ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ- ಬಿ.ಆರ್. ಪಾಟೀಲ್ ಪತ್ರದ ಬಗ್ಗೆ ಚರ್ಚೆ ಸಾಧ್ಯತೆ
Team Udayavani, Jul 27, 2023, 7:19 AM IST
ಬೆಂಗಳೂರು: ಸಚಿವರ ಕಾರ್ಯವೈಖರಿ ಹಾಗೂ ಅನುದಾನ ನೀಡಲು ವಿಳಂಬ ಮಾಡಲಾಗುತ್ತಿದೆ ಎಂಬ ಶಾಸಕರ ಅಸಮಾಧಾನದ ನಡುವೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ ಗುರುವಾರ ನಡೆಯಲಿದೆ.
ನಗರದ ಖಾಸಗಿ ಹೊಟೇಲ್ನಲ್ಲಿ ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯು ಹಲವು ರೀತಿಗಳಲ್ಲಿ ಮಹತ್ವ ಪಡೆದುಕೊಂಡಿದೆ. ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬರೆದಿದ್ದಾರೆ ಎನ್ನಲಾದ ಪತ್ರ ನಕಲಿಯೋ- ಅಸಲಿಯೋ ಎಂಬ ವಿವಾದ ಸೃಷ್ಟಿಸಿದ್ದು, ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇನ್ನೊಂದೆಡೆ ಇದು ನಕಲಿ ಪತ್ರವೆಂದು ಸಾರಸಗಟಾಗಿ ತಿರಸ್ಕರಿಸಿರುವ ಪಾಟೀಲ್, ತಾನು ಶಾಸಕಾಂಗ ಪಕ್ಷದ ಸಭೆ ಕರೆಯಬೇಕೆಂದು ಪತ್ರ ಬರೆದಿದ್ದೇನೆಯೇ ಹೊರತು ಸಚಿವರ ವಿರುದ್ಧ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೂ ಈ ಬೆಳವಣಿಗೆ ಸರಕಾರ ಹಾಗೂ ಪಕ್ಷದ ವಲಯದಲ್ಲಿ ಸಾಕಷ್ಟು ತಳಮಳ ಸೃಷ್ಟಿಸಿದೆ. ಇದು ಸಭೆಯಲ್ಲಿ ಪ್ರಸ್ತಾವವಾಗುವ ಸಾಧ್ಯತೆ ಇದೆ.
ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಶಾಸಕರು ತಮ್ಮ ಕ್ಷೇತ್ರಗಳ ಸಮಸ್ಯೆಗಳು, ಅನುದಾನ, ವರ್ಗಾವಣೆ ವಿಚಾರಗಳನ್ನು ಚರ್ಚಿಸಬೇಕೆಂದಿದ್ದರು. ಆದರೆ, ಸಮಯದ ಅಭಾವದ ಹಿನ್ನೆಲೆಯಲ್ಲಿ ಸಾಧ್ಯವಾಗಿರಲಿಲ್ಲ. ಹೀಗಾಗಿ ಶಾಸಕರಿಗೆ ಇದು ಮುಕ್ತ ವೇದಿಕೆಯಾಗಲಿದೆ.
ಕೆಲವರ ಗೈರು ಸಾಧ್ಯತೆ
ಇನ್ನೊಂದೆಡೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಶಾಸಕರು ಕ್ಷೇತ್ರದಲ್ಲೇ ಇದ್ದು ಪರಿಸ್ಥಿತಿ ನಿರ್ವಹಿಸಬೇಕೆಂದು ಹೇಳುತ್ತಿರುವುದರಿಂದ ವಿಪರೀತ ಮಳೆ ಬಿದ್ದಿರುವ ಜಿಲ್ಲೆಗಳ ಶಾಸಕರು ಸಭೆಗೆ ಹಾಜರಾಗುವ ಸಾಧ್ಯತೆಗಳು ಕಡಿಮೆಯೆಂದು ಹೇಳಲಾಗುತ್ತಿದೆ.
ಶಾಸಕರ ಹೆಸರಲ್ಲಿ ನಕಲಿ ಪತ್ರ
ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯಮಂತ್ರಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಶಾಸಕ ಬಿ.ಆರ್.ಪಾಟೀಲ್ ಅವರೇ ನಕಲಿ ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ, ಇಂತ ಮಂತ್ರಿ ಎಂದು ಹೆಸರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.