ಮೂರು ಭಾಗಗಳಲ್ಲಿ ತೆರೆಗೆ ಬರಲಿದೆ ಕಮಲ್ – ಶಂಕರ್ “ಇಂಡಿಯನ್”: ಏಕಕಾಲದಲ್ಲಿ ಚಿತ್ರೀಕರಣ
Team Udayavani, Jul 26, 2023, 3:59 PM IST
ಚೆನ್ನೈ: ಭಾರತೀಯ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿಸಿದ್ದ ಕಮಲ್ ಹಾಸನ್ ಅವರ ʼಇಂಡಿಯನ್ʼ ಸಿನಿಮಾದ ಎರಡನೇ ಭಾಗ ಬರುತ್ತಿರುವುದು ಗೊತ್ತೇ ಇದೆ. ಸಿನಿಮಾ ಸಟ್ಟೇರಿದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.
“ಇಂಡಿಯನ್” ಶಂಕರ್ ಮತ್ತು ಕಮಲ್ ಹಾಸನ್ ಅವರ ವೃತ್ತಿಜೀವನದ ವಿಶೇಷ ಸಿನಿಮಾ. ಇದರ ಮುಂದುವರೆದ ಕಥೆಯು ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಕಥೆಯಲ್ಲಿ ಹಲವು ಉಪ ಪ್ಲಾಟ್ಗಳಿವೆ. ಇದು ಎರಡು ಭಾಗಗಳಲ್ಲಿ ಒತ್ತಾಯಪೂರ್ವವಾಗಿ ಮುಕ್ತಾಯ ಕಾಣುವ ಸಿನಿಮಾವಲ್ಲ. ಈ ಸಿನಿಮಾದ ಕಥೆಯ ಅಂತ್ಯಕ್ಕೆ ಮೂರು ಭಾಗಗಳು ಬೇಕಾಗುತ್ತದೆ. 2ನೇ ಭಾಗದ ಕಥೆಯಲ್ಲಿನ ಕೆಲ ಅಂಶಗಳು 3ನೇ ಭಾಗದ ಚಿತ್ರೀಕರಣವನ್ನು ಏಕಕಾಲದಲ್ಲಿ ಮಾಡುವಂತೆ ಮಾಡಿದೆ ಎಂದು ಚಿತ್ರತಂಡದ ಆಪ್ತ ಮೂಲವೊಂದು ಹೇಳಿರುವುದಾಗಿ “ಪಿಂಕ್ ವಿಲ್ಲಾ” ವರದಿ ಮಾಡಿದೆ.
ಎಡಿಟ್ ಟೇಬಲ್ನಲ್ಲಿ ʼʼಇಂಡಿಯನ್” ಸಿನಿಮಾದ 2ನೇ ಭಾಗವನ್ನು ಎರಡು ಭಾಗಗಳಾಗಿ ಚಿತ್ರೀಕರಿಸುವ ಅಂದರೆ ಪಾರ್ಟ್ -3 ಯನ್ನು ಮಾಡುವ ನಿರ್ಧಾರವನ್ನು ಕೈಗೊಳ್ಳಲಾಯಿತೆಂದು ವರದಿ ತಿಳಿಸಿದೆ.
ಶಂಕರ್ ಅವರ ಬಳಿ 6 ಗಂಟೆಗಳ “ಇಂಡಿಯನ್-2” ತುಣುಕುಗಳಿತ್ತು. ಅದನ್ನು ಇಡೀ ಚಿತ್ರತಂಡ ನೋಡಿದ ಮೇಲೆ ಇದರಲ್ಲಿ ಮತ್ತೊಂದು ಸೀಕ್ವೆಲ್ ಮಾಡುವ ಅಂಶಗಳಿತ್ತು. ಇದಾದ ಬಳಿಕ ಶಂಕರ್ ಅವರು ಕಥೆಯಲ್ಲಿ ಬದಲಾವಣೆ ಮಾಡಿಕೊಂಡು, 2ನೇ ಭಾಗದಲ್ಲಿ ಮೂರನೇ ಭಾಗವನ್ನು ಸೇರಿಸಿ, ಶೂಟ್ ಮಾಡಿದರು. ಮೊದಲಿಗೆ “ಇಂಡಿಯನ್-2” ಸಿನಿಮಾದ ಕಥೆ ಸರಿಯಾದ ರೀತಿಯಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಲು ಆಗುತ್ತಿರಲ್ಲಿಲ್ಲ. ಸಿನಿಮಾದ ದೃಶ್ಯ ಕ್ಲೈಮ್ಯಾಕ್ಸ್ ಗೆ ಹೊಂದಿಕೆಯಾಗುತ್ತಿರಲಿಲ್ಲ. 2ನೇ ಭಾಗದ ಕ್ಲೈಮ್ಯಾಕ್ಸ್ ಮೂರನೇ ಭಾಗದ ಕಥೆಯ ಆರಂಭಕ್ಕೆ ಕಾರಣವಾಗುತ್ತದೆ. ಈಗಾಗಲೇ 2ನೇ ಭಾಗ ಮುಕ್ತಾಯ ಕಂಡಿದ್ದು, ಮೂರನೇ ಭಾಗದ ಚಿತ್ರೀಕರಣ ಶೇ.75 ರಷ್ಟು ಮುಗಿದಿದೆ. ʼಇಂಡಿಯನ್ -2, & 3 ಒಂದು ವರ್ಷದ ಅಂತರದಲ್ಲಿ ತೆರೆಗೆ ಬರಲಿದೆ ಎಂದು ವರದಿ ತಿಳಿಸಿದೆ.
ʼಇಂಡಿಯನ್-2ʼ ಸಿನಿಮಾದಲ್ಲಿ ಕಮಲ್ ಹಾಸನ್ ,ಕಾಜಲ್ ಅಗರ್ವಾಲ್ , ರಾಕುಲ್ ಪ್ರೀತ್ ಸಿಂಗ್ ಹಾಗೂ ಮುಂತಾದ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಮುಂಇನ ವರ್ಷದ ಆರಂಭದಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.