ಮಗುಚಿ ಬಿದ್ದ ಲಾರಿ: ರಾಶಿ ಬಿದ್ದು ಟೊಮ್ಯಾಟೋ ಹೆಕ್ಕಿದ ಜನ
Team Udayavani, Jul 27, 2023, 11:23 AM IST
ರಾಮನಗರ: ತಾಲೂಕಿನ ಸಂಕಲಗೆರೆ ಗೇಟ್ ಬಳಿ ಮಧ್ಯರಾತ್ರಿಯಲ್ಲಿ ಟೊಮ್ಯಾಟೋ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.
ರಸ್ತೆಯಲ್ಲಿ ಚೆಲ್ಲಾಡುತ್ತಿದ್ದ ಟಮೋಟೊವನ್ನು ಸಿಕ್ಕ ಸಿಕ್ಕವರು ತುಂಬಿಕೊಂಡು ಹೋಗುತ್ತಿದ್ದು, ತಕ್ಷಣ ಬೇರೊಂದು ವಾಹನಕ್ಕೆ ತುಂಬಿ ಸಾಗಿಸಲಾಗಿದೆ.
ಕಾಡಾನೆ ದಾಳಿ
ಕಾಡಾನೆಗಳ ದಾಳಿಗೆ ರೈತರು ಬೆಳೆದ ಟೊಮ್ಯಾಟೋ ಬೆಳೆಗೆ ಹಾನಿಯಾಗಿರುವ ಘಟನೆ ಚನ್ನಪಟ್ಟಣದ ತಗಚಗೆರೆ, ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನವೀನ್ ಮರಿಸ್ವಾಮಿ ಎಂಬುವರಿಗೆ ಸೇರಿದ್ದ ಟೊಮ್ಯಾಟೋ ಬೆಳೆಯ ಮೇಲೆ ದಾಳಿ ಮಾಡಿದ ಕಾಡಾನೆಗಳ ಹಿಂಡು ಲಕ್ಷಾಂತರ ಮೌಲ್ಯದ ಬೆಳೆ ಹಾನಿ ಮಾಡಿದೆ.
ಟೊಮ್ಯಾಟೋಗೆ ಬಂಪರ್ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ರೈತರು ಒಳ್ಳೆಯ ಆದಾಯ ಪಡೆಯುವ ನಿರೀಕ್ಷೆ ಹೊಂದಿದ್ದರು. ಆದರೆ ಇದೀಗ ಕಾಡಾನೆ ಹಾವಳಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ತಗಚಗೆರೆ ಗ್ರಾಮದ ಶಶಿಧರ ಎಂಬುವರಿಗೆ ಸೇರಿದ ತೆಂಗಿನ ಮರಗಳು ಕಾಡಾನೆ ದಾಳಿಗೆ ನಾಶವಾಗಿವೆ. ದೊಡ್ಡದಾದ ಐದು ತೆಂಗಿನ ಮರಗಳು, 10 ಕ್ಕೂ ಹೆಚ್ಚು ಸಸಿಗಳಿಗೆ ಹಾನಿಯಾಗಿದೆ. ಪಕ್ಕದ ತೋಟದಲ್ಲಿಯೂ ತೆಂಗು, ಟೊಮ್ಯಾಟೊ ಬೆಳೆ ನಾಶವಾಗಿದೆ.
ಕಳೆದೊಂದು ತಿಂಗಳಿನಿಂದ ಈ ಭಾಗದಲ್ಲಿ ನಿರಂತರ ಕಾಡಾನೆ ದಾಳಿಯಾಗುತ್ತಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಅಸಹಾಯಕರಾಗಿದ್ದಾರೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY-ELECTION: ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ
By Election: ಎಚ್ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್
BY-Election: ಚನ್ನಪಟ್ಟಣದಲ್ಲಿ ಕಾಂಗ್ರೆಸ್ನ ತಂಡದಿಂದ ನಿಖಿಲ್ಗೆ ಬೆಂಬಲ: ಅಶೋಕ್
Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.