ಗೃಹಲಕ್ಷ್ಮೀ ನೋಂದಣಿ: ರಾಜ್ಯದಲಿ ಜಿಲ್ಲೆ ಮುಂಚೂಣಿ


Team Udayavani, Jul 29, 2023, 3:42 PM IST

ಗೃಹಲಕ್ಷ್ಮೀ ನೋಂದಣಿ: ರಾಜ್ಯದಲಿ ಜಿಲ್ಲೆ ಮುಂಚೂಣಿ

ಕೆಜಿಎಫ್‌: ಗೃಹಲಕ್ಷ್ಮೀ ಯೋಜನೆ ನೋಂದಣಿಯಲ್ಲಿ ಕೋಲಾರ ಜಿಲ್ಲೆ ರಾಜ್ಯದಲ್ಲಿ ಮುಂಚೂಣಿಯಲ್ಲಿದ್ದು, ಜಿಲ್ಲೆಯಲ್ಲಿ ಒಟ್ಟು 3.26 ಲಕ್ಷ ಕುಟುಂಬಗಳಿವೆ. ಇದುವರೆಗೆ ಜಿಲ್ಲೆಯ 2 ಲಕ್ಷ ಕುಟುಂಬಗಳನ್ನು ಗೃಹ ಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿ ಮಾಡುವ ಮೂಲಕ ಒಟ್ಟಾರೆ ಶೇ.66ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಕಾರಿ ಅಕ್ರಂ ಪಾಷಾ ಹೇಳಿದರು.

ನಗರಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಗೃಹಲಕ್ಷ್ಮೀ ನೋಂದಣಿ ಪ್ರಕ್ರಿಯೆ ಪರಿಶೀಲಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲೆಲ್ಲಾ ಈಗಾಗಲೇ ಬಹುತೇಕ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ಪುರಸಭೆ ಮತ್ತು ನಗರಸಭೆಗಳಲ್ಲಿ ನೋಂದಣಿ ಕಾರ್ಯ ಕ್ಷಿಪ್ರ ಗತಿಯಲ್ಲಿ ಸಾಗುತ್ತಿದೆ ಎಂದರು.

ಮೂಲದಲ್ಲಿಯೇ ಕಸ ವಿಂಗಡಿಸಿ: ಸ್ವಚ್ಛತೆಗೆ ಆದ್ಯತೆ ನೀಡಿ ನಗರದಾದ್ಯಂತ ಎಲ್ಲೆಲ್ಲೆ ನೀರು ಸರಾಗವಾಗಿ ಹರಿದುಹೋಗಲು ಸಾಧ್ಯವಾಗದೇ ನಿಲ್ಲುತ್ತದೆಯೋ, ಅದೆಲ್ಲವನ್ನೂ ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಸ್ವತ್ಛತೆಯನ್ನು ಕಾಪಾಡಲು ಹಸಿ ಕಸ ಮತ್ತು ಒಣ ಕಸವನ್ನು ಮೂಲದಲ್ಲಿಯೇ ವಿಂಗಡಣೆ ಮಾಡಲು ಪ್ರತಿ ಮನೆ ಮನೆಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಸ್ತೆ ಡಾಂಬರೀಕರಣಕ್ಕೆ ಸೂಚನೆ: ಉರಿಗಾಂಪೇಟೆ ರಸ್ತೆಗೆ ಭೇಟಿ ನೀಡಿ ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆಯಿಸಿ ಕೂಡಲೇ ಆಸ್ಪಾಲ್ಟಿಂಗ್‌ ಕಾಮಗಾರಿ ಪ್ರಾರಂಭಿಸಿ ಮುಂದಿನ ಬುಧವಾರದೊಳಗೆ ರಸ್ತೆ ಡಾಂಬರೀಕರಣ ಕಾರ್ಯ ಮುಗಿಸುವಂತೆ ತಾಕೀತು ಮಾಡಿದರು. ಇದಲ್ಲದೇ ಕಳೆದ ತಿಂಗಳ 21ರಂದು ಉರಿಗಾಂಪೇಟೆಯ ತಗ್ಗುಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿ ಆವಾಂತರ ಸೃಷ್ಟಿಯಾಗಿದ್ದ ಸ್ಥಳಕ್ಕೆ ಭೇಟಿ ನೀಡಿ, ಮೇಲಿನಿಂದ ನೀರು ಹರಿಯುವ ಜಾಗದಲ್ಲಿ ಬ್ರಾಂಚ್‌ ಕೆನಾಲ್‌ ನಿರ್ಮಿಸಲು ನಗರಸಭಾ ಎಂಜಿನಿಯರ್‌ಗಳಿಗೆ ನಿರ್ದೇಶನ ನೀಡಿದರು. ಆಶ್ರಯ ಬಡಾವಣೆಯಲ್ಲಿ 14 ಎಕರೆ ಪ್ರದೇಶದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆ ಪಡೆದುಕೊಂಡಿರುವ 456 ನಿವೇಶನಗಳು ಅಂತಿಮ ನಕ್ಷೆ ಅನುಮೋದನೆ ಹಂತದಲ್ಲಿದ್ದು, ಅದನ್ನು ತ್ವರಿತವಾಗಿ ವಿಲೇ ಮಾಡುವುದಾಗಿ ತಿಳಿಸಿದರು.

ಅನುದಾನ ಬಿಡುಗಡೆಗೆ ಸೂಚನೆ: ಗೃಹಭಾಗ್ಯ ಯೋಜನೆಯಡಿಯಲ್ಲಿ ಪೌರ ಕಾರ್ಮಿಕರಿಗಾಗಿ ನಿರ್ಮಾಣ ಮಾಡಲಾಗಿರುವ 60 ಮನೆಗಳು ಕೂಡಲೇ ಸಂಬಂಧಪಟ್ಟ ಫಲಾನುಭವಿಗಳಿಗೆ ಹಸ್ತಾಂತರ ಆಗಬೇಕಾಗಿದೆ. ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದ ಅನುದಾನ ಬಿಡುಗಡೆ ಆಗದ ಕಾರಣ, ಎರಡು ವರ್ಷಗಳಿಂದ ಗುತ್ತಿಗೆದಾರರು 10 ರಿಂದ 15 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಿರಲಿಲ್ಲ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಕೂಡಲೇ ಆಶ್ರಯ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಕರೆ ಮಾಡಿ, ತಡೆ ಹಿಡಿದಿರುವ ಅನುದಾನವನ್ನು ಬಿಡುಗಡೆಗೊಳಿಸುವಂತೆ ಮಾತುಕತೆ ನಡೆಸಿ, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಆಶ್ರಯ ಬಡಾವಣೆಗೆ ತ್ವರಿತವಾಗಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಜರಾತಿ ಪರಿಶೀಲನೆ: ಸಿಬ್ಬಂದಿ ಹಾಜರಾತಿ ಪುಸ್ತಕದ ಪರಿಶೀಲನೆ ನಡೆಸಿ, ಹಾಜರಾತಿಯಲ್ಲಿ ಎಲ್ಲ ಸಿಬ್ಬಂದಿ ಹಾಜರಾತಿ ಇದ್ದು, ಸಿಬ್ಬಂದಿ ಕೊರತೆ ಇಲ್ಲವೇ ಎಂದು ಪೌರಾಯುಕ್ತರನ್ನು ಪ್ರಶ್ನೆ ಮಾಡಿದಾಗ, ಶೇ.40 ರಷ್ಟು ಸಿಬ್ಬಂದಿ ಕೊರತೆ ಇರುವುದಾಗಿ ತಿಳಿಸಿ, ಪ್ರಮುಖವಾಗಿ ಕರ ವಸೂಲಿ ಮಾಡುವ ಸಿಬ್ಬಂದಿಯೇ ಇಲ್ಲ ಎಂದು ಪೌರಾಯುಕ್ತ ಪವನ್‌ಕುಮಾರ್‌ ಮಾಹಿತಿ ನೀಡಿದರು. ಪೌರಾಯುಕ್ತ ಪವನ್‌ಕುಮಾರ್‌, ಎಇಇ ಮಂಜುನಾಥ್‌, ಶಿವಪ್ರಕಾಶ್‌, ಶಶಿಕುಮಾರ್‌, ಜಯರಾಂ, ಕೃಷ್ಣಮೂರ್ತಿ, ಜೆಇ ಶಿವರಾಂ ಮೊದಲಾದವರು ಇದ್ದರು.

ವಾಹನಗಳ ಹಾರಾಜಿಗೆ ಟೆಂಡರ್‌: ನಗರಸಭೆ ಆವರಣದಲ್ಲಿ ತುಕ್ಕು ಹಿಡಿದು ನಿಂತಿರುವ ಮೂರು ಚಕ್ರದ 4 ಗಾಡಿಗಳು ಮತ್ತು ನಾಲ್ಕು ಚಕ್ರದ ಮಹಿಂದ್ರಾ 5 ಗಾಡಿಗಳ ವಿಲೇವಾರಿಗೆ ಟೆಂಡರ್‌ ಕರೆಯಲಾಗಿದ್ದು, ಜು.31ಕ್ಕೆ ಆನ್‌ಲೈನ್ ಮೂಲಕ ಹರಾಜುದಾರರು ಅರ್ಜಿಗಳನ್ನು ಹಾಕಿಕೊಳ್ಳಬಹುದಾಗಿದ್ದು, ಹರಾಜು ಪ್ರಕ್ರಿಯೆ ಆಗಸ್ಟ್‌ ಒಂದರಿಂದ ನಾಲ್ಕನೇ ತಾರೀಖೀನವರೆಗೆ ನಡೆಯಲಿದೆ ಎಂದರು.

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.