ಬುಜ್ಜಿ ಭೀಮ; ರೈತ ಸಾಕಿದ ಅಜಾನುಬಾಹು ಕೋಣಕ್ಕೆ ಭಾರೀ ಬೇಡಿಕೆ


Team Udayavani, Jul 30, 2023, 9:49 PM IST

1-ca-saasd

ಮಹಾಲಿಂಗಪುರ : ಜಾನುವಾರುಗಳು ನಮ್ಮ ರೈತರ ನಿಜವಾದ ಮಿತ್ರರು ಹಾಗೂ ಜಾನುವಾರು ಸಾಕಾಣಿಕೆಯು ಕೃಷಿಯ ಒಂದು ಭಾಗವಾಗಿದೆ. ಜಾನುವಾರುಗಳು ಇದ್ದರೇ ಮಾತ್ರ ರೈತ, ಇಲ್ಲದಿದ್ದರೇ ಅವನು ನಿಜವಾದ ರೈತನೇ ಅಲ್ಲ ಎಂಬ ಮಾತುಗಳು ನಮ್ಮ ಗ್ರಾಮೀಣ ಭಾಗದಲ್ಲಿ ಇಂದಿಗೂ ಕೇಳಿಬರುತ್ತವೆ. ಹಾಲು ಕೊಡುವ ಎಮ್ಮೆಗಳ ಜೊತೆಗೆ ಕೋಣವನ್ನು ಬೆಳೆಸಿ ಎಲ್ಲ ರೈತರ ಗಮನ ಸೆಳೆಯುತ್ತಿರುವ ಅಪರೂಪದ ಯುವ ರೈತನೊಬ್ಬನ ಮಾದರಿ ಜಾನುವಾರು ಸಾಕಾಣಿಕೆಯ ಪ್ರೀತಿಯನ್ನು ಇಲ್ಲಿ ಕಾಣಬಹುದಾಗಿದೆ.

ಜಾನುವಾರು ಪ್ರೀತಿ
ಮಹಾಲಿಂಗಪುರ ಪಟ್ಟಣದ ಹೊರವಲಯದಲ್ಲಿನ ರನ್ನಬೆಳಗಲಿ ಸರಹದ್ದಿನಲ್ಲಿರುವ ಸಿದ್ದು ಮಹಾದೇವ ಧರಿಗೌಡರ ಕೇವಲ ಎರಡುವರೆ ಎಕರೆ ಜಮೀನು ಹೊಂದಿದ ರೈತನಾಗಿದ್ದು. ಇವರು ಎರಡು ಸಾಮಾನ್ಯ ಎಮ್ಮೆಗಳು, ಕರುಗಳು, ಆಡುಗಳ ಜೊತೆಗೆ ಮನೆಯಲ್ಲಿಯೇ ಹುಟ್ಟಿದ ಗುಜರಾತಿನ ಮರ‍್ರಾ ತಳಿಯ ಕೋಣವನ್ನು ಮನೆಯ ಮಗನಂತೆ ಕಾಳಜಿವಹಿಸಿ ಬೆಳೆಸಿ ಸಾಕುತ್ತಿರುವದು ವಿಶೇಷ. ಇವರ ಸಹೋದರ, ಖಾಸಗಿ ಬ್ಯಾಂಕ್ ಉದ್ಯೋಗಿ ಶ್ರೀಶೈಲ ಧರಿಗೌಡರ ಇವರ ಜಾನುವಾರು ಪ್ರೀತಿಗೆ ಬೆಂಬಲವಾಗಿ ನಿಂತಿದ್ದಾರೆ.

ಕೋಣಕ್ಕೂ ಹುಟ್ಟುಹಬ್ಬದ ಸಂಭ್ರಮ
ಸಿದ್ದು ಅವರು ಸಾಕಿದ ಕೋಣಕ್ಕೆ ರವಿವಾರ ಎರಡನೇ ವರ್ಷದ ಹುಟ್ಟು ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಮನೆಯ ಎಮ್ಮೆ ಹಾಕಿದ ಗಂಡು ಕರುವನ್ನು ಪ್ರೀತಿಯಿಂದ ಮನೆಯ ಸದಸ್ಯನಂತೆ ಸಾಕಿದ್ದಾರೆ. ಅದಕ್ಕೆ ಬುಜ್ಜಿ ಮತ್ತು ಭೀಮ ಎಂಬ ಹೆಸರಿಟ್ಟಿದ್ದಾರೆ. ರವಿವಾರಕ್ಕೆ ಎರಡು ವರ್ಷ ತುಂಬಿದ ಬುಜ್ಜಿಗೆ ಸಂಭ್ರಮದಿಂದ ಹುಟ್ಟುಹಬ್ಬವನ್ನು ಆಚರಿಸಿದರು.

ಕೋಣದ ಹುಟ್ಟುಹಬ್ಬದ ದಿನ ರವಿವಾರ ಮುಂಜಾನೆ ಮೈ ತೊಳೆದು, ಬಣ್ಣ ಬಣ್ಣದ ಹಗ್ಗ, ರಿಬ್ಬನ್, ಮತ್ತು ಹೂಮಾಲೆಯೊಂದಿಗೆ ಅಲಂಕರಿಸಿ ಕೋಣದ ಭಾವಚಿತ್ರವಿರುವ ಬ್ಯಾನರ್ ತಯಾರಿಸಿ, ಪೆಂಡಾಲ್ ಹಾಕಿಸಿ, ಕೇಕ್ ಕತ್ತರಿಸಿ ನೂರಾರು ರೈತ ಬಾಂಧವರನ್ನು, ಬೀಗರನ್ನು ಆಹ್ವಾನಿಸಿ ಊಟ ಮಾಡಿಸುವ ಮೂಲಕ ಬುಜ್ಜಿ(ಭೀಮ)ಬರ್ತಡೇ ಮಾಡಿ ಗಮನ ಸೆಳೆದರು. ಫೋಟೋ ಗ್ರಾಫರ್‌ನ ಕರೆಸಿ ಎಲ್ಲ ಗೆಳೆಯರು ಮತ್ತು ಕುಟುಂಬದ ಸದಸ್ಯರನ್ನು ಕರೆದುಕೊಂಡು ಬುಜ್ಜಿ ಜೊತೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು.

ಆನೆಯಲ್ಲ, ಅಜಾನುಬಾಹು ಕೋಣ
ಕೇವಲ ಎರಡು ವರ್ಷದ ಕೋಣವು ನೋಡಲು 4-5 ವರ್ಷದ ಕೋಣದಂತೆ ಕಾಣಿಸುತ್ತದೆ. ಈ ಕೋಣಕ್ಕೆ ಮೇವಿನೊಂದಿಗೆ ನಿತ್ಯ 6 ಲೀಟರ್ ಹಾಲು, 3 ಕೆಜಿ ಹಿಂಡಿ, 2 ಕೆಜಿ ಹಿಟ್ಟು, ಆಗಾಗ ಆಪಲ್ ಹಣ್ಣುಗಳನ್ನು ತಿನ್ನಿಸುತ್ತಾರೆ. ಜೊತೆಗೆ ನಿತ್ಯ 3 ಕೀಮಿ ವಾಕಿಂಗ್ ಮಾಡಿಸುತ್ತಿರುವದು ವಿಶೇಷ. ಯಾವುದಕ್ಕೂ ಕಡಿಮೆ ಮಾಡದೇ ಕಾಳಜಿಯಿಂದ ಮೇಯಿಸಿದ ಪರಿಣಾಮ ಕೋಣವು ಎರಡು ವರ್ಷದಲ್ಲಿ ದಷ್ಟಪುಷ್ಟವಾಗಿ ಬೆಳೆದು ಆನೆಯಂತೆ ಕಾಣುತ್ತಿದೆ. ಸಾಮಾನ್ಯ ಕೋಣ 4-5 ವರ್ಷದ ನಂತರ ಯಾವ ಗಾತ್ರ ಬೆಳೆಯುತ್ತದೆಯೋ ಆ ಗಾತ್ರದಷ್ಟು ಎರಡೇ ವರ್ಷದಲ್ಲಿ ಬೆಳೆದಿರುವುದು ವಿಶೇಷ. ಇದರ ಗಾತ್ರ, ಅಂದ ಚೆಂದ ನೋಡಿದವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಹೋಗುತ್ತಿದ್ದಾರೆ.

3 ಲಕ್ಷಕ್ಕೂ ಅಧಿಕ ಬೇಡಿಕೆ
ಈ ಅಜಾನುಬಾಹು ಕೋಣವನ್ನು ಕೆಲವರು ಈಗಾಗಲೇ 3 ಲಕ್ಷ ರೂ. ಬೆಲೆ ಕಟ್ಟಿ ಖರೀದಿಸಲು ಕೇಳಿದ್ದಾರೆ. ಆದರೂ ಸಿದ್ದು ಇದನ್ನು ಮಾರಿಲ್ಲ. ಕೋಣವು ಹಲ್ಲು ಹಚ್ಚಲು ಇನ್ನು ಒಂದು ವರ್ಷಬೇಕು. ನಮಗೆ ಲಾಭದ ಉದ್ದೇಶವಿಲ್ಲ, ಬಹಳ ಪ್ರೀತಿಯಿಂದ ಸಾಕುತ್ತಿದ್ದೇವೆ. ಸದ್ಯಕ್ಕೆ ಮಾರಾಟ ಮಾಡುವದಿಲ್ಲ ಎನ್ನುತ್ತಾರೆ ಸಿದ್ದು ಧರಿಗೌಡರ.

ಕೋಣ ಎಂಬುದು ದಡ್ಡನಿಗೆ ಬಳಸುವ ಬೈಗುಳ ಮತ್ತು ಯಮನ ವಾಹನ ಎಂಬ ನಕಾರಾತ್ಮಕ ಸಂಬೋಧನೆ ಎಂಬ ಅಭಿಪ್ರಾಯವಿದೆ. ಎಮ್ಮೆ ಸಾಕಿದರೆ ಹೈನು, ಕೋಣ ಸಾಕಿದರೆ ಏನು? ಎಂಬ ತಾತ್ಸಾರವೂ ಜನರಲ್ಲಿದೆ. ಎಮ್ಮೆ ಗಂಡು ಕರುವಿಗೆ ಜನ್ಮವಿತ್ತರೆ ಅಯ್ಯೋ ಕೋಣ ಹುಟ್ಟಿತು ಎಂದು ಮೂಗು ಮುರಿಯುವವರೂ ಇದ್ದಾರೆ. ಈ ಎಲ್ಲ ಉದ್ಗಾರಗಳ ಮಧ್ಯೆ ಕೋಣವನ್ನು ಪ್ರೀತಿಯಿಂದ ಸಾಕಿ, ಮಮತೆಯಿಂದ ಮೇಯಿಸಿ ಕುಟುಂಬ ಸದಸ್ಯರಂತೆ ಆರೈಕೆ ಮಾಡುತ್ತಿರುವ ರೈತ ಸಿದ್ದು ಧರಿಗೌಡರ ಅವರ ಜಾನುವಾರು ಪ್ರೀತಿ ಕಾರ್ಯ ಇತರರಿಗೆ ಮಾದರಿಯಾಗಿದೆ.
– ಗಿರೀಶ ಶಿರೋಳ. ಪ್ರಗತಿಪರ ರೈತರು. ರನ್ನಬೆಳಗಲಿ.

ಮೊದಲಿನಿಂದಲೂ ಜಾನುವಾರುಗಳೆಂದರೆ ಹೆಚ್ಚು ಪ್ರೀತಿ, ನಾವು ಅವುಗಳನ್ನು ಸಾಕುತ್ತೇವೆ ಎನ್ನುವುದಕ್ಕಿಂತ ಅವುಗಳೇ ನಮಗೆ ಲಾಭದಾಯಕ ಜೀವಿಗಳು. ಆದ್ದರಿಂದ ಈ ಕೋಣಕ್ಕೆ ಸಾತ್ವಿಕ ಆಹಾರ ತಿನ್ನಿಸಿ ಅಜಾನುಬಾಹುವಾಗಿ ಬೆಳೆಸಿದ್ದೇನೆ. ನೋಡಲು ದೊಡ್ಡ ಗಾತ್ರವಿದ್ದರೂ ಯಾರನ್ನೂ ಹಾಯಿವುದಿಲ್ಲ, ಮಕ್ಕಳಾದಿಯಾಗಿ ಎಲ್ಲರೊಂದಿಗೆ ಆಪ್ತವಾಗಿ ಸ್ಪಂದಿಸುತ್ತದೆ. ಅದರ ಮಾನವೀಯ ಗುಣ ನೋಡಿ ನಮಗೂ ಪ್ರೀತಿ ಹೆಚ್ಚಾಗಿ ನಮ್ಮಂತೆ ಅದಕ್ಕೂ ಬರ್ತಡೇ ಮಾಡಿ ಕೇಕ್ ತಿನ್ನಿಸಿ, ಸಂಭ್ರಮಿಸಿದ್ದೇವೆ. ಮುಂಬರುವ ದಿನಗಳಲ್ಲಿ ಕೋಣವನ್ನು ಕೃಷಿಮೇಳಗಳಲ್ಲಿ ನಡೆಯುವ ಜಾನುವಾರು ಪ್ರದರ್ಶನಕ್ಕೆ ಒಯ್ಯಬೇಕೆಂಬ ಇಚ್ಛೆ ಇದೆ.
– ಸಿದ್ದು ಮಹಾದೇವ ಧರಿಗೌಡರ ಕೋಣದ ಮಾಲೀಕ, ರನ್ನಬೆಳಗಲಿ.

ವರದಿ : ಚಂದ್ರಶೇಖರ ಮೋರೆ. ಮಹಾಲಿಂಗಪುರ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ರೈತರಿಗೆ ಚಿಂತೆ ಹಚ್ಚಿದ ಚಿತ್ತಿ ಮಳೆ- ಈರುಳ್ಳಿ ಬೆಳೆಗಾರರ ಕಣ್ಣೀರು!

ಬಾಗಲಕೋಟೆ: ರೈತರಿಗೆ ಚಿಂತೆ ಹಚ್ಚಿದ ಚಿತ್ತಿ ಮಳೆ- ಈರುಳ್ಳಿ ಬೆಳೆಗಾರರ ಕಣ್ಣೀರು!

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

ಹಾನಗಲ್ಲ: ಮನುಕುಲಕ್ಕೆ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.