ಆಗಸ್ಟ್ ತಿಂಗಳಿಂದ ಉಚಿತ ವಿದ್ಯುತ್‌ಗೆ ಕಲಬುರಗಿಯಲ್ಲಿ ಚಾಲನೆ:ಡಾ.ಜಿ.ಪರಮೇಶ್ವರ

2 ವರ್ಷದಲ್ಲಿ ಎತ್ತಿನಹೊಳೆ ಯೋಜನೆ ಪೂರ್ಣ

Team Udayavani, Jul 28, 2023, 9:41 PM IST

1-sadasdasd

ಕೊರಟಗೆರೆ: ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಬಸ್ ಪ್ರಯಾಣವು ಯಶಸ್ವಿಯತ್ತ ಸಾಗುತ್ತಿದೆ.. ಅನ್ನಭಾಗ್ಯದ ಗೊಂದಲಕ್ಕೆ ಈಗಾಗಲೇ ತೆರೆಬಿದ್ದಿದೆ.. ಆಗಸ್ಟ್ ಮಾಹೆಯಿಂದ ರಾಜ್ಯದ ಜನತೆಗೆ 200 ಯೂನಿಟ್ ವಿದ್ಯುತ್ ಉಚಿತ ‘ಗೃಹ ಜ್ಯೋತಿ’ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪಟ್ಟಣ, ಕಸಬಾ, ಕೋಳಾಲ ಮತ್ತು ಕೋರಾ ಹೋಬಳಿ ವ್ಯಾಪ್ತಿಯಲ್ಲಿ ಅರಣ್ಯ, ಪ್ರವಾಸೋಧ್ಯಮ, ಜಿಪಂ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಲಾಗಿದ್ದ 17 ಕೋಟಿಗೂ ಅಧಿಕ ಅನುಧಾನದ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಬಯಲುಸೀಮೆ ರೈತರ ಬಹುದೊಡ್ಡ ಕನಸಾದ ಎತ್ತಿನಹೊಳೆ ಯೋಜನೆಯು 2 ವರ್ಷದಲ್ಲಿ ಪೂರ್ಣ ಆಗಲಿದೆ. ಕಾಮಗಾರಿ ಪೂರ್ಣಕ್ಕೆ ಅನುದಾನ ಬಿಡುಗಡೆ ಮಾಡಲು ನಮ್ಮ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಕೊರಟಗೆರೆ ಕ್ಷೇತ್ರದ ಮನೆ ಮನೆಗೆ ನೀರಿನ ಸಂಪರ್ಕಕ್ಕಾಗಿ ಜಲಜೀವನ್ ಮಿಷನ್ ಯೋಜನೆಯಡಿ 198 ಕೋಟಿ ರೂ. ಕಾಮಗಾರಿ ಈಗಾಗಲೇ ಪ್ರಾರಂಭ ಆಗಿದೆ. ಕೊರಟಗೆರೆ ಕ್ಷೇತ್ರದ ಜನತೆಗೆ 5 ಸಾವಿರ ಸೈಟ್ ನೀಡಲು ಅಂಕಿಅಂಶದ ರೂಪರೇಷೆ ತಯಾರಿಸಲು ಜಿಪಂ ಸಿಇಓಗೆ ಸೂಚನೆ ನೀಡಲಾಗಿದೆ ಎಂದರು.

ಕೇಂದ್ರ ಸರಕಾರದ ಬಳಿ ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ರಾಜ್ಯದ ಜನರಿಗೆ ಅಕ್ಕಿ ನೀಡಲು ನಿರಾಕರಿಸಿದೆ. ನಮ್ಮ ಸರಕಾರ ನೀಡಿದ್ದ ಮಾತಿನಂತೆ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಕೆಜಿ ಅಕ್ಕಿಗೆ 34ರೂ ಹಣ ನೀಡುತ್ತಿದ್ದೇವೆ. ಪದವಿ ಪಡೆದವರಿಗೆ 3 ಸಾವಿರ ಮತ್ತು ಡಿಪ್ಲೋಮೊ ಮಾಡಿದವರಿಗೆ 2500 ರೂ ನೀಡಲು ರಾಜ್ಯ ಸರಕಾರ ಈಗಾಗಲೇ ಯುವನಿಧಿಗೂ ರೂಪುರೇಷೆ ತಯಾರಿಸಿದೆ ಎಂದು ಮಾಹಿತಿ ನೀಡಿದರು.

ವಿಧಾನಸಭಾ ಚುನಾವಣೆ ವೇಳೆ ನಾವು ರಾಜ್ಯದ ಜನತೆಗೆ ನೀಡಿದ ಭರವಸೆಯಲ್ಲಿ 5 ಗ್ಯಾರಂಟಿಗೆ ಈಗಾಗಲೇ ಸಂಪುಟದ ಒಪ್ಪಿಗೆಯು ಸಿಕ್ಕಿದೆ. ರಾಜ್ಯದ ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುತ್ತೇನೆ ಯಾವುದೇ ಅನುಮಾನ ಬೇಡ. ನನ್ನ ಕ್ಷೇತ್ರದಲ್ಲಿ 3 ಕೋಟಿ 50 ಲಕ್ಷ ವೆಚ್ಚದ 2 ಆಸ್ಪತ್ರೆಗಳು ಈಗಾಗಲೇ ನಿರ್ಮಾಣ ಆಗಿವೆ. ಕೋಳಾಲದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್, ಜಿಪಂ ಸಿಇಓ ಪ್ರಭು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಅರಣ್ಯ ಇಲಾಖೆಯ ಸರಂಕ್ಷಣಾ ಅಧಿಕಾರಿ ರಮೇಶ್, ಉಪ ಸರಂಕ್ಷಣಾ ಅಧಿಕಾರಿ ಅನುಫಮಾ, ತಹಶೀಲ್ದಾರ್ ಮುನಿಶಾಮಿರೆಡ್ಡಿ, ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ್, ಅರಣ್ಯಾಧಿಕಾರಿ ಸುರೇಶ್, ಸತೀಶಚಂದ್ರ, ಮಲ್ಲಿಕಾರ್ಜುನಪ್ಪ, ಸುಬ್ಬರಾವ್, ಮಹೇಶ್‌ಮಲ್ಲಗಟ್ಟಿ, ಚಿಕ್ಕರಾಜೇಂದ್ರ, ನಾಗರಾಜು ಸೇರಿದಂತೆ ಇತರರು ಇದ್ದರು.

17 ಕೋಟಿ ರೂ. ಕಾಮಗಾರಿಗೆ ಚಾಲನೆ

ಅರಣ್ಯ ಇಲಾಖೆಯ ವೃಕ್ಷೋಧ್ಯಾನ ಯೋಜನೆಯಡಿ ೨ಕೋಟಿ ೫೦ಲಕ್ಷ ವೆಚ್ಚದ ಟ್ರೀಪಾರ್ಕ್ ಲೋಕಾರ್ಪಣೆ, ಪ್ರವಾಸೋದ್ಯಮ ಇಲಾಖೆಯ 9 ಕೋಟಿ ವೆಚ್ಚದ ಗೋಕುಲಕೆರೆಯ ಉದ್ಯಾನವನ, ಸಮಾಜ ಕಲ್ಯಾಣ ಇಲಾಖೆಯ 2 ಕೋಟಿ 75 ಲಕ್ಷ ವೆಚ್ಚದ 14 ಅಂಬೇಡ್ಕರ್ ಭವನ, ಜಿಪಂಯ 2 ಕೋಟಿ ರೂ. ವೆಚ್ಚದಲ್ಲಿ ಕಾವರ್ಗಲ್ ಕಂಬದಹಳ್ಳಿ ಕೆರೆಯ ಅಭಿವೃದ್ದಿ ಕಾಮಗಾರಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೂಮಿಪೂಜೆ ನೇರವೆರಿಸಿದರು.

ಅವೈಜ್ಞಾನಿಕ ಕೌನ್ಸಿಲಿಂಗ್ ರದ್ದತಿಗೆ ಮನವಿ

ಟಿಸಿಎಂಎಸ್ ಕಾಯ್ದೆಯು ಅರಣ್ಯ ಇಲಾಖೆಯ ನೌಕರರಿಗೆ ಮಾರಕವಾಗಿದೆ. ಕೆಳಹಂತದ ನೌಕರರಿಗೆ ಸ್ವಂತ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ಸೀಗೋದಿಲ್ಲ. ಅಪರಾಧ ತಡೆಗೆ ಕಾಯ್ದೆಯಿಂದ ಹಿನ್ನಡೆಯಾಗುವ ಸಾಧ್ಯತೆಯು ಹೆಚ್ಚಿದೆ. ಭವಿಷ್ಯದ ಅರಣ್ಯ ಸಂಪತ್ತು ಸಂರಕ್ಷಣೆಗಾಗಿ ಕೌನ್ಸಿಲಿಂಗ್ ಪದ್ದತಿ ರದ್ದಾಗಬೇಕಿದೆ. ಅವೈಜ್ಞಾನಿಕ ಕೌನ್ಸಿಲಿಂಗ್ ವರ್ಗಾವಣೆ ಪದ್ದತಿ ರದ್ದು ಮಾಡುವಂತೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ವೃಕ್ಷೋಧ್ಯಾನ ಕಾರ್ಯಕ್ರಮದ ವೇಳೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

V.-Somanna

Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ

1-cantar

Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು

12-madhugiri

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

9-koratagere

Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.