Tamilnadu: ಸುಪ್ರೀಂ ಸಿಜೆಐ ವಿರುದ್ಧ ಪ್ರಚೋದನಕಾರಿ ಹೇಳಿಕೆ- ಲೇಖಕ ಬದ್ರಿ ಶೇಷಾದ್ರಿ ಬಂಧನ
ವಕೀಲ ಕವಿಯರಸು ಅವರು ಬದ್ರಿ ಶೇಷಾದ್ರಿ ವಿರುದ್ಧ ದೂರು ದಾಖಲಿಸಿದ್ದರು.
Team Udayavani, Jul 29, 2023, 12:07 PM IST
ಚೆನ್ನೈ: ಮಣಿಪುರ ಘರ್ಷಣೆ, ಗಲಭೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ. ಚಂದ್ರಚೂಡ್ ಅವರ ವಿರುದ್ಧ ಸಂದರ್ಶನವೊಂದರಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರೋಪದಡಿ ರಾಜಕೀಯ ವಿಶ್ಲೇಷಕ, ಲೇಖಕ ಬದ್ರಿ ಶೇಷಾದ್ರಿಯನ್ನು ತಮಿಳುನಾಡು ಪೊಲೀಸರು ಶನಿವಾರ (ಜುಲೈ 29) ಬಂಧಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Honey Trap: ನಟಿ, ಸ್ನೇಹಿತನಿಂದ 75 ರ ಮಾಜಿ ಸೈನಿಕನಿಗೆ ಹನಿಟ್ರ್ಯಾಪ್ ಖೆಡ್ಡಾ
ಶೇಷಾದ್ರಿ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂಗಳಾದ 153, 153ಎ ಮತ್ತು 505(1)(ಬಿ) ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಶೇಷಾದ್ರಿ ಹೇಳಿದ್ದೇನು?
ಮಣಿಪುರ ಘಟನೆಗೆ ಸಂಬಂಧಿಸಿದಂತೆ ಸಂದರ್ಶನವೊಂದರಲ್ಲಿ ಮಾತನಾಡಿದ ಲೇಖಕ ಬದ್ರಿ ಶೇಷಾದ್ರಿ, ಸುಪ್ರೀಂಕೋರ್ಟ್ ಪ್ರಕಾರ ಒಂದು ವೇಳೆ ನಿಮ್ಮಿಂದ (ಕೇಂದ್ರ ಸರ್ಕಾರ) ಏನೂ ಮಾಡಲು ಸಾಧ್ಯವಿಲ್ಲದ್ದರೆ, ಅದನ್ನು ನಾವು (ಕೋರ್ಟ್ ) ಮಾಡುವುದಾಗಿ ಹೇಳಿದೆ. ಹಾಗಾದರೆ ಚಂದ್ರಚೂಡ್ ಅವರ ಕೈಗೆ ಗನ್ ಕೊಟ್ಟು ಮಣಿಪುರಕ್ಕೆ ಕಳುಹಿಸಿ…ನಂತರ ಒಂದು ವೇಳೆ ಅವರು ಶಾಂತಿಯನ್ನು ಸ್ಥಾಪಿಸುತ್ತಾರೆಯೇ ಎಂಬುದನ್ನು ಕಾದು ನೋಡುವ ಎಂಬುದಾಗಿ ಹೇಳಿದ್ದರು.
ಅದೊಂದು ಗುಡ್ಡಗಾಡು ಪ್ರದೇಶ ಮತ್ತು ತುಂಬಾ ಸಂಕೀರ್ಣವಾದ ಸ್ಥಳವಾಗಿದ್ದು, ಅಲ್ಲಿ ಕೊಲೆಗಳು ನಡೆಯುತ್ತದೆ. ಹಾಗಾಗಿ ಅಲ್ಲಿ ಹಿಂಸಾಚಾರವನ್ನು ತಡೆಯಲು ಸಾಧ್ಯವಿಲ್ಲ ಎಂದು ಶೇಷಾದ್ರಿ ಅಭಿಪ್ರಾಯವ್ಯಕ್ತಪಡಿಸಿದ್ದರು.
ಸಿಜೆಐ ಅವರ ವಿರುದ್ಧದ ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ವಕೀಲ ಕವಿಯರಸು ಅವರು ಬದ್ರಿ ಶೇಷಾದ್ರಿ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಪ್ರಕಾರ, ನಾನು ಜುಲೈ 22ರಂದು ಯೂಟ್ಯೂಬ್ ನಲ್ಲಿ ಶೇಷಾದ್ರಿ ಅವರ ಸಂದರ್ಶನದ ತುಣಕನ್ನು ವೀಕ್ಷಿಸಿದ್ದು, ಅದರಲ್ಲಿ ಸುಪ್ರೀಂಕೋರ್ಟ್ ಮತ್ತು ಸಿಜೆಐ ಚಂದ್ರಚೂಡ್ ಅವರನ್ನು ಕಟುವಾಗಿ ಟೀಕಿಸಿರುವುದಾಗಿ ಉಲ್ಲೇಖಿಸಿದ್ದಾರೆ.
ಲೇಖಕ, ಭಾಷಣಕಾರ ಬದ್ರಿ ಶೇಷಾದ್ರಿಯನ್ನು ಡಿಎಂಕೆ ಸರ್ಕಾರ ಬಂಧಿಸಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಖಂಡಿಸಿದ್ದು, ಭ್ರಷ್ಟ ಡಿಎಂಕೆ ಸರ್ಕಾರ ಜನಸಾಮಾನ್ಯರ ದೃಷ್ಟಿಕೋನವನ್ನು ಎದುರಿಸಲಾಗದೆ ಹೇಡಿಯಂತೆ ಬಂಧಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.