Manipur violence: ಪ್ರಧಾನಿ ಮೋದಿ ಮೌನ ಪ್ರಶ್ನಿಸಿದ ಸಚಿನ್ ಪೈಲಟ್
Team Udayavani, Jul 28, 2023, 3:42 PM IST
ಜೈಪುರ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ ಮತ್ತು ಹಿಂಸಾಚಾರವನ್ನು ತಗ್ಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಮಣಿಪುರದಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ‘ಕಳೆದ ಮೂರು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರಲು ಪ್ರತಿಜ್ಞೆ ಮಾಡಿರುವಂತಿದೆ. ಬಿಜೆಪಿ ಸರ್ಕಾರ ವಿಫಲವಾಗಿದೆ. ಇಷ್ಟಾದರೂ ಪ್ರಧಾನಿ ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ.ಸಂಸತ್ತು ಕಾರ್ಯ ನಿರ್ವಹಿಸುತ್ತಿದೆ ಆದರೆ ಮಣಿಪುರದ ಬಗ್ಗೆ ಚರ್ಚಿಸಲು ಬಿಜೆಪಿ ಸಿದ್ಧವಿಲ್ಲ’ ಎಂದರು.
ಆದಾಗ್ಯೂ, ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರ ‘ಲಾಲ್ ಡೈರಿ’ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸದ ಪೈಲಟ್, ರಾಜಸ್ಥಾನದಲ್ಲಿ ಪ್ರತಿಪಕ್ಷದ ಪಾತ್ರದಲ್ಲಿಯೂ ಬಿಜೆಪಿ ವಿಫಲವಾಗಿದೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಕೇಂದ್ರವು ರಾಜಸ್ಥಾನ ಸರ್ಕಾರದ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವು ರಾಜಸ್ಥಾನದಲ್ಲಿ ಕಲ್ಯಾಣ ಯೋಜನೆಗಳಿಗೆ ಹಣವನ್ನು ನೀಡುತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.