ಪರೀಕ್ಷೆ ಮುಗಿದ ಮೂರೇ ದಿನದಲ್ಲಿ ಫಲಿತಾಂಶ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಹೊಸ ದಾಖಲೆ: ಇಂಥ ಪ್ರಯೋಗ ಇದೇ ಮೊದಲು
Team Udayavani, Jul 28, 2023, 11:08 PM IST
ಬೆಳಗಾವಿ: ಬಿಇ ಪರೀಕ್ಷೆ ಮುಗಿದ ಮೂರೇ ದಿನಗಳಲ್ಲಿ ಫಲಿತಾಂಶ ಘೋಷಿಸುವ ಮೂಲಕ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ದಾಖಲೆ ಮಾಡಿದೆ. ಇಂಥ ಪ್ರಯೋಗ ಇದೇ ಮೊದಲಿಗೆ ಆಗಿದೆ ಎಂದು ಕುಲಪತಿ ಪ್ರೊ| ಎಸ್. ವಿದ್ಯಾಶಂಕರ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಉನ್ನತ ವ್ಯಾಸಂಗದ ಅನುಕೂಲದ ದೃಷ್ಟಿಯಿಂದ ಪರೀಕ್ಷೆ ಫಲಿತಾಂಶವನ್ನು ಕ್ಷಿಪ್ರವಾಗಿ ಪ್ರಕಟಿಸಲಾಗಿದೆ. ಮೇ 27ರಂದು ಬಿಇ ವಿದ್ಯಾರ್ಥಿಗಳ ಕೊನೆಯ ಪರೀಕ್ಷೆ ಮುಗಿದಿದ್ದು, ಮೇ 30ಕ್ಕೆ ಫಲಿತಾಂಶ ಪ್ರಕಟಿಸಲಾಗಿದೆ. ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆಯಲು ಹಾಗೂ ವಿವಿಧ ಕಂಪೆನಿಗಳಲ್ಲಿ ಕೆಲಸ ಮಾಡಲು ಬೇಗ ಫಲಿತಾಂಶ ಪ್ರಕಟಿಸಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಆಗಸ್ಟ್ ನಿಂದಲೇ ಪ್ರವೇಶ ಪಡೆಯಲು ಸಾಧ್ಯ ವಿದೆ. ಎರಡು ತಿಂಗಳ ಮುಂಚೆಯೇ ಕಂಪೆನಿಗಳಿಗೆ ಹೋಗಬಹುದಾಗಿದೆ. ಕಂಪೆನಿಗಳನ್ನು ಆಯ್ಕೆ ಮಾಡಿ ಆದ್ಯತೆ ಮೇರೆಗೆ ಸೇರಬಹುದಾಗಿದೆ. ಅಂತಾರಾಷ್ಟ್ರೀಯ ದಿನದರ್ಶಿಕೆ ಪ್ರಕಾರ ಫಲಿತಾಂಶ ಪ್ರಕಟಿಸಲು ಒತ್ತು ನೀಡಲಾಗುತ್ತಿದೆ ಎಂದರು.
ಈ ಮುಂಚೆ ಫಲಿತಾಂಶ ಬರಲು ಒಂದರಿಂದ ಎರಡು ತಿಂಗಳು ಬೇಕಾಗುತ್ತಿತ್ತು. ಇದರಿಂದ ಒಂದು ವರ್ಷ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿತ್ತು. ಇತರೆಲ್ಲ ರಾಜ್ಯಗಳಿಗೆ ಹೋಲಿಸಿದರೆ ನಾವೇ ಮೊದಲು ಫಲಿತಾಂಶ ಪ್ರಕಟಿಸಿದ್ದೇವೆ ಎಂದರು.
ವಿದೇಶಕ್ಕೂ ವ್ಯಾಪಿಸಿದ ಆನ್ಲೈನ್ ಶಿಕ್ಷಣ
ಆನ್ಲೈನ್ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶ ನೀಡುವ ಮೂಲಕ ಜಗತ್ತಿನ ಎಲ್ಲ ಭಾಗಕ್ಕೂ ಶಿಕ್ಷಣವನ್ನು ವಿಸ್ತರಿಸುವ ಕಾರ್ಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಾಡುತ್ತಿದ್ದು, ಎಐಸಿಟಿಯಿಂದ 1.10 ಲಕ್ಷ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವಂತೆ ಅನುಮತಿ ನೀಡಿದೆ. ಇನ್ನು 15-20 ದಿನಗಳಲ್ಲಿ ಯುಜಿಸಿಯಿಂದ ಅನುಮತಿ ಸಿಗಲಿದೆ. ಆನ್ಲೈನ್ ಶಿಕ್ಷಣಕ್ಕಾಗಿ ಆ.30ರಿಂದ ಪ್ರವೇಶ ಆರಂಭವಾಗಲಿದ್ದು, ಸೆ.15ರೊಳಗೆ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಕುಲಪತಿ ಪ್ರೊ| ಎಸ್. ವಿದ್ಯಾಶಂಕರ ತಿಳಿಸಿದರು.
ಮದಕಶಿರಾ ಚಿನ್ಮಯ ವಿಕಾಸ್ ಚಿನ್ನದ ಹುಡುಗ
ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮದಕಶಿರಾ ಚಿನ್ಮಯ ವಿಕಾಸ್ 13 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಚಿನ್ನದ ಹುಡುಗನಾಗಿ ಹೊರಹೊಮ್ಮಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಭಿಷೇಕ್ ಜಿ. 7 ಚಿನ್ನ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಗುಡಿಕಲ್ ಸಾಯಿ ವಂಶಿ 7, ಬಳ್ಳಾರಿಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಕೆ.ಆರ್. ಸಂಪತ್ ಕುಮಾರ್ 7, ಶಿವಮೊಗ್ಗದ ಜವಾಹರಲಾಲ್ ನೆಹರೂ ನ್ಯಾಷನಲ್ ಕಾಲೇಜ್ ಆಫ್ ಎಂಜಿನಿಯರಿಂಗ್ ವಿಭಾಗದ ಪಾರ್ವತಿ ಸಲೇರಾ ಜೆ. 6 ಚಿನ್ನ ಪಡೆದಿದ್ದಾರೆ.
ಬೆಳಗಾವಿಯ ಕೆಎಲ್ಇ ಡಾ| ಎಂ.ಎಸ್. ಶೇಷಗಿರಿ ಕಾಲೇಜ್ ಆಫ್ ಎಂಜಿನಿಯರಿಂಗ್ನ ಕೆಮಿಕಲ್ ಎಂಜಿನಿಯರಿಂಗ್ನಲ್ಲಿ ಆವಂತಿಕಾ ಎ. ಸಾವಕಾರ್ 5 ಚಿನ್ನ, ಬೆಂಗಳೂರಿನ ಆರ್ಎನ್ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಇನ್ಸ್ಟ್ರೆಮೆಂಟೇಶನ್ ಎಂಜಿನಿಯರಿಂಗ್ನಲ್ಲಿ ಹರ್ಷಿತಾ ಆರ್. 4 ಚಿನ್ನ, ಬೆಂಗಳೂರಿನ ಸಾಯಿ ವಿದ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇನ್ಫಾರ್ಮೇಶನ್ ಸೈನ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಇಶಿಕಾ ನವೀನ್ 4 ಚಿನ್ನ, ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಏರೋನಾಟಿಕಲ್ ಎಂಜಿನಿಯರಿಂಗ್ನಲ್ಲಿ ಸಾಹಸ ಎಸ್. 2 ಚಿನ್ನ, ಬೆಂಗಳೂರಿನ ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೈನಿಂಗ್ ಎಂಜಿನಿಯರಿಂಗ್ನಲ್ಲಿ ಕೆಂಚೋ ಗೈಲ್ತ್ಸೇನ್ 2 ಚಿನ್ನದ ಪದಕ ಪಡೆದಿದ್ದಾರೆ.
ಮೂವರಿಗೆ ವಿಟಿಯು ಡಾಕ್ಟರ್ ಆಫ್ ಸೈನ್ಸ್
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 23ನೇ ಘಟಿಕೋತ್ಸವ ಆ.1ರಂದು ವಿಟಿಯು ಜ್ಞಾನ ಸಂಗಮ ಆವರಣದಲ್ಲಿ ನಡೆಯಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಮಠದ ಡಾ| ನಿರ್ಮಲಾನಂದನಾಥ ಸ್ವಾಮೀಜಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಸಂಸ್ಥೆ ಗೌರವ ಕಾರ್ಯದರ್ಶಿ ಡಾ|ಎ.ವಿ.ಎಸ್.ಮೂರ್ತಿ ಹಾಗೂ ಬೆಂಗಳೂರಿನ ಮೈಸೂರು ಮೆಕ್ಯಾನಿಕ್ ಟೈಲ್ ಕಂಪೆನಿ ಲಿ. ಅಧ್ಯಕ್ಷ ಎಚ್.ಎಸ್. ಶೆಟ್ಟಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ| ವಿದ್ಯಾಶಂಕರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.