ಸಂಘ ಶಿಕ್ಷಾ ವರ್ಗ ನವೀಕರಣಕ್ಕೆ ಚಿಂತನೆ

ಶಿಬಿರದ ಅವಧಿ ಕಡಿತಕ್ಕೆ ಆರ್‌ಎಸ್‌ಎಸ್‌ ವಲಯದಲ್ಲಿ ಚರ್ಚೆ- ದಂಡದ ಗಾತ್ರ ಬದಲಿಸಲೂ ಚಿಂತನೆ

Team Udayavani, Jul 28, 2023, 7:51 AM IST

RSS MARCH

ನಾಗ್ಪುರ: ಮುಂದಿನ ವರ್ಷ ವಿಜಯದಶಮಿಯಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್‌)ವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ತನ್ನ ದಶಕಗಳ ಹಳೆಯ ತರಬೇತಿ ವ್ಯವಸ್ಥೆಯನ್ನು ನವೀಕರಿಸಲು ಸಂಘ ಚಿಂತನೆ ನಡೆಸುತ್ತಿದೆ.

ಈ ತರಬೇತಿ ಶಿಬಿರವನ್ನು ಆಫೀಸರ್ ಟ್ರೈನಿಂಗ್‌ ಕ್ಯಾಂಪ್‌(ಒಟಿಸಿ) ಅಥವಾ ಸಂಘ ಶಿಕ್ಷಾ ವರ್ಗ ಎಂದು ಕರೆಯಲಾಗುತ್ತದೆ. ಇನ್ನೊಂದೆಡೆ, ಆರ್‌ಎಸ್‌ಎಸ್‌ ಸ್ವಯಂ ಸೇವಕರು ಉಪಯೋಗಿಸುವ ಸಾಂಪ್ರದಾಯಿಕ ದಂಡ(ಬಿದಿರಿನ ದೊಣ್ಣೆ)ದ ಗಾತ್ರವನ್ನು ತಗ್ಗಿಸುವ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ. ಜು.13ರಿಂದ 15ರವರೆಗೆ ಊಟಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆಗಳು ಜರುಗಿದವು. ಈ ವರ್ಷ ನಡೆಯಲಿರುವ ಕೇಂದ್ರೀಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಮೊದಲನೇ ವರ್ಷ ಮತ್ತು ಎರಡನೇ ವರ್ಷದ ಶಿಬಿರ(ಒಟಿಸಿ) ಗಳನ್ನು ತಲಾ 20 ದಿನಗಳು ಹಾಗೂ ಮೂರನೇ ವರ್ಷದ ಶಿಬಿರವನ್ನು ನಾಗ್ಪುರದಲ್ಲಿ 25 ದಿನಗಳ ಕಾಲ ನಡೆಸಲಾಗುತ್ತದೆ. ಈ ಅವಧಿಯನ್ನು ಮೊದಲನೇ ವರ್ಷ ಮತ್ತು ಎರಡನೇ ವರ್ಷದಲ್ಲಿ ತಲಾ 15 ದಿನಗಳು ಹಾಗೂ ಮೂರನೇ ವರ್ಷದ ಶಿಬಿರವನ್ನು 20 ದಿನಗಳಿಗೆ ಇಳಿಸಲು ಚಿಂತನೆ ನಡೆದಿದೆ.

ಮತ್ತೂಂದಡೆ, ಪ್ರಸ್ತುತ ಸಾಂಪ್ರದಾಯಿಕ ದಂಡ 5.3 ಅಡಿ ಗಾತ್ರವಿದೆ. ಇದನ್ನು “ಯಶ್ತಿ”‘ ಎಂದು ಕರೆಯುವ ಸುಮಾರು 3 ಅಡಿ ಉದ್ದದ ದಂಡಕ್ಕೆ ಇಳಿಸಲು ಯೋಜಿಸಲಾಗುತ್ತಿದೆ. ಕೆಲವು ವರ್ಷಗಳ ಹಿಂದೆ, ಸಮವಸ್ತ್ರದಲ್ಲಿ ಬದಲಾವಣೆ ತರಲಾಗಿ, ಪ್ರಸ್ತುತ ಪ್ಯಾಂಟ್‌ಗಳನ್ನು ಬಳಸಲಾಗುತ್ತಿದೆ.

ಹೆಚ್ಚಿನ ಸಂಘ ಶಿಕ್ಷಾ ವರ್ಗಗಳು ಏಪ್ರಿಲ್‌ನಿಂದ ಜೂನ್‌ವರೆಗೆ ನಡೆಯುತ್ತದೆ ಮತ್ತು ಕೆಲವು ಚಳಿಗಾಲದಲ್ಲೂ ನಡೆಯುತ್ತದೆ. ಈ ವರ್ಷ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಶಿಬಿರಗಳನ್ನು ನಡೆಸಲಾಗಿದ್ದು, 20,000ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದಿದ್ದಾರೆ.

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.