Shivamogga: ತುಂಗಾ ಸೇತುವೆ ಮೇಲಿಂದ ನದಿಗೆ ಜಿಗಿದ ಯುವಕ; ವಿಡಿಯೋ ವೈರಲ್
ಈ ರೀತಿ ಹುಚ್ಚುತನದಿಂದ ಅವಘಡ ಸಂಭವಿಸುವ ಸಾಧ್ಯತೆ ಇದೆ
Team Udayavani, Jul 25, 2023, 9:42 PM IST
ಶಿವಮೊಗ್ಗ: ಭಾರೀ ಮಳೆಗೆ ನದಿ, ತೊರೆ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ಯುವಕರು ಅಲ್ಲಲ್ಲಿ ಈಜುವುದು, ಸೆಲ್ಫಿ, ರಿಲ್ಸ್ ಮಾಡಲು ಅಪಾಯಕಾರಿ ಸ್ಥಳಗಳಿಗೆ ಮುನ್ನೆಚ್ಚರಿಕೆ ಮೀರಿ ಹೋಗುತ್ತಿರುವುದು ಹೆಚ್ಚಾಗಿದೆ. ಅವಘಡಗಳು ನಡೆಯುತ್ತಿದ್ದರೂ ಕೆಲವರು ಎಚ್ಚೆತ್ತುಕೊಂಡಿಲ್ಲ. ಶಿವಮೊಗ್ಗದ ತುಂಗಾ ಸೇತುವೆ ಮೇಲಿನಿಂದ ಯುವಕನೊಬ್ಬ ಹಾರುತ್ತಿರುವ ವಿಡಿಯೋ ವೈರಲ್ ಆಗಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
ಈತ ಸದಾಜನಜಂಗುಳಿಯಿಂದ ಕೂಡಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಈಜಿಕೊಂಡು ದಡ ಸೇರಿದ್ದಾನೆ. ಹೊಳೆಗೆ ಹಾರುತ್ತಿರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ, ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈತ ಸ್ಥಳೀಯ ವ್ಯಕ್ತಿಯಾಗಿದ್ದು ಗಂಗಪ್ಪ ಎಂದು ಗುರುತಿಸಲಾಗಿದೆ.
ಈತ ಪ್ರತಿ ದಿನ ಇದೇ ರೀತಿ ಮಾಡುತ್ತಿರುವುದು ತಿಳಿದು ಬಂದಿದ್ದು ಈಜು ಬರುವುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ನದಿಯಲ್ಲಿ 60 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು ಈ ರೀತಿ ಹುಚ್ಚುತನದಿಂದ ಅವಘಡ ಸಂಭವಿಸುವ ಸಾಧ್ಯತೆ ಇದೆ.
ಈ ವಿಡಿಯೋ ವೈರಲ್ ಆದ ಮೇಲೆ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಸ್ಥಳಗಳಲ್ಲಿ ತಿಳಿವಳಿಕೆ ಬೋರ್ಡ್ ಅಳವಡಿಸಿ ಸಿಬ್ಬಂದಿ ನೇಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.