ಉಡುಪಿ ವಿಡಿಯೋ ವಿಚಾರದ ಸತ್ಯಾಸತ್ಯತೆ ಹೊರ ಬರಬೇಕು: ಶೋಭಾ ಕರಂದ್ಲಾಜೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಅನ್ನುವುದನ್ನು ಕಣ್ಣ ಮುಂದೆ ಕಾಣುತ್ತಿದ್ದೇವೆ

Team Udayavani, Jul 28, 2023, 8:12 PM IST

1-ssadd

ಉಡುಪಿ: ಉಡುಪಿ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶುಕ್ರವಾರ ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿ ಕಾರಿದ್ದಾರೆ. ”ನಾವು ಹೇಳಿದ್ದೆವು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಏನಾಗುತ್ತದೆ ಅನ್ನುವುದನ್ನು, ಅದನ್ನೇ ಕಣ್ಣ ಮುಂದೆ ಕಾಣುತ್ತಿದ್ದೇವೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವೆ, ಉಡುಪಿಯಲ್ಲಿ ನಡೆದ ಘಟನೆ ದೇಶದ ಗಮನ ಸೆಳೆದಿದೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕೀಯ ಮಾಡಲು ಸದ್ಯ ಯಾವುದೇ ಚುನಾವಣೆ ಇಲ್ಲ.ಇದು ನಮ್ಮ ವಿದ್ಯಾರ್ಥಿನಿಯರ ಮಾನ ಪ್ರಾಣದ ಪ್ರಶ್ನೆಯಾಗಿದೆ. ವಿದ್ಯಾರ್ಥಿನಿಯರನ್ನು ಪ್ರಶ್ನೆ ಮಾಡುವ ಬದಲು ತಾಂತ್ರಿಕ ತನಿಖೆ ನಡೆಸಬೇಕು ಎಂದರು.

ರಾಜಕಾರಣಿ ಗಳು ರಾಜಕೀಯ ಮಾಡುವುದಲ್ಲ, ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆಯದು, ಕೆಲವರು ಬಾಯಿ ತೆಗೆದರೆ ಒಳ್ಳೆಯದು. ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ.ಘಟನೆ ಏನು, ಸತ್ಯಾಸತ್ಯತೆ ಏನು ಅದು ಹೊರಗೆ ಬರಬೇಕು. ನನ್ನ ಕ್ಷೇತ್ರದ ವಿದ್ಯಾರ್ಥಿಗಳ ರಕ್ಷಣೆ ಆಗಬೇಕು ಅವರಿಗೆ ನ್ಯಾಯ ಸಿಗಬೇಕು ಎಂದರು.

ಹಿಜಾಬ್ ಮತ್ತು ಇದೀಗ ವಿಡಿಯೋ ಬಗ್ಗೆ ಚರ್ಚೆ ಆಗುತ್ತಿದೆ. ನಮಗೆ ನಮ್ಮ ವಿದ್ಯಾರ್ಥಿನಿಯರ ರಕ್ಷಣೆ ಮುಖ್ಯವಾದುದ್ದು. ಖಾಸಗಿ ವಿಚಾರ ಹೊರಗಡೆ ಹರಿ ಬಿಟ್ಟು ದುರ್ಬಳಕೆ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಜನಪ್ರತಿನಿಧಿಗಳು ,ಡಿಸಿ ಎಸ್ ಪಿಗೆ ವಿದ್ಯಾರ್ಥಿನಿ ಯರು ಮಾಹಿತಿ ನೀಡಿದ್ದಾರೆ. ಎಲ್ಲಾ ಸಿಸಿಟಿವಿ ದೃಶ್ಯ, ಮೊಬೈಲ್ ಗಳೆಲ್ಲವನ್ನು ಎಫ್ ಎಸ್ ಎಲ್ ಗೆ ಕಳುಹಿಸಬೇಕು. ಯಾರನ್ನೂ ಇಲ್ಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.

ಅಲ್ ಖೈದಾ ಉಗ್ರ ಸಂಘಟನೆ ಉಡುಪಿ ಹಿಜಾಬ್ ಘಟನೆ ಬಗ್ಗೆ ಮಾತನಾಡಿದೆ, ಆದಷ್ಟು ಬೇಗ ಈ ಘಟನೆಯ ತನಿಖೆ ಆಗಬೇಕು. ಆರೋಪಿಗಳಿಗೆ ಶಿಕ್ಷೆ ಆಗಬೇಕು. ಪಕ್ಷ ಸರಕಾರ ಯಾವುದು ಎನ್ನುವುದು ಮುಖ್ಯ ಅಲ್ಲ. ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದು ಎಂದರು.

ಯಾವುದೇ ಹಾಸ್ಟೆಲ್ ಕಾಲೇಜು ವಸತಿ ಶಾಲೆ ಯಲ್ಲಿ ಯಾರೇ ಹೀಗೆ ಮಾಡಿದರೂ ನನ್ನ ಗಮನಕ್ಕೆ ತನ್ನಿ. ನಾನು ನಿಮ್ಮ ಅಕ್ಕನಾಗಿ ವಿನಂತಿ ಮಾಡುತ್ತೇನೆ. ಮಾಹಿತಿ ನೀಡಿದವರನ್ನು ಗೌಪ್ಯವಾಗಿ ಇಟ್ಟು ನಿಮ್ಮನ್ನು ರಕ್ಷಣೆ ಮಾಡುತ್ತೇನೆ. ಲವ್ ಜಿಹಾದ್ ಮತಾಂತರ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ಕೇಂದ್ರ ಗೃಹ ಸಚಿವರ ಗಮನಕ್ಕೂ ತಂದು ನಾನು ನ್ಯಾಯ ಕೊಡಿಸುತ್ತೇವೆ ಎಂದರು.

ಡಿಜೆ ಹಳ್ಳಿ ಕೆಜೆ ಹಳ್ಳಿ ಪ್ರಕರಣದ ಆರೋಪಿಗಳ ಕೇಸ್ ವಾಪಸಾತಿ ಕುರಿತು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಎಲ್ಲಿಗೆ ಹೋಗುತ್ತಿದೆ. ದೇಶದ್ರೋಹ ಸಮಾಜ ದ್ರೋಹಿಗಳನ್ನು ರಾಜ್ಯ ಸರಕಾರ ರಕ್ಷಣೆ ಮಾಡುತ್ತಿದೆ. ಗೃಹ ಸಚಿವರು ಸಮಾಜಘಾತುಕರ ರಕ್ಷಣೆ ಮಾಡುತ್ತಿದ್ದಾರೆ. ಪಿಎಫ್ ಐ ಅಪರಾಧಿಗಳನ್ನು ಬಿಡುಗಡೆ ಮಾಡಿ ಸರಕಾರದ ದೇಶ ದ್ರೋಹ, ಸಮಾಜ ದ್ರೋಹದ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದರು.

ಟಾಪ್ ನ್ಯೂಸ್

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.