Rain: ಶಿಥಿಲಗೊಂಡ ಶಾಲೆಗಳಿಗೆ ಮುಖ್ಯ ಶಿಕ್ಷಕರಿಂದ ರಜೆ ಘೋಷಣೆ
Team Udayavani, Jul 25, 2023, 12:05 PM IST
ಕನಕಗಿರಿ: ಕಳೆದ ಎರಡು ದಿನಗಳಿಂದ ಪಟ್ಟಣದಲ್ಲಿ ಕಾಡುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ಇಲ್ಲಿನ ಕೆಲ ಶಾಲೆಗಳ ಕಟ್ಟಡಗಳು ಶಿಥಿಲಗೊಂಡ ಹಿನ್ನಲೆ ಆಯಾ ಶಾಲೆಯ ಮುಖ್ಯಶಿಕ್ಷಕರಿಂದ ಶಾಲೆಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ‘ಉದಯವಾಣಿ’ ಜೊತೆಗೆ ಮಾತನಾಡಿದ ಕೆಪಿಎಸ್ ಪ್ರೌಡ ಶಾಲೆಯ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ, ಪ್ರೌಡ ಶಾಲೆಯಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆದುಕೊಳ್ಳುತ್ತಿದ್ದು, ಪ್ರೌಡ ಶಾಲೆಯ ಕೆಲವು ಕಟ್ಟಡಗಳು ದುರಸ್ತಿಗೊಂಡ ಹಿನ್ನಲೆ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮುಖ್ಯ ಶಿಕ್ಷಕರ ಹಂತದಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳನ್ನು ಭಾನುವಾರದಂದು ಸರಿದೂಗಿಸಲಾಗುವುದು ಎಂದು ಮಾಹಿತಿ ನೀಡಿದರು.
ಪಟ್ಟಣದ ಮೌಲಾನಾ ಅಜಾದ್, ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ವಿವಿಧ ಶಾಲೆಗಳಿಗೆ ಮುಖ್ಯ ಶಿಕ್ಷಕರು ರಜೆ ಘೋಷಣೆ ಮಾಡಿದ್ದಾರೆ.
ಯಥಾಸ್ಥಿತಿ: ಇಲ್ಲಿನ ಅನುದಾನಿತ ಶಿವ ರುದ್ರಮುನಿ ಪ್ರೌಡ ಹಾಗೂ ಪಿಯು ಕಾಲೇಜು, ಸರ್ಕಾರಿ ಶಾಸಕರ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪದವಿ ಪೂರ್ವ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡಗಳು ಸುರಕ್ಷಿತವಾಗಿದ್ದು ತರಗತಿಗಳು ಯಥಾ ಸ್ಥಿತಿಯಂತೆ ಮುಂದುವರೆಸಲಾಗುತ್ತಿದೆ ಎಂದು ಶಾಲಾ- ಕಾಲೇಜುಗಳ ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್ ತಂಗಡಗಿ
Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ
Minister; ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ
Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.