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೆ ನಾವೂ ನಿಗಾ ಇಟ್ಟಿದ್ದು ನಮಗೂ ಯಾವುದೇ ವಿಡಿಯೋ ಲಭ್ಯವಾಗಿಲ್ಲ. ಕೆಲವರು ಬೇರೆ ಕಡೆ ಆದ ವಿಡಿಯೋಗಳಿಗೆ ಧ್ವನಿ ಎಡಿಟ್ ಮಾಡಿ ಉಡುಪಿ ಘಟನೆ ಎಂದು ಬಿಂಬಿಸುವ ಪ್ರಸಂಗ ನಡೆದಿದ್ದು, ಅದಕ್ಕೆ ನಾವು ಸ್ಪಷ್ಟನೆ ನೀಡಿದ್ದೇವೆ. ಸಾಮಾಜಿಕ ಜಾಲತಾಣಗಳಲ್ಲಿ ಸತ್ಯಾಂಶ ತಿಳಿಯದೆ ಸುಮ್ಮನೆ ಮಾಹಿತಿ ಹರಡುವುದರಿಂದ ಜನರಿಗೆ ಗೊಂದಲ ಸೃಷ್ಟಿಯಾಗುತ್ತಿದೆ ಎಂದಿದ್ದಾರೆ.

ಘಟನೆ ಸಂಬಂಧಪಟ್ಟಂತೆ ಒಂದಷ್ಟು ಮಾಹಿತಿಗಳು ಹರಿದಾಡುತ್ತಿದೆ. ಆದರೆ ಪೊಲೀಸ್ ಇಲಾಖೆಗೆ ಘಟನೆಯ ವಿಡಿಯೋ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳ ಮೇಲೂ ನಾವು ನಿಗಾ ಇಟ್ಟಿದ್ದು, ಅಲ್ಲೂ ನಮ್ಮ ಕಣ್ಣಿಗೆ ಬಿದ್ದಿಲ್ಲ. ಯಾರಾದರೂ ಸಿಕ್ಕಿದರೆ ನಮಗೆ ಮಾಹಿತಿ ತಿಳಿಸಿ ಎಂದಿದ್ದಾರೆ.

ಇದನ್ನೂ ಓದಿ:Geethika Sharma case: 11 ವರ್ಷಗಳ ಬಳಿಕ ಹರ್ಯಾಣ ಶಾಸಕ ಗೋಪಾಲ್‌ ಕಾಂಡ ಖುಲಾಸೆ

ಘಟನೆಯ ಬಗ್ಗೆ ಯಾವುದೇ ದೂರು ನೀಡಲಾಗಿಲ್ಲ. ನಾವು ಸುಮೋಟೋ ಕೇಸು ದಾಖಲಿಸಲು ಸಾಮಾಜಿಕ ಜಾಲತಾಣದಿಂದ ಯಾವುದೇ ಸಾಕ್ಷಿ ದಾಖಲೆಗಳು ಸಿಕ್ಕಿಲ್ಲ. ಮೊಬೈಲ್ ಪರಿಶೀಲನೆ ಮಾಡಲಾಗಿದೆ, ಅದರಲ್ಲಿಯೂ ಏನೂ ಸಿಕ್ಕಿಲ್ಲ ಎಂದು ಸ್ಪಷ್ಟನೆ ನೀಡಿದರು.

ಟ್ವೀಟ್ ವಿಚಾರಕ್ಕೆ ಮಾತನಾಡಿದ ಎಸ್ ಪಿ, ಟ್ವೀಟ್ ಮಾಡಿದವರು ಘಟನೆಯ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಬೇಕಿತ್ತು. ಅವರನ್ನು ಪೊಲೀಸರು ಸಂಪರ್ಕಿಸಿದ್ದು ಘಟನೆಯ ಮಾಹಿತಿ ನೀಡಲು ಹೊರತು ತೊಂದರೆ ಕೊಡಲು ಅಲ್ಲ ಎಂದರು.

ಸಾರ್ವಜನಿಕರಿಗೆ ಮನವಿ: ಜನರಿಗೆ ಮನವಿ ಮಾಡುತ್ತೇವೆ. ಸಾಮಾಜಿಕ ಜಾಲತಾಣಗಳಲ್ಲಿ ಬೇಡದ ವಿಚಾರಗಳನ್ನು ಈ ವಿಷಯಕ್ಕೆ ಲಿಂಕ್ ಮಾಡಿ ಜನರ ಮನಸ್ಸಿನಲ್ಲಿ ಆತಂಕ ಸೃಷ್ಟಿ ಮಾಡುವ ಅಥವಾ ಗೊಂದಲವುಂಟು ಮಾಡುವ ಪೋಸ್ಟ್ ಹಾಕಬೇಡಿ. ಏನಾದರೂ ಖಚಿತ ಮಾಹಿತಿ ಸಿಕ್ಕಿದರೆ ಶೇರ್ ಮಾಡುವ ಮೊದಲು ನಮಗೆ ತಿಳಿಸಿ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ವದಂತಿ ಹರಡಬೇಡ ಎಂದು ಎಸ್ ಪಿ ಮನವಿ ಮಾಡಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Naxal

Naxalites Encounter: ಛತ್ತೀಸ್‌ಗಢದಲ್ಲಿ 28 ಮಂದಿ ನಕ್ಸಲರ ಹ*ತ್ಯೆಗೈದ ಭದ್ರತಾ ಪಡೆ!

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Women’s T20 World Cup: ವಿಂಡೀಸನ್ನು ಹೊಸಕಿ ಹಾಕಿದ ದಕ್ಷಿಣ ಆಫ್ರಿಕಾ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

3

Hiriydaka: ಅಕ್ರಮ ಮರಳುಗಾರಿಕೆ ಟಿಪ್ಪರ್‌ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

udupi1

Udupi: ಜಿಲ್ಲಾದ್ಯಂತ ಗ್ರಾಮ ಪಂಚಾಯತ್ ಸೇವೆ ಸ್ತಬ್ಧ, ಕಚೇರಿಗಳು ಬಂದ್… ನೌಕರರ ಮುಷ್ಕರ

ಉಡುಪಿ: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

Udupi: ಮನೆಗೆ ಹೊಸತನ ತರುವ ಕದಿರು; ನವರಾತ್ರಿಯ ವೇಳೆ ನಡೆಯುವ ವಿಶಿಷ್ಟ ಆಚರಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.