BJP ರಾಜ್ಯಗಳ ತಪ್ಪು ನಿಮಗೇಕೆ ಕಾಣಲ್ಲ ?- ಕೇಂದ್ರದ ವಿರುದ್ಧ ಚಾಟಿ ಬೀಸಿದ ಸುಪ್ರೀಂ
Team Udayavani, Jul 26, 2023, 7:28 AM IST
ನವದೆಹಲಿ: ಬಿಜೆಪಿಯೇತರ ರಾಜ್ಯಸರ್ಕಾರಗಳ ತಪ್ಪುಗಳ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರಸರ್ಕಾರ, ಬಿಜೆಪಿ ಆಡಳಿವಿರುವ ರಾಜ್ಯಗಳಲ್ಲಿನ ತಪ್ಪುಗಳನ್ನು ಕಂಡೂ ಮೌನ ವಹಿಸುವುದು ಏಕೆ? ರಾಜ್ಯಗಳ ವಿಚಾರದಲ್ಲಿ ಇಂಥ ನಿಲುವು ಸಲ್ಲದು ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.
ನಾಗಾಲ್ಯಾಂಡ್ನಲ್ಲಿ ಮಹಿಳೆಯರಿಗೆ ಶೇ.33ರ ಮೀಸಲು ಅನ್ವಯಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು ನಾಗಾಲ್ಯಾಂಡ್ ಸರ್ಕಾರ ಹಾಗೂ ಚುನಾವಣೆ ಆಯೋಗಕ್ಕೆ ನಿರ್ದೇಶಿಸಲಾಗಿದೆ. ಆದಾಗ್ಯೂ ನ್ಯಾಯಾಲಯದ ಆದೇಶ ಪಾಲನೆಯಾಗದಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು.
ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರ ನ್ಯಾಯಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿದೆ. ಈ ವೇಳೆ ಆದೇಶ ಪಾಲನೆಯಾಗದ್ದನ್ನು ಗಮನಿಸಿ, ಬಿಜೆಪಿಯೇತರ ರಾಜ್ಯಗಳ ಎಡವಟ್ಟಿಗೆ ತೀಕ್ಷ್ಣ ಕ್ರಮ ಕೈಗೊಳ್ಳುವ ನೀವು, ನಿಮ್ಮದೇ ಪಕ್ಷ ಆಡಳಿತದಲ್ಲಿರುವ ರಾಜ್ಯಗಳ ವಿಚಾರದಲ್ಲಿ ಏಕೆ ಸುಮ್ಮನಿರುತ್ತೀರಿ ಎಂದು ಕೇಂದ್ರವನ್ನು ಪ್ರಶ್ನಿಸಿದ್ದಾರೆ. ಇದೇ ವೇಳೆ ಸಾಂವಿಧಾನಿಕ ನಿಬಂಧನೆಯ ಉಲ್ಲಂಘನೆ ಸಲ್ಲದು ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ
Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ
AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.