‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಬಿಡೆವು; ಕುಯಿಲಾಡಿ

ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹ

Team Udayavani, Jul 26, 2023, 10:29 AM IST

‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಬಿಡೆವು; ಕುಯಿಲಾಡಿ

ಉಡುಪಿ: ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು,  ಶಿಕ್ಷಣ ಮತ್ತು ಸಾಂಸ್ಕೃತಿಕ ನಗರಿ ಉಡುಪಿಯ ಖ್ಯಾತಿಗೆ ಮಸಿ ಬಳಿಯುವ ಪ್ರಯತ್ನದ ಮೂಲಕ ‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಎಂದಿಗೂ ಅವಕಾಶ ನೀಡಲಾರೆವು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಕುಯಿಲಾಡಿ ಈಗಾಗಲೇ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಈ ಸಂಬಂಧವಾಗಿ ಮೂವರು ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದು, ಇದರಿಂದ ಪ್ರಕರಣದ ನಿಖರತೆ ಸಾಬೀತಾಗಿದೆ. ಶಿಕ್ಷಣ ಸಂಸ್ಥೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಅವುಗಳನ್ನು ಸಮಾಜಘಾತುಕ ಶಕ್ತಿಗಳಿಗೆ ನೀಡುವ ಕುಕೃತ್ಯದ ಯೋಜನೆಯ ಮೂಲಕ ಅವರ ಭವಿಷ್ಯವನ್ನು ಹಾಳುಗೆಡಹಲು ರೂಪಿಸಿರುವ ಈ ಹುನ್ನಾರ ಅತ್ಯಂತ ಖಂಡನೀಯ ಎಂದರು.

ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಬಗ್ಗೆ ಗುಮಾನಿ ಇದೆ. ಮೂರು ಮಂದಿ ತಪ್ಪಿತಸ್ಥ ವಿದ್ಯಾರ್ಥಿನಿಯರು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಿಸಿಕೊಂಡಿದ್ದ ವೀಡಿಯೋಗಳನ್ನು ಡಿಲೀಟ್ ಮಾಡಲಾಗಿದೆ ಹಾಗೂ ಈ ಪ್ರಕರಣದಲ್ಲಿ ಇಬ್ಬರು ಯುವಕರು ಕೂಡಾ ಶಾಮೀಲಾಗಿದ್ದಾರೆ ಎಂಬ ವಿಚಾರವನ್ನು ಸಂತ್ರಸ್ತ ವಿದ್ಯಾರ್ಥಿನಿಯರು ಬಹಿರಂಗಪಡಿಸಿರುವುದಾಗಿ ತಿಳಿದುಬಂದಿದೆ. ಇದರ ಬಗ್ಗೆ ಪೊಲೀಸ್ ಇಲಾಖೆ ತನಿಖೆಯ ದಾರಿ ತಪ್ಪಿಸುವ ಅಥವಾ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದರೆ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ರಕರಣದ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ವಿದ್ಯಾರ್ಥಿಗಳೊಂದಿಗೆ ಸೇರಿ ನ್ಯಾಯಕ್ಕಾಗಿ ತೀವ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆಯ ಸಂದೇಶವನ್ನು ನೀಡಿದರು.

ರಾಜ್ಯ ಸರಕಾರ ಮತ್ತು ಗೃಹ ಇಲಾಖೆ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಬಾರದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಈ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ಮಾಡಿದಲ್ಲಿ ಅದರ ಪರಿಣಾಮವನ್ನು ಮುಂದಿನ ದಿನಗಳಲ್ಲಿ ಎದುರಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಅಡಿಕೆ ತೋಟಕ್ಕೆ ಹೋಗಿದ್ದ ವೃದ್ಧೆ ನಾಪತ್ತೆ; ಹಳ್ಳದಲ್ಲಿ ಕೊಚ್ಚಿಹೋಗಿರುವ ಶಂಕೆ

ಟಾಪ್ ನ್ಯೂಸ್

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ನಗರ ಠಾಣೆಯ ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

Udupi: ವೇಶ್ಯಾವಾಟಿಕೆ ಹಿನ್ನೆಲೆ; ಪೊಲೀಸರಿಂದ ರಾತ್ರಿ ಕಾರ್ಯಾಚರಣೆ

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

BBK11: ಬಿಗ್ ಬಾಸ್ ‌ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.