ಮಹಾಲಿಂಗಪುರ: ಅಕ್ರಮ ನಾಡಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಬಂಧನ


Team Udayavani, Jul 27, 2023, 10:05 PM IST

1-sadd

ಮಹಾಲಿಂಗಪುರ: ಸರ್ಕಾರದ ಪರವಾಣಿಗೆ ಇಲ್ಲದೇ ಅಕ್ರಮವಾಗಿ ನಾಡಪಿಸ್ತೂಲ್ ಹೊಂದಿದ್ದ ವ್ಯಕ್ತಿಯ ಮನೆ ಮೇಲೆ, ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿ ನಾಡಪಿಸ್ತೂಲ್ ವಶಪಡಿಸಿಕೊಂಡು ವ್ಯಕ್ತಿಯನ್ನು ಬಂಧಿಸುವಲ್ಲಿ ಮಹಾಲಿಂಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಮೀಪದ ಮಾರಾಪೂರ ಗ್ರಾಮದ ಅವ್ವಪ್ಪ ಹಣಮಂತ ತಂಬೂರಿ ಬಂಧಿತ ವ್ಯಕ್ತಿ. ಸರ್ಕಾರದ ಪರವಾನಿಗೆ ಇಲ್ಲದೇ ತನ್ನ ಮನೆಯಲ್ಲಿ ಕಂಟ್ರಿ ಪಿಸ್ತೂಲ್ ಇಟ್ಟುಕೊಂಡಿದ್ದ ಖಚಿತ ಮಾಹಿತಿಯಂತೆ ಬಾಗಲಕೋಟೆ ಎಸ್‌ಪಿ, ಜಮಖಂಡಿ ಡಿವೈಎಸ್‌ಪಿ ಶಾಂತವೀರ.ಇ ಹಾಗು ಬನಹಟ್ಟಿ ಸಿಪಿಆಯ್ ಆಯ್.ಎಂ.ಮಠಪತಿ ಅವರ ಮಾರ್ಗದರ್ಶನದಲ್ಲಿ ಮಹಾಲಿಂಗಪುರ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರು ತಮ್ಮ ಸಿಬಂದಿಯೊಂದಿಗೆ ಮಾರಾಪೂರ ಗ್ರಾಮದಲ್ಲಿನ ಅವ್ವಪ್ಪ ಹಣಮಂತ ತಂಬೂರಿ ಮನೆಯ ಮೇಲೆ ದಾಳಿ ಮಾಡಿ, ವಿಚಾರಣೆಗೆ ಒಳಪಡಿಸಿದಾಗ 3-4 ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ರೇಲ್ವೆ ಸ್ಷೇಷನ್ ಹೊರಗೆ ಯಾರೋ ಒಬ್ಬನಿಂದ ಖರೀದಿ ಮಾಡಿಕೊಂಡು ಬಂದಿರುವದಾಗಿ ತಿಳಿದು ಬಂದಿದೆ.

ದಾಳಿಯ ವೇಳೆ ಅವ್ವಪ್ಪ ಹಣಮಂತ ತಂಬೂರಿ ಮನೆಯಲ್ಲಿದ್ದ ಒಂದು ನಾಡ ಪಿಸ್ತೂಲ್, ಎರಡು ಜೀವಂತ ಗುಂಡುಗಳು, ಒಂದು ಏರಗನ್ ನಮೂನೆಯದು, ಒಂದು ಪೋಲ್ಡೇಬಲ್ ಲಾಂಗ್, ಕಟ್ಟಿಗೆ ಹಿಡಿಕೆ ಇರುವ ಮತ್ತೊಂದು ಲಾಂಗ್, ಪಿಸ್ತೂಲು ಹಾಗೂ ಗುಂಡುಗಳನ್ನು ಹಾಕಿಟ್ಟ ಪ್ಲಾಸ್ಟಿಕ್ ಚೀಲ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ನಾಡಪಿಸ್ತೂಲ್ ಹೊಂದಿದ ಆರೋಪಿ ಬಂಧನ ಮತ್ತು ಪಿಸ್ತೂಲ್ ವಶಪಡಿಸಿಕೊಂಡ ಕಾರ್ಯಾಚರಣೆಯಲ್ಲಿ ಮಹಾಲಿಂಗಪುರ ಠಾಣಾಧಿಕಾರಿ ಪ್ರವೀಣ ಬೀಳಗಿ ಅವರ ಜೊತೆಗೆ ಎಎಸ್‌ಆಯ್ ಎಸ್.ಬಿ.ಜೈನರ್, ಜೆ.ಜಿ.ಪಾಟೀಲ, ಎಸ್.ಡಿ.ಬಾರಿಗಿಡದ, ಆರ್.ಎನ್.ತೋಳಮಟ್ಟಿ, ಬಿ.ಜಿ.ದೇಸಾಯಿ, ಬಿ.ಪಿ.ಹಡಪದ, ಎಂ.ಎಸ್.ಕನಶೆಟ್ಟಿ ಅವರ ಕಾರ್ಯವನ್ನು ಮೆಚ್ಚಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.