ಮಲೇರಿಯಾ: 48ರಲ್ಲಿ 21 ಪ್ರಕರಣ ಹೊರ ರಾಜ್ಯದ್ದು

ಹೊರ ಜಿಲ್ಲೆಗಳಲ್ಲಿ ಹೆಚ್ಚಳ; ಕರಾವಳಿಯಲ್ಲಿ ವಿಶೇಷ ನಿಗಾ

Team Udayavani, Jul 28, 2023, 7:50 AM IST

DENGUE

ಮಂಗಳೂರು: ಒಡಿಶಾ, ಝಾರ್ಖಂಡ್‌, ಬಿಹಾರ ಸಹಿತ ಹೊರ ರಾಜ್ಯಗಳಲ್ಲಿ ಮಲೇರಿಯಾ ಪ್ರಕರಣಗಳು ಏರಿಕೆಯಾ ಗುತ್ತಿದ್ದು, ಅಲ್ಲಿಂದ ರಾಜ್ಯ ಕರಾವಳಿಗೆ ಬರುವ ಕಾರ್ಮಿಕರಲ್ಲೂ ಜ್ವರ ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಹೊರ ರಾಜ್ಯಗಳ ಕಾರ್ಮಿಕರ ಮೇಲೆ ವಿಶೇಷ ನಿಗಾ ಇಡಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ದಕ್ಷಿಣ ಕನ್ನಡದಲ್ಲಿನ ಶೇ. 50 ರಷ್ಟು ಪ್ರಕರಣಗಳು ಹೊರ ರಾಜ್ಯದ ಕಾರ್ಮಿಕರದ್ದು. ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ ಹೆಚ್ಚಿನ ಪ್ರಕರಣ ಇಲ್ಲದಿದ್ದರೂ (3 ಪ್ರಕರಣ) ವಿಶೇಷ ನಿಗಾ ಇಡಲಾಗಿದೆ. ದ.ಕ.ದಲ್ಲಿ ಈ ವರ್ಷ ಒಟ್ಟು 48 ಪ್ರಕರಣ ದಾಖಲಾಗಿದ್ದು, 21 ಹೊರ ರಾಜ್ಯದ ಕಾರ್ಮಿಕ ರದ್ದು. 20 ಪ್ರಕರಣಗಳು ಮಂಗಳೂರು ನಗರ ವ್ಯಾಪ್ತಿಯದ್ದು.

ಹೊರ ರಾಜ್ಯದಿಂದ ರೈಲಿನಲ್ಲಿ ಜಿಲ್ಲೆಗೆ ಆಗಮಿಸು ವಾಗಲೇ ಹೆಚ್ಚಿನವರಲ್ಲಿ ಜ್ವರದ ಲಕ್ಷಣ ಇರುತ್ತದೆ. ಸೊಳ್ಳೆಗಳ ಮೂಲಕ ಅದು ಇತರರಿಗೆ ಹರಡುತ್ತದೆ. ವಾರದ ಹಿಂದೆ ಶಕ್ತಿನಗರ ಬಳಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಗೆ ಬಂದ ಒಡಿಶಾದ ಕಾರ್ಮಿಕರಿಗೆ ಮಲೇರಿಯಾ ಕಂಡುಬಂದು ಪರಿಸರದ ಕೆಲವರಿಗೆ ತಗಲಿತ್ತು. ಹಾಗಾಗಿ ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಮಲೇರಿಯಾ ಪರೀಕ್ಷೆ ನಡೆಸಿಯೇ ಕೆಲಸ ನೀಡುವಂತೆ ಸಂಬಂಧಪಟ್ಟ ಕನ್‌ಸ್ಟ್ರಕ್ಷನ್‌ ಸಂಸ್ಥೆಗಳಿಗೆ ಕಾರ್ಮಿಕ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ಜಾಗೃತಿ ಮೂಡಿಸಲು ಮುಂದಾಗಿವೆ.

ನಿರ್ಮಾಣ ಹಂತದ ಕಟ್ಟಡ ಕೆಲಸ ನಿರತ ಕಾರ್ಮಿಕರ ಬಗ್ಗೆ ನಿಗಾ ಇಡಲು ದ.ಕ., ಉಡುಪಿ ಜಿಲ್ಲೆ ಆರೋಗ್ಯ ಇಲಾಖೆಯು ವಿಶೇಷ ತಂಡವನ್ನು ನಿಯೋಜಿಸಿದೆ. ಕಟ್ಟಡ ನಿರ್ಮಾಣ ಸ್ಥಳಗಳಿಗೆ ಭೇಟಿ ನೀಡಿ, ಕಾರ್ಮಿಕರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗುತ್ತಿದೆ. ನಿರ್ಗತಿಕರಲ್ಲೂ ಅರಿವು ಮೂಡಿ ಸುತ್ತಿದ್ದು, ಮಾದರಿ ಪರಿಶೀಲನೆಯೂ ನಡೆದಿದೆ.

ಡೆಂಗ್ಯೂ ತಡೆಗೆ ಲಾರ್ವಾ ಸಮೀಕ್ಷೆ
ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ದಿನವಿಡೀ ಬಿಸಿಲು-ಮಳೆಯಿಂದ ಕೂಡಿದ ವಾತಾವರಣ ಇದೆ. ಇದು ಅಲ್ಲಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಮತ್ತು ನಗರ ವ್ಯಾಪ್ತಿಯಲ್ಲಿ ಲಾರ್ವಾ ಸಮೀಕ್ಷೆ ನಡೆಯುತ್ತಿದೆ. ಆಶಾ ಕಾರ್ಯಕರ್ತೆಯರು ಕಿರಿಯ ಆರೋಗ್ಯ ಸಹಾಯಕಿಯರು ಮನೆ ಮನೆಗೆ ಭೇಟಿ ನೀಡಿ ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಸಮೀಕ್ಷೆ ವೇಳೆ ಸೊಳ್ಳೆ ಮರಿ ವಾಸ ಕಂಡುಬಂದರೆ ಹಿರಿಯ ಆರೋಗ್ಯ ಸಹಾಯಕರ ಗಮನಕ್ಕೆ ತರಲಾಗುತ್ತಿದೆ.

ಮಲೇರಿಯಾ ತಡೆಗಟ್ಟಿ
 ಮನೆಯ ಸುತ್ತ ನಿರುಪಯುಕ್ತ ವಸ್ತುಗಳಲ್ಲಿ ನೀರು ನಿಲ್ಲದಿರಲಿ  ಸೊಳ್ಳೆ ಪರದೆಯನ್ನು ವಾರಕ್ಕೊಮ್ಮೆಯಾದರೂ ಸ್ವತ್ಛಗೊಳಿಸಿ  ಗರ್ಭಿಣಿಯರಂತೂ ಸೊಳ್ಳೆಯಿಂದ ದೂರವಿರಿ.
 ಮಂದ ಬಣ್ಣದ ಉಡುಪು ಧರಿಸಿದರೆ ಸೊಳ್ಳೆ ನಿಮ್ಮಿಂದ ದೂರವಿರುತ್ತದೆ. ನಿತ್ಯವೂ ಮನೆಯನ್ನು ಒರೆಸಿ ಸಾಮಾನ್ಯ ಜ್ವರವನ್ನೂ ನಿರ್ಲಕ್ಷಿಸದೆ
ಹತ್ತಿರದ ವೈದ್ಯರನ್ನು ಕಾಣಿ.

ಕೆಲವು ರಾಜ್ಯಗಳಲ್ಲಿ ಮಲೇರಿಯಾ ಪ್ರಕರಣ ಹೆಚ್ಚಿವೆ. ಅಲ್ಲಿಂದ ವಿವಿಧ ಕೆಲಸಗಳಿಗೆ ಆಗಮಿಸುವವರಲ್ಲಿ ಮಲೇರಿಯಾ ಕಾಣಿಸಿ ಕೊಳ್ಳುತ್ತಿದೆ. ಆರೋಗ್ಯ ಇಲಾಖೆ ವಿಶೇಷ ನಿಗಾ ಇಟ್ಟಿದ್ದು, ಸ್ಥಳೀಯ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಮಲೇರಿಯಾ ಪರೀಕ್ಷೆ ಉಚಿತ.
– ನವೀನ್‌ ಚಂದ್ರ ಕುಲಾಲ್‌, ಡಾ| ಪ್ರಶಾಂತ್‌ ಭಟ್‌, ಜಿಲ್ಲಾ ಆಶ್ರಿತ ರೋಗ ವಾಹಕ ನಿಯಂತ್ರಣ ಅಧಿಕಾರಿಗಳು, ದ.ಕ. ಮತ್ತು ಉಡುಪಿ

 ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.