![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 25, 2023, 12:41 PM IST
ಹರಿಯಾಣ: ಒಂಬತ್ತು ತಿಂಗಳ ಅವಳಿ ಹೆಣ್ಣು ಮಕ್ಕಳು ನಿಗೂಢವಾಗಿ ಸಾವನ್ನಪಿರುವ ಪ್ರಕರಣದಲ್ಲಿ ಹೆತ್ತ ತಾಯಿಯೇ ನಡೆಸಿರುವ ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ.
ಒಂಬತ್ತು ತಿಂಗಳ ಅವಳಿ ಕಂದಮ್ಮಗಳನ್ನು ಹೆತ್ತ ತಾಯಿಯೇ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿರುವ ಹೃದಯವಿದ್ರಾವಕ ಘಟನೆ ಹರಿಯಾಣದ ದನೋಡಾ ಗ್ರಾಮದಲ್ಲಿ ನಡೆದಿದೆ.
ಘಟನೆ ನಡೆದು ಎರಡು ವಾರಗಳ ಬಳಿಕ ತಾಯಿಯೇ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು ಇದೀಗ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಏನಿದು ಪ್ರಕರಣ:
ಹರಿಯಾಣದ ಜಿಂದ್ನ ದಾನೋದಾ ಗ್ರಾಮದಲ್ಲಿ ಕಳೆದ ಜುಲೈ 12ರಂದು ಪತಿ ಕೆಲಸಕ್ಕೆ ಹೋಗಿದ್ದ ವೇಳೆ ಶೀತಲ್ ಎಂಬ ಯುವತಿ ಒಂಬತ್ತು ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾಳೆ ಬಳಿಕ ಗಂಡನಿಗೆ ಕರೆ ಮಾಡಿ ತಮ್ಮ ಇಬ್ಬರೂ ಮಕ್ಕಳು ಮೃತಪಟ್ಟಿರುವುದಾಗಿ ಹೇಳಿದ್ದಾಳೆ ವಿಚಾರ ತಿಳಿದು ಮನೆಗೆ ಬಂದ ವೇಳೆ ಮನೆಯಲ್ಲಿ ಮುದ್ದು ಮಕ್ಕಳು ಕೊನೆಯುಸಿರೆಳೆದಿದ್ದಾರೆ ಪತ್ನಿ ಬಳಿ ಕೇಳಿದಾಗ ನನಗೂ ಏನೂ ಗೊತ್ತಿಲ್ಲ ಮಲಗಿದ್ದ ಮಕ್ಕಳನ್ನು ಎಬ್ಬಿಸಲು ಹೋದಾಗ ವಿಚಾರ ಬೆಳಕಿಗೆ ಬಂದಿದೆ ಎಂದು ಹೇಳಿದ್ದಾಳೆ, ಪತ್ನಿಯ ಮಾತನ್ನು ನಂಬಿದ ಪತಿ ಮಗುವಿನ ಮರಣೋತ್ತರ ಪರೀಕ್ಷೆ ನಡೆಸದೆ ಶವ ಸಂಸ್ಕಾರ ನಡೆಸಿದ್ದಾನೆ.
ಇದಾಗಿ ಹನ್ನೆರಡು ದಿನಗಳು ಕಳೆಯುವ ವೇಳೆ ಪತ್ನಿ ತನ್ನ ಪತಿ ಬಳಿ ಮಕ್ಕಳನ್ನು ತಾನೇ ಕೊಂಡಿರುವುದಾಗಿ ಹೇಳಿಕೊಂಡಿದ್ದಾಳೆ. ಈ ವಿಚಾರ ಕೇಳುತ್ತಲೇ ಆಘಾತಕ್ಕೆ ಒಳಗಾದ ಪತಿ ಕೂಡಲೇ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾನೆ. ಪೊಲೀಸರು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಮಕ್ಕಳನ್ನು ಯಾಕಾಗಿ ಹತ್ಯೆ ಮಾಡಿರುವುದು ಎಂದು ಮಹಿಳೆ ಹೇಳಲಿಲ್ಲ ಇದರ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: UDUPI; ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಘಟನೆ: ವದಂತಿಗಳನ್ನು ನಂಬದಂತೆ ಎಸ್ ಪಿ ಮನವಿ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.