ಕಸ್ತೂರಿ ರಂಗನ್‌ ವರದಿಗೆ ಹಸಿರು ನಿಶಾನೆ ಸಾಧ್ಯತೆ: ಆತಂಕ


Team Udayavani, Jul 31, 2023, 7:34 AM IST

KASTURI RANGAN

ಸಕಲೇಶಪುರ: ಪಶ್ಚಿಮ ಘಟ್ಟ ಸಂರಕ್ಷಣೆಗಾಗಿ ಡಾ.ಕಸ್ತೂರಿರಂಗನ್‌ ನೀಡಿದ್ದ ವಿವಾದಿತ ವರದಿಯನ್ನು ಪ್ರಬಲ ವಿರೋಧಗಳ ನಡುವೆಯೂ ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವುದರಿಂದ ತಾಲೂಕಿನ 34 ಗ್ರಾಮಗಳ ಜನತೆಗೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಜನ ವಸತಿ ಪ್ರದೇಶಗಳನ್ನು ಕಸ್ತೂರಿ ರಂಗನ್‌ ವರದಿಯಿಂದ ಹೊರಗಿಡಬೇಕು ಹಾಗೂ ಈ ವರದಿ ಅವೈಜ್ಞಾನಿಕವಾಗಿರುವುದರಿಂದ ಯಾವುದೇ ಕಾರಣಕ್ಕೂ ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬಾರದೆಂದು ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ ಬೆಂಗಳೂರಿನಲ್ಲಿ ಈಚೆಗೆ ಆಯೋಜಿಸಿದ್ದ ಅಂತರ ಪ್ರಭೇದಗಳ ಸಮಾವೇಶ ಉದ್ಘಾಟಿಸಿ ಮಾತನಾಡಿರುವ ರಾಜ್ಯ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ನಮ್ಮ ಸರ್ಕಾರ ಪಶ್ಚಿಮ ಘಟ್ಟಗಳು ಮತ್ತು ಅದರ ಜೀವವೈವಿಧ್ಯಗಳ ರಕ್ಷಣೆಗಾಗಿ ಕಸ್ತೂರಿ ರಂಗನ್‌ ವರದಿ ಅನುಷ್ಠಾನಗೊಳಿಸಲು ಬದ್ಧವಾಗಿದೆ. ಸಂಜಯ್‌ ಕುಮಾರ್‌ ನೇತೃತ್ವದ 2ನೇ ಸಮಿತಿ ಡಿಸೆಂಬರ್‌ ವೇಳೆಗೆ ವರದಿಯನ್ನು ಜಾರಿಗೊಳಿಸಲು ನಿರೀಕ್ಷೆಯಿದ್ದು ಅದರ ಆಧಾರದ ಮೇಲೆ ಸರ್ಕಾರ ಮತ್ತಷ್ಟು ಪ್ರಜ್ಞಾಪೂರ್ವಕವಾಗಿ ವರದಿ ಜಾರಿಗೆ ಕೆಲಸ ಮಾಡಲಿದೆ ಎಂದಿದ್ದಾರೆ. ಇದರಿಂದ ಸಕಲೇಶಪುರ ತಾಲೂಕಿನ 34 ಗ್ರಾಮಗಳ ಗ್ರಾಮಸ್ಥರು ಆತಂಕಕ್ಕೆ ಸಿಲುಕಿದ್ದಾರೆ.

ಗುಜರಾತ್‌ ಮಹಾರಾಷ್ಟ್ರ, ಗೋವಾ, ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯದ ಹಾಸನ, ಕೊಡಗು, ಚಿಕ್ಕಮಗಳೂರು ವ್ಯಾಪಿಸಿರುವ ಪಶ್ಚಿಮ ಘಟ್ಟದ 56,874 ಚದರ ಕಿ.ಮೀ. ವಿಸ್ತೀರ್ಣದ ಪ್ರದೇಶವನ್ನು ಅತಿ ಸೂಕ್ಷ್ಮ ಪ್ರದೇಶವೆಂದು ಕಸ್ತೂರಿ ರಂಗನ್‌ ಸಮಿತಿ ವರದಿ ನೀಡಿದೆ. ಅದರಲ್ಲಿ ಮಹಾರಾಷ್ಟ್ರದ 2159, ಕರ್ನಾಟಕದ 1576, ತಮಿಳುನಾಡಿನ 135, ಕೇರಳದ 123, ಗೋವಾದ 99,ಗುಜರಾತ್‌ನ 64 ಗ್ರಾಮಗಳು ಪಶ್ಚಿಮ ಘಟ್ಟ ಸೂಕ್ಷ್ಮ ಪ್ರದೇಶಗಳಾಗಿ ಯುನೆಸ್ಕೋದಿಂದ ಗುರುತಿಸಿಕೊಂಡಿದೆ.

ತಾಲೂಕಿನ ಸುಮಾರು 34 ಹಳ್ಳಿಗಳನ್ನು ಪರಿಸರ ಸೂಕ್ಷ್ಮವಲಯ ಎಂದು ಗುರುತಿಸಲಾಗಿದ್ದು, ಈ ಪೈಕಿ ಹಾನುಬಾಳು ಹೋಬಳಿಯ ಅಚ್ಚನಹಳ್ಳಿ, ಮರಗುಂದ, ಅಗನಿ, ಕುಮಾರಹಳ್ಳಿ, ಹೊಡಚಹಳ್ಳಿ, ಕಾಡುಮನೆ, ದೇವಿಹಳ್ಳಿ, ಕೆಸಗನಹಳ್ಳಿ, ಕಾಡುಮನೆ ಎಸ್ಟೇಟ್‌, ಹೆಗ್ಗದ್ದೆ, ಆಲುವಳ್ಳಿ, ಕಡಗರವಳ್ಳಿ. ಹೆತ್ತೂರು ಹೊಬಳಿಯ ಕಾಗೆನರಿ, ಎಡಕುಮೇರಿ, ಹೊಂಗಡಹಳ್ಳ, ಬಾಳೆಹಳ್ಳ, ಹೊಸಹಳ್ಳಿ, ಮರ್ಕಳ್ಳಿ, ಜೇಡಿಗದ್ದೆ, ಬೆಟ್ಟಕುಮೇರಿ, ಎತ್ತಳ್ಳ, ಅತ್ತಿಹಳ್ಳಿ, ಅರಿನಿ, ಯರ್ಗಳ್ಳಿ, ಮರ್ಗತ್ತೂರು, ವನಗೂರು, ಮಂಕನಹಳ್ಳಿ, ಅರಿನಿ ಎಸ್ಟೇಟ್‌, ಬಾಣಗೆರೆ ಗ್ರಾಮಗಳು ವರದಿ ಪಟ್ಟಿಯಲ್ಲಿವೆ.

ಕಸ್ತೂರಿರಂಗನ್‌ ವರದಿ ಜಾರಿಯಿಂದ ತಾಲೂಕಿನ ಶೇ. 37 ಭಾಗ ಸೂಕ್ಷ್ಮವಲಯಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಈ ಯೋಜನೆಯಲ್ಲಿ ಕೆಂಪು, ಕೇಸರಿ ಹಾಗೂ ಹಸಿರು ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದ್ದು ಯಾವುದೆ ರೀತಿಯ ಕಾರ್ಖಾನೆಗಳನ್ನು ತೆರೆಯಲು ಅವಕಾಶವಿರುವುದಿಲ್ಲ. ಇದಲ್ಲದೆ ರೈತರು ತಮ್ಮ ಕೃಷಿ ಭೂಮಿಯಲ್ಲಿ ರಾಸಾಯನಿಕ ಗೊಬ್ಬರಗಳನ್ನು, ಔಷಧಿಗಳನ್ನು ಬಳಸಲು ಅವಕಾಶವಿರುವುದಿಲ್ಲ, ಕಾಫಿ ತೋಟಗಳಲ್ಲಿ ಮರಗಳನ್ನು ಕಡಿಯಲು ಅವಕಾಶವಿರುವುದಿಲ್ಲ, ಮರಳು ತೆಗೆಯುವಂತಿರುವುದಿಲ್ಲ, ವಿದ್ಯುತ್‌ ಉತ್ಪತ್ತಿ ಮಾಡುವಂತಿಲ್ಲ, ದೊಡ್ಡ ದೊಡ್ಡ ಕಟ್ಟಡಗಳನ್ನು ನಿರ್ಮಾಣ ಮಾಡಲು ಅವಕಾಶವಿರುವುದಿಲ್ಲ ಸೇರಿದಂತೆ ಇನ್ನು ಹಲವಾರು ನಿಭಂದನೆಗಳನ್ನು ಹೇರಲಾಗಿದ್ದು ಇದರಿಂದ ಈ ವರದಿ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳ ಜನ ಬದುಕಲು ಅಸಾಧ್ಯವಾಗುವುದಲ್ಲಿ ಅನುಮಾನವಿಲ್ಲ.

ದನ ಮೇಯಿಸಲು, ಸೌದೆ ಕಡಿಯಲು ಸೇರಿದಂತೆ ಸಣ್ಣಪುಟ್ಟ ಅಗತ್ಯಗಳಿಗೆ ಕಾಡುಗಳಿಗೆ ಅನಿವಾರ್ಯವಾಗಿ ಹೋಗಬೇಕಾಗುವ ಸಂಧರ್ಭದಲ್ಲಿ ಜನರು ಕಾಡು ಪ್ರವೇಶ ಮಾಡಲು ಅವಕಾಶವಿಲ್ಲದಂತಾಗುತ್ತದೆ.

ಯೋಜನೆ ಕುರಿತು ಜನರಿಗೆ ಮಾಹಿತಿಯಿಲ್ಲ: ಕಸ್ತೂರಿ ರಂಗನ್‌ ವರದಿಯಿಂದ ಏನಾಗುತ್ತದೆ ಎಂಬುದು ಜನರಿಗೆ ಯಾವುದೆ ಮಾಹಿತಿಯಲ್ಲ. ಕಸ್ತೂರಿ ರಂಗನ್‌ ವರದಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಲ್ಲಿ ರೆಸಾರ್ಟ್‌ ಹಾಗೂ ಹೋಂಸ್ಟೇಗಳು ನಿರ್ಮಾಣವಾಗಿದ್ದು ಒಂದು ವೇಳೆ ಕಸ್ತೂರಿ ರಂಗನ್‌ ವರದಿ ಜಾರಿಯಾದಲ್ಲಿ ಈ ರೆಸಾರ್ಟ್‌ ಹಾಗೂ ಹೋಂಸ್ಟೇಗಳ ಕತೆಗಳೇನು? ದೊಡ್ಡ ದೊಡ್ಡ ಮನೆಗಳನ್ನು ನಿರ್ಮಾಣ ಮಾಡಲು ಅವಕಾಶ ಕೊಡುತ್ತಾರ, ಈ ಯೋಜನೆ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಶಾಲೆ , ಅಂಗನವಾಡಿ, ಆರೋಗ್ಯ ಕೇಂದ್ರಗಳಿದ್ದು ಇದನ್ನು ಏನು ಮಾಡುತ್ತಾರೆ ಎಂಬುದರ ಕುರಿತು ಯಾರಿಗೂ ಮಾಹಿತಿ ಇಲ್ಲ.

ಎತ್ತಿನಹೊಳೆ, ಜಲವಿದ್ಯುತ್‌ ಯೋಜನೆಗಳ ಕಥೆ ಏನು: ಕಸ್ತೂರಿ ರಂಗನ್‌ ವರದಿ ವ್ಯಾಪ್ತಿಯಲ್ಲಿರುವ ಹಲವು ಗ್ರಾಮಗಳಲ್ಲಿ ಎತ್ತಿನಹೊಳೆ ಯೋಜನೆಗಾಗಿ ವಿವಿಧ ಕಾಮಗಾರಿಗಳನ್ನು ನಡೆಸಲಾಗಿದ್ದು ಹಲವಡೆ ಜಲವಿದ್ಯುತ್‌ ಉತ್ಪಾದನ ಘಟಕಗಳು ಸಹ ಇದೆ. ರಾಜ್ಯ ಸರ್ಕಾರ ಇದೇ ನವೆಂಬರ್‌ 2 ರಿಂದ ಎತ್ತಿನಹೊಳೆ ಯೋಜನೆಯ ಟ್ರಯಲ್‌ ರನ್‌ ಮಾಡುತ್ತೇವೆ ಎಂದು ಹೇಳಿದ್ದು, ಮತ್ತೂಂದೆಡೆ ಅರಣ್ಯ ಸಚಿವರು ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ. ಒಂದು ವೇಳೆ ಕಸ್ತೂರಿ ರಂಗನ್‌ ವರದಿ ಅನುಷ್ಠಾನಗೊಂಡರೆ ಎತ್ತಿನಹೊಳೆ ಯೋಜನೆಯಿಂದ ಬರ ಪೀಡಿತ ಪ್ರದೇಶಗಳಿಗೆ ನೀರು ಕೊಡುವುದು ಹೇಗೆ ಸಾಧ್ಯ ಎಂಬ ಪ್ರಶ್ನೆ ಉದ್ಭವವಾಗಿದೆ.

ಕಸ್ತೂರಿ ರಂಗನ್‌ ವರದಿ ಅನುಷ್ಠಾನಗೊಂಡರೆ ಕೇಂದ್ರ ಸರ್ಕಾರದ ಶಿರಾಡಿ ಸುರಂಗ ಹೈವೆ ಮಾರ್ಗ ಅನುಮಾನ: ಕಸ್ತೂರಿ ರಂಗನ್‌ ವರದಿ ವ್ಯಾಫ್ತಿಯಲ್ಲಿ ತಾಲೂಕಿನ ಹೆಗ್ಗದ್ದೆ, ಆಲುವಳ್ಳಿ ಗ್ರಾಮಗಳು ಬರುವುದರಿಂದ ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಶಿರಾಡಿ ಸುರಂಗ ಮಾರ್ಗ ಅನುಷ್ಠಾನಕ್ಕೆ ಬರುತ್ತದೋ ಇಲ್ಲವೊ ಎಂಬ ಪ್ರಶ್ನೆ ಉದ್ಬವವಾಗಿದೆ.
ಜನವಸತಿ ಪ್ರದೇಶಗಳನ್ನು ಯೋಜನಾ ವ್ಯಾಪ್ತಿಯಿಂದ ಹೊರ ಇಡಬೇಕೆಂಬ ಒತ್ತಡವನ್ನು ಬೆಳೆಗಾರ ಸಂಘಟನೆಗಳು ಸರ್ಕಾರದ ಮೇಲೆ ಹೇರುತ್ತಿದ್ದರು ಸಹ ಇದೀಗ ಅರಣ್ಯ ಸಚಿವರು ಕಸ್ತೂರಿ ರಂಗನ್‌ ವರದಿ ಪರ ಬ್ಯಾಟಿಂಗ್‌ ಮಾಡಿರುವುದು ಜನರ ಆತಂಕ ಭುಗಿಳೇಲಲು ಕಾರಣವಾಗಿದೆ.

ಇದೇ ವೇಳೆ ಮುಖ್ಯಮಂತ್ರಿಗಳು ವನ್ಯಪ್ರಾಣಿಗಳ ಉಪಟಳವಿರುವ ಕಡೆ ರೈತರ ಭೂಮಿಗಳನ್ನು ಗಣಿ ಕಂಪನಿಗಳು ಖರಿದೀಸಬೇಕು ಎಂದಿರುವುದು ಹಲುವ ಅನುಮಾನಗಳಿಗೆ ಕಾರಣವಾಗಿದೆ. ಒಂದು ಕಡೆ ರಾಜ್ಯ ಸರ್ಕಾರ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಜಲವಿದ್ಯುತ್‌ ಯೋಜನೆಗಳು, ಎತ್ತಿನಹೊಳೆ ಯೋಜನೆಗಾಗಿ ವ್ಯಾಪಕ ಪರಿಸರವನ್ನು ಮಲೆನಾಡು ಭಾಗದಲ್ಲಿ ಹಾಳುಗೆಡವಿದ್ದು ಇದೀಗ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕಸ್ತೂರಿ ರಂಗನ್‌ ವರದಿಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವುದು ಹಾಸ್ಯಸ್ಪಾದವಾಗಿದೆ.

ಕೆ.ಬಿ ಕೃಷ್ಣಪ್ಪ, ಕಾರ್ಯದರ್ಶಿ, ಕರ್ನಾಟಕ ಬೆಳೆಗಾರರ ಒಕ್ಕೂಟ: ಮಲೆನಾಡಿಗರನ್ನು ಸಂಪೂರ್ಣವಾಗಿ ಒಕ್ಕಲೆಬ್ಬಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ. ಕಸ್ತೂರಿ ರಂಗನ್‌ ವರದಿ ಕುರಿತು ಪಂಚಾಯತಿಗಳಿಗೆ ಮಾಹಿತಿ ನೀಡಬೇಕು, ನಂತರ ಜನಭಿಪ್ರಾಯ ಸಭೆ ಕರೆಯಬೇಕು. ಆದರೆ ಯಾವುದನ್ನು ಮಾಡದೆ ಯೋಜನೆ ಅನುಷ್ಠಾನಗೊಳಿಸಲು ಮುಂದಾದರೆ ಉಗ್ರ ಹೋರಾಟ ಮಾಡಲಾಗುತ್ತದೆ.

ಸುಧೀಶ್‌, ವಕೀಲರು: ಪರಿಸರ ಸಂರಕ್ಷಣೆಗಾಗಿ ಕಸ್ತೂರಿ ರಂಗನ್‌ ವರದಿ ಅವಶ್ಯವಿದೆ. ಆದರೆ ಜನಸಾಮಾನ್ಯರಿಗೆ ಯೋಜನೆ ಕುರಿತು ಯಾವುದೆ ಮಾಹಿತಿ ನೀಡದೆ ಯೋಜನೆಯನ್ನು ಅನುಷ್ಠಾನ ಮಾಡುವುದು ಸರಿಯಲ್ಲ. ಮೊದಲಿಗೆ ಹೆಲ್‌½ ಡೆಸ್ಕ್ಗಳನ್ನು ಮಾಡಿ ಜನರಿಗೆ ಮಾಹಿತಿ ನೀಡಬೇಕು. ಕಸ್ತೂರಿ ರಂಗನ್‌ ವರದಿ ವ್ಯಾಪ್ತಿಯಲ್ಲಿ ಆಲುವಳ್ಳಿ, ಹೆಗ್ಗದ್ದೆ ಗ್ರಾಮಗಳಿದ್ದು ಆದರೆ ಕೇಂದ್ರ ಸರ್ಕಾರ ಇಲ್ಲಿ ಸುರಂಗ ಮಾರ್ಗದ ಮೂಲಕ ರಸ್ತೆ ನಿರ್ಮಾಣ ಮಾಡಲು ಹೊರಟಿದೆ. ಇದು ಯಾವ ರೀತಿ ಸಾಧ್ಯ.
30ಎಸ್‌.ಕೆ.ಪಿ.ಪಿ 2 ಕಸ್ತೂರಿ ರಂಗನ್‌ ವರದಿ ವ್ಯಾಪ್ತಿಯಲ್ಲಿ ಬರುವ ಸಕಲೇಶಪುರ ತಾಲೂಕಿನ ಕಾಡುಮನೆ ಟೀ ಎಸ್ಟೇಟ್‌

ಟಾಪ್ ನ್ಯೂಸ್

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.