ಮಳೆಗೆ ಕೊಚ್ಚಿ ಹೋಯಿತು ಅರ್ಹ ಗೆಲುವು: ಎರಡನೇ ಟೆಸ್ಟ್ ಪಂದ್ಯ ಡ್ರಾ, ಭಾರತಕ್ಕೆ ಸರಣಿ ಗೆಲುವು
Team Udayavani, Jul 25, 2023, 12:36 PM IST
ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ಎದುರಿನ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಆಗಿ ವಶಪಡಿಸಿಕೊಳ್ಳಲು ಹೊರಟಿದ್ದ ಭಾರತಕ್ಕೆ ಮಳೆ ಅಡ್ಡಿ ಪಡಿಸಿದೆ. ಎರಡನೇ ಟೆಸ್ಟ್ ಮಳೆಯ ಕಾರಣದಿಂದ ಡ್ರಾಗೊಂಡಿದ್ದು, ಭಾರತವು 1-0 ಅಂತರದಿಂದ ಸರಣಿ ಗೆಲುವು ಸಾಧಿಸಿದೆ.
ಸೋಮವಾರ ದಿನದ ಪಂದ್ಯಕ್ಕೆ ಮಳೆ ಸಂಪೂರ್ಣ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಗೆಲುವಿಗೆ 365 ರನ್ನುಗಳ ಕಠಿನ ಗುರಿ ಪಡೆದ ವೆಸ್ಟ್ ಇಂಡೀಸ್, 4ನೇ ದಿನದಾಟದ ಮುಕ್ತಾಯಕ್ಕೆ 2 ವಿಕೆಟ್ ಕಳೆದುಕೊಂಡು 76 ರನ್ ಮಾಡಿತ್ತು. ಭಾರತವು ಈ ಪಂದ್ಯವನ್ನು ಸುಲಭದಲ್ಲಿ ಗೆಲ್ಲುತ್ತದೆ ಎಂದು ಅಂದಾಜಿಸಲಾಗಿತ್ತು. ಆದರೆ ಮಳೆ ಇದಕ್ಕೆ ಅವಕಾಶ ನೀಡಲಿಲ್ಲ.
ಮೊದಲ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಶತಕ, ಜೈಸ್ವಾಲ್, ರೋಹಿತ್, ಜಡೇಜಾ ಮತ್ತು ಅಶ್ವಿನ್ ಅರ್ಧಶತಕಗಳ ನೆರವಿನಿಂದ 438 ರನ್ ಗಳಿಸಿತ್ತು. ವೆಸ್ಟ್ ಇಂಡೀಸ್ ತಂಡವು ನಾಯಕ ಬ್ರಾತ್ ವೇಟ್ ಅರ್ಧಶತಕದ ಹೊರತಾಗಿಯೂ 255 ರನ್ ಮಾತ್ರ ಗಳಿಸಲು ಶಕ್ತವಾಗಿತ್ತು. ಭಾರತದ ಪರ ಸಿರಾಜ್ ಐದು ವಿಕೆಟ್ ಪಡೆದು ಮಿಂಚಿದ್ದರು.
ಎರಡನೇ ಇನ್ನಿಂಗ್ಸ್ ನಲ್ಲಿ ಬಿರುಸಿನ ಆಟವಾಡಿದ್ದ ಭಾರತ 24 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿ ಡಿಕ್ಲೇರ್ ಮಾಡಿತ್ತು. ಇಶಾನ್ ಕಿಶನ್ ಮತ್ತು ರೋಹಿತ್ ಅರ್ಧಶತಕ ಬಾರಿಸಿದ್ದರು. ಗೆಲುವಿಗೆ 365 ರನ್ನುಗಳ ಗುರಿ ಪಡೆದ ವೆಸ್ಟ್ ಇಂಡೀಸ್ ಎರಡು ವಿಕೆಟ್ ನಷ್ಟಕ್ಕೆ 76 ರನ್ ಮಾಡಿತ್ತು.
ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಟೆಸ್ಟ್ ಕ್ರಿಕೆಟ್ ನಲ್ಲಿ ಇದು ಅವರ ಮೊದಲ ಪಂದ್ಯಶ್ರೇಷ್ಠ ಪ್ರಶಸ್ತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.