ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಏಕರೂಪ ನಾಗರಿಕ ಸಂಹಿತೆ ಪ್ರಜಾಪ್ರಭುತ್ವಕ್ಕೆ ಅಪಾಯ

Team Udayavani, Jul 26, 2023, 12:08 PM IST

ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ಸಂವಿಧಾನದ ಆಶಯಗಳಿಗೆ ತಕ್ಕಂತೆ ಆದಿವಾಸಿ, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ನ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ನಿಯೋಗದ ಮುಖಂಡರು ಏಕರೂಪ ನಾಗರಿಕ ಸಂಹಿತೆ ಜಾರಿಯಿಂದ ಮುಸ್ಲಿಮರು, ಆದಿವಾಸಿ, ಬುಡಕಟ್ಟು ಹಾಗೂ ಇನ್ನಿತರೆ ಅಲ್ಪಸಂಖ್ಯಾತ ಹಕ್ಕುಗಳಿಗೆ, ಕಾನೂನಿಗೆ ಧಕ್ಕೆಯಾಗುವ ಕುರಿತು ಆತಂಕ ವ್ಯಕ್ತಪಡಿಸಿದರು.

ಹಿಂದಿನ ಕಾನೂನು ಆಯೋಗವು ವೈವಿಧ್ಯತೆ ಇರುವ ಈ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ಕಾರ್ಯಸಾಧುವಲ್ಲ ಎಂದು ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಇದೀಗ ಮತ್ತೆ ಈ ಕುರಿತು ಪರಿಶೀಲಿಸುವಂತೆ ಪ್ರಸಕ್ತ ಕಾನೂನು ಆಯೋಗಕ್ಕೆ ಕೇಂದ್ರ ಸರ್ಕಾರ ತಿಳಿಸಿದೆ. ಅದರಂತೆ ಕಾನೂನು ಆಯೋಗವು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ತಮ್ಮ ಬೋರ್ಡ್‌ನ ವತಿಯಿಂದ ಏಕರೂಪ ನಾಗರಿಕ ಸಂಹಿತೆ ಜಾರಿ ವಿರೋಧಿಸಿ ಒಂದು ಕೋಟಿಗೂ ಹೆಚ್ಚು ಸಹಿ ಸಂಗ್ರಹ ಮಾಡಿ ಕಾನೂನು ಆಯೋಗಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಏಕರೂಪ ನಾಗರಿಕ ಸಂಹಿತೆಯ ಕರಡು ಪ್ರಕಟವಾದ ನಂತರ ಪರಿಶೀಲಿಸಿ ಪ್ರತಿಕ್ರಿಯಿಸಲಾಗುವುದು. ಅಲ್ಪಸಂಖ್ಯಾತರ ಹಕ್ಕುಗಳ ದಮನಕ್ಕೆ ತಮ್ಮ ಸರ್ಕಾರ ಎಂದಿಗೂ ಅವಕಾಶ ನೀಡದು. ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನಗತ್ಯ ವಿವಾದ ಸೃಷ್ಟಿಸುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿಯೋಗದ ಸದಸ್ಯರು ವಕ್ಫ್‌ ಆಸ್ತಿಗಳ ರಕ್ಷಣೆ ಮಾಡುವಂತೆಯೂ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಜಿಹಾದಿಗಳ ಆಟ ನಡೆಯಲು ಬಿಡುವುದಿಲ್ಲ: ಶಿಲ್ಪಾ ಜಿ. ಸುವರ್ಣ

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police

Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು

puttige

Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.