ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ದೇವಿಯ ಅದ್ದೂರಿ ಜಲದಿ ಜಾತ್ರೆ
Team Udayavani, Jul 27, 2023, 9:42 PM IST
ಕೊರಟಗೆರೆ: ತಾಲೂಕಿನ ಕಸಬಾ ಹೋಬಳಿಯ ಬೋಡಬಂಡೇನಹಳ್ಳಿಯ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವವು 9 ಹಳ್ಳಿಯ ಗ್ರಾಮಸ್ಥರಿಂದ ಬುಧವಾರ ಅದ್ಧೂರಿಯಾಗಿ ನಡೆಯಿತು.
ಇತಿಹಾಸ ಪ್ರಸಿದ್ದ ಬೋಡಬಂಡೇನಹಳ್ಳಿಯ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಮೂರು ವರ್ಷಕ್ಕೋಮ್ಮೆ ನಡೆಯಲಿದೆ, ಸುತ್ತ ಮುತ್ತಲಿನ 9 ಹಳ್ಳಿಯ ಗ್ರಾಮಸ್ಥರ ಗ್ರಾಮದೇವತೆಯಾಗಿದ್ದು, ಅಷಾಡ ಮಾಸದಲ್ಲಿ ಗಂಡನ ಮನೆಯಿಂದ ತವರು ಮನೆಗೆ ಹೆಣ್ಣುಮಕ್ಕಳು ಬಂದು ಕುಟುಂಬದವರೊಂದಿಗೆ ಶ್ರೀ ಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಣೆ ಮಾಡುತ್ತಾರೆ.
ಜಾತ್ರೆಯ ವಿಶೇಷವೆಂದರೆ ೯ಹಳ್ಳಿಗಳಿಂದ ಹೆಣ್ಣು ಮಕ್ಕಳು ಆರತಿಗಳನ್ನು ಹೊತ್ತು ತಂದು ಶ್ರೀ ಚೌಡೇಶ್ವರಿ ತಾಯಿಗೆ ಆರತಿ ಬೆಳಗಿ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಬೇಡಿಕೊಳ್ಳುವುದು ಇಲ್ಲಿನ ಜಾತ್ರೆಯ ಆಚರಣೆಯ ವಿಶೇಷ.
ಶ್ರೀ ಚೌಡೇಶ್ವರಿ ದೇವಲಾಯದ ಅರ್ಚಕ ಮಾತನಾಡಿ, ಬೋಡಬಂಡೇನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀಚೌಡೇಶ್ವರಿಯು ಸುತ್ತಮುತ್ತಲಿನ ೯ ಹಳ್ಳಿಯ ಗ್ರಾಮದೇವತೆ, ಈ ದೇವಿಗೆ ಎಲ್ಲಾ ಗ್ರಾಮಸ್ಥರು ಒಟ್ಟಾಗಿ ಮೂರು ವರ್ಷಕ್ಕೋಮ್ಮೆ ಜಾತ್ರೆಯನ್ನು ಅದ್ಧೂರಿಯಾಗಿ ಮಾಡಲಿದ್ದು ಅದರಲ್ಲೂ ಹೆಚ್ಚಾಗಿ ಹೆಣ್ಣುಮಕ್ಕಳು ತಮ್ಮ ಮನೆಯಿಂದ ಆರತಿ ಹೊತ್ತು ತಂದು ತಾಯಿಗೆ ಬೆಳಗುತ್ತಾರೆ ಊರಿನ ಗ್ರಾಮಸ್ಥರು ವಿಶೇಷ ಪೂಜೆಯನ್ನು ಸಲ್ಲಿಸುವುದರ ಮುಖಾಂತರ ತಮ್ಮ ಕಷ್ಟಗಳನ್ನು ತಾಯಿ ಬಳಿ ಹೇಳಿಕೊಳ್ಳುತ್ತಾರೆ, ಆ ತಾಯಿಯು ಸಹ ಭಕ್ತರ ಕಷ್ಟವನ್ನು ನೆರವೇರಿಸುತ್ತಾ ಬಂದಿದ್ದಾಳೆ ಈ ಭಾಗದ ರೈತರು ಉತ್ತಮ ಫಸಲು ಕಾಣಲು ದೇವಿಯ ಆಶೀರ್ವಾದವೇ ಬಹುಮುಖ್ಯ ಕಾರಣ ಎಂದು ಹೇಳಿದರು.
9 ಹಳ್ಳಿಯ ಗ್ರಾಮಸ್ಥರೆಲ್ಲಾ ಸೇರಿ 3 ವರ್ಷಕ್ಕೊಮ್ಮೆ ಶ್ರೀಚೌಡೇಶ್ವರಿ ದೇವಿಯ ಜಾತ್ರೆಯನ್ನು ಹಿರಿಯರ ಮಾರ್ಗದರ್ಶನದೊಂದಿಗೆ ಅದ್ದೂರಿಯಾಗಿ ಮಾಡಿಕೊಂಡು ಬರುತ್ತಿದ್ದೇವೆ, ೯ ಗ್ರಾಮಗಳ ಗ್ರಾಮದೇವತೆಯಾಗಿದ್ದು ಎಲ್ಲರಿಗೂ ತಾಯಿ ಆಶೀರ್ವಾದವನ್ನು ಕರುಣಿಸುತ್ತಾ ಬರುತ್ತಿದ್ದಾಳೆ ಎಂದು ಸುತ್ತೂರಿನ ಹಿರಿಯ ಗೌಡರು ತಿಳಿಸಿದರು.
ಜಲದಿ ಜಾತ್ರಾ ಮಹೋತ್ಸವದ ವಿಶೇಷ ಪೂಜೆ ವೇಳೆ ಸುತ್ತಮುತ್ತಲಿನ ಒಂಬತ್ತು ಹಳ್ಳಿಯ ಮುಖಂಡರು,ಗೌಡರು, ಗ್ರಾಮಸ್ಥರು, ರೈತರು, ಮಹಿಳೆಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ
Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು
Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ
Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.