400 ಜನರಿಗೆ ಇರುವುದೊಂದೇ ಶೌಚಾಲಯ; ಸೋರುವ ಮೂರು ಕೊಠಡಿಗಳು
Team Udayavani, Jul 27, 2023, 5:05 PM IST
ಹುಬ್ಬಳ್ಳಿ: ಸರಿಸುಮಾರು 380 ವಿದ್ಯಾರ್ಥಿಗಳು, 20 ಜನ ಬೋಧಕೇತರ ಸಿಬ್ಬಂದಿ ಸೇರಿ ಒಟ್ಟು 400 ಜನರಿಗೆ ಇರುವುದು ಒಂದೇ ಶೌಚಾಲಯ. ಶಾಲಾ ಕಟ್ಟಡದ ಒಂದು ಭಾಗ ಶಿಥಿಲಾವಸ್ಥೆಯಲ್ಲಿದ್ದರೆ, ಮೂರು ಕೊಠಡಿಗಳು ಸೋರುತ್ತಿವೆ. ಸತತ ಮಳೆಯಿಂದಾಗಿ ಏನಾಗುವುದೋ ಎಂಬ ಆತಂಕದಲ್ಲಿಯೇ ವಿದ್ಯಾರ್ಥಿಗಳು, ಶಿಕ್ಷಕರು-ಸಿಬ್ಬಂದಿ ದಿನದೂಡುವಂತಾಗಿದೆ.
ಇದು, ಹಳೇ ಹುಬ್ಬಳ್ಳಿ ಆನಂದ ನಗರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ-ಪ್ರೌಢಶಾಲೆ ಕಥೆ ವ್ಯಥೆಯಾಗಿದೆ. ಶಾಲೆಯಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ನಡೆಯುತ್ತಿದ್ದು, ಮೂರು ಕೊಠಡಿಗಳು ಸೋರುತ್ತಿವೆ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಕೊಠಡಿಗಳ ಕೊರತೆ ಎದುರಾಗಿದೆ. ಶಾಲಾ ಕಟ್ಟಡದ ಮೊದಲನೇ ಮಹಡಿಯಲ್ಲಿರುವ 8ನೇ ತರಗತಿಯ ಕೊಠಡಿ ಸೋರುತ್ತಿದ್ದರೆ, ಕೆಳಭಾಗದ ಎರಡು ಕೊಠಡಿಗಳು ಸಹ ಸೋರುತ್ತಿವೆ.
ಶಾಲೆಯ ಮೇಲ್ಭಾಗದಲ್ಲಿ ಸೋರುತ್ತಿದ್ದು ಗೋಡೆಯ ಮುಖಾಂತರ ಹಾಗೂ ಮೇಲ್ಭಾಗದಿಂದ ಕೊಠಡಿಗಳಲ್ಲಿ ನೀರು ಬರುತ್ತಿದ್ದು ಇದರಿಂದ ಶಾಲೆಯ ಈ ಮೂರು ತರಗತಿಯ ಮಕ್ಕಳನ್ನು ಬೇರೆ ಕೊಠಡಿಗಳಿಗೆ ಸ್ಥಳಾಂತರಿಸಿ ತರಗತಿ ನಡೆಸಲಾಗುತ್ತಿದೆ.
ಒಂದೇ ಶೌಚಾಲಯ: ಶಾಲೆಯಲ್ಲಿ ಒಂದೇ ಶೌಚಾಲಯ ಇರುವುದರಿಂದ ತುಂಬಾ ಸಮಸ್ಯೆ ಆಗಿದೆ. ಬಾಲಕಿಯರು ಹಾಗೂ ಮಹಿಳಾ ಸಿಬ್ಬಂದಿ ಶೌಚಾಲಯ ಬಳಸುತ್ತಿದ್ದು, ಬಾಲಕರು, ಪುರುಷ ಸಿಬ್ಬಂದಿ ಅನ್ಯಮಾರ್ಗ ಕಂಡುಕೊಳ್ಳುವ ಸ್ಥಿತಿ ಈ
ಶಾಲೆಯದ್ದಾಗಿದೆ. ಈಗಾಗಲೇ ಶಿಕ್ಷಣ ಇಲಾಖೆಗೆ ಶಾಲೆ ಸೋರುತ್ತಿರುವ ಕುರಿತು ಹಾಗೂ ಒಂದೇ ಶೌಚಾಲಯ ಇರುವ ಕುರಿತು ಗಮನಕ್ಕೆ ತರಲಾಗಿದ್ದು, ಇದುವರೆಗೂ ಯಾವುದೇ ಕ್ರಮ ಇಲ್ಲವಾಗಿದೆ.
ಆನಂದನಗರದ ಸರಕಾರಿ ಪ್ರೌಢಶಾಲೆಯಲ್ಲಿ ನಾಲ್ಕು ಕೊಠಡಿಗಳು ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿವೆ. ಇದರಿಂದ ಶಾಲೆಯಲ್ಲಿರುವ ನಾಲ್ಕು ಕೊಠಡಿಗಳಲ್ಲಿ ನಡೆಯುತ್ತಿರುವ ತರಗತಿಯನ್ನು ಬೇರೆಡೆ ವರ್ಗಾಯಿಸಿದ್ದು, ಅಲ್ಲಿಯೇ ನಡೆಯುತ್ತಿದ್ದ ಅಂಗನವಾಡಿ ಕೇಂದ್ರವನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಈಗಾಗಲೇ ಶಿಥಿಲಾವಸ್ಥೆಗೊಂಡಿರುವ ಕೊಠಡಿಗಳ ತೆರವುಗೊಳಿಸಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಹಳೇಹುಬ್ಬಳ್ಳಿ ಆನಂದ ನಗರದಲ್ಲಿರುವ ಎರಡು ಉರ್ದು ಶಾಲೆಗಳ ಕೊಠಡಿಗಳು ಸೋರುತ್ತಿರುವುದು ಹಾಗೂ ಶಿಥಿಲಾವ್ಯಸ್ಥೆಯಲ್ಲಿರುವುದನ್ನು ಗುರುತಿಸಲಾಗಿದ್ದು, ಅವುಗಳನ್ನು ತೆರವು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇನ್ನು ಕ್ಷೇತ್ರದಲ್ಲಿನ ಶಾಲೆಗಳಿಗೆ ಸುಣ್ಣ-ಬಣ್ಣ ಮಾಡಿಸುವುದು ಬಿಟ್ಟರೆ ಕ್ಷೇತ್ರದಲ್ಲಿ ಶಿಥಿಲಾವಸ್ಥೆಗೊಂಡಿರುವ ಶಾಲೆಗಳು ಕಂಡುಬಂದಿಲ್ಲ.
ಚನ್ನಪ್ಪ ಗೌಡರ,
ಶಹರ ಕ್ಷೇತ್ರದ ಕ್ಷೇತ್ರ ಶಿಕ್ಷಣಾಧಿಕಾರಿ
ಬಸವರಾಜ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.