ವಿಶ್ವಸಂಸ್ಥೆಯಲ್ಲೂ ಭಾರತ ಭಾಷೆಯಲ್ಲೇ ಭಾಷಣ
Team Udayavani, Jul 29, 2023, 11:58 PM IST
ಹೊಸದಿಲ್ಲಿ: ಭಾರತವು ಹಲವು ಸಮೃದ್ಧ ಭಾಷೆಗಳನ್ನು ಹೊಂದಿದ್ದರೂ, ನಾವು ಅವು ಅಷ್ಟು ಉಪಯೋಗಕ್ಕಿಲ್ಲ ಎಂಬಂತಹ ಮನೋಭಾವ ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)-2020ರ ಮೂರನೇ ವಾರ್ಷಿಕೋತ್ಸವದ ನಿಮಿತ್ತ ಪ್ರಗತಿ ಮೈದಾನದಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕ್ರಮ ಆರಂಭವಾಗಿದೆ. ಇಲ್ಲಿ ಅವರು ಮೇಲಿನಂತೆ ಮಾತನಾಡಿದರು. “ಈ ಮೊದಲು ಇಂಗ್ಲಿಷ್ ಮಾತನಾಡಲು ಬರದಿದ್ದರೆ ಅಂಥವರ ಪ್ರತಿಭೆಯನ್ನು ಜನರು ಎಂದೂ ಒಪ್ಪುತ್ತಿರಲಿಲ್ಲ. ಗ್ರಾಮೀಣ ಪ್ರದೇಶದಿಂದ ಬಂದವರು ಈ ಸಮಸ್ಯೆಯನ್ನು ಹೆಚ್ಚು ಅನುಭವಿಸುತ್ತಿದ್ದರು’ ಎಂದರು.
“ವಿಶ್ವಸಂಸ್ಥೆಯಲ್ಲಿ ನಾನು ಭಾರತೀಯ ಭಾಷೆ ಯಲ್ಲೇ ಮಾತನಾಡುತ್ತೇನೆ. ಕೇಳುಗರು ಇದನ್ನು ಅರ್ಥಮಾಡಿಕೊಂಡು, ಚಪ್ಪಾಳೆ ತಟ್ಟಲು ಕೆಲವು ಸಮಯ ತೆಗೆದುಕೊಳ್ಳುತ್ತಾರೆ. ಪರವಾಗಿಲ್ಲ, ಅವರು ಸಮಯ ತೆಗೆದುಕೊಳ್ಳಲಿ’ ಎಂದು ಹೇಳಿದರು. “ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣ ನೀಡುವುದಕ್ಕೆ ಎನ್ಇಪಿ ಗಮನಹರಿಸುತ್ತದೆ. ಉನ್ನತ ಶಿಕ್ಷಣದವರೆಗೂ ಕೂಡ ಪ್ರಾದೇಶಿಕ ಭಾಷೆಗಳಲ್ಲೇ ಶಿಕ್ಷಣ ಪಡೆಯಬಹುದಾಗಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.