ವೇತನಕ್ಕೆ ಇನ್ನೊಂದೇ ದಿನ ಬಾಕಿ: ಇಕ್ಕಟ್ಟಿನಲ್ಲಿ KSRTC

- ಸರಕಾರದಿಂದ ಬಾರದ "ಶಕ್ತಿ" ಅನುದಾನ; ಸಾರಿಗೆ ನೌಕರರಿಗೆ ಸಂಬಳದ್ದೇ ಚಿಂತೆ

Team Udayavani, Jul 30, 2023, 10:50 PM IST

ksrtc bus

ಬೆಂಗಳೂರು: ಸರಕಾರದ ಮೊದಲ ಗ್ಯಾರಂಟಿ “ಶಕ್ತಿ”ಗೆ 50 ದಿನಗಳ ಸಂಭ್ರಮ. ಈ ಅವಧಿಯಲ್ಲಿ ಹೆಚ್ಚು-ಕಡಿಮೆ 28 ಕೋಟಿ ಮಹಿಳೆಯರು ಫ‌ಲಾನುಭವಿಗಳಾಗಿದ್ದಾರೆ. ಆದರೆ ಇದಕ್ಕೆ ಪ್ರತಿಯಾಗಿ ಸರಕಾರದಿಂದ ಬರಬೇಕಾದ ಅನುದಾನ ಇನ್ನೂ ಬಂದಿಲ್ಲ. ಮತ್ತೂಂದೆಡೆ ವೇತನ ಪಾವತಿಗೆ ಕೇವಲ ಒಂದು ದಿನ ಬಾಕಿ ಇದ್ದು, ಸಾರಿಗೆ ನಿಗಮಗಳು ಇಕ್ಕಟ್ಟಿಗೆ ಸಿಲುಕಿವೆ.

ಸಾಮಾನ್ಯವಾಗಿ 35 ಸಾವಿರ ಸಾರಿಗೆ ನೌಕರರು ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದಲ್ಲಿ ಪ್ರತಿ ತಿಂಗಳ 1ನೇ ತಾರೀಕಿಗೆ ವೇತನ ಪಾವತಿ ಆಗುತ್ತಿತ್ತು. ಆದರೆ ಈ ಸಲ “ಶಕ್ತಿ’ ಯೋಜನೆ ಬಸ್‌ಗಳಲ್ಲಿ ಸಂಚರಿಸುವ ಎಲ್ಲ ಮಹಿಳೆಯರಿಗೆ ನಿಗಮವು ಉಚಿತ ಪ್ರಯಾಣ ಸೇವೆ ಕಲ್ಪಿಸುತ್ತಿದ್ದು, ಅದರ ಮೊತ್ತ ಒಟ್ಟಾರೆ ಆದಾಯದ ಅರ್ಧದಷ್ಟಾಗುತ್ತದೆ. ಇದನ್ನು ಸರಕಾರವೇ ಭರಿಸುವುದಾಗಿ ಹೇಳಿದೆ. ಆದರೆ ಇನ್ನೂ ಜೂನ್‌ ಮತ್ತು ಜುಲೈ ತಿಂಗಳ ಅನುದಾನವೂ ಬಂದಿಲ್ಲ. ಒಂದು ವೇಳೆ ಸಕಾಲದಲ್ಲಿ ಬಿಡುಗಡೆಯಾಗದಿದ್ದರೆ, ನೌಕರರ ವೇತನ ಪಾವತಿ ವಿಳಂಬವಾಗುವ ಸಾಧ್ಯತೆ ಇದೆ.

ನಿಗಮಗಳು ನೀಡುವ ಲೆಕ್ಕದ ಪ್ರಕಾರದ ನಾಲ್ಕೂ ನಿಗಮಗಳಿಗೆ ಸರಕಾರದಿಂದ ಸುಮಾರು 680 ಕೋಟಿ ರೂ. ಬರಬೇಕಿದೆ. ಇದರಲ್ಲಿ ಜೂನ್‌ 11ರಿಂದ 30ರ ವರೆಗಿನ ಮೊತ್ತವೇ 248 ಕೋಟಿ ರೂ. ಆಗಿದೆ. ಉಳಿದ 420 ಕೋಟಿ ಜುಲೈ 1ರಿಂದ 30ರ ವರೆಗಿನದ್ದು. ಈ ಪೈಕಿ ಕೆಎಸ್‌ಆರ್‌ಟಿಸಿ ಪಾಲೇ 260 ಕೋಟಿ ರೂ. ಆಗುತ್ತದೆ.

ನಾಲ್ಕೂ ಸಾರಿಗೆ ನಿಗಮಗಳಿಗೆ ಪ್ರಸ್ತುತ ಬರುತ್ತಿರುವ ಆದಾಯ ಬಹುತೇಕ ಡೀಸೆಲ್‌ ಪಾವತಿಗೇ ಹೋಗುತ್ತಿದೆ. ವೇತನ, ಬಸ್‌ ಟೈರ್‌, ಟ್ಯೂಬ್‌ನಿಂದ ಹಿಡಿದು ಎಲ್ಲ ಉಪಕರಣಗಳ ಖರೀದಿಗೆ ಅವಲಂಬನೆ ಅನಿವಾರ್ಯ ಆಗಿದೆ. ಈ ಮಧ್ಯೆ ನೂರಾರು ಕೋಟಿ ರೂಪಾಯಿ ಸಾಲವಿದ್ದು, ಅದರ ಬಡ್ಡಿಯೇ ಕೋಟ್ಯಂತರ ರೂಪಾಯಿ ಆಗಿಬಿಟ್ಟಿದೆ.

ಸಚಿವರ ಚರ್ಚೆ; ಬಿಡುಗಡೆ ವಿಶ್ವಾಸ
ಇದರ ಅರಿವು ಸರಕಾರಕ್ಕೂ ಇದೆ. ಹಾಗಾಗಿ ವಿಳಂಬಕ್ಕೆ ಅವಕಾಶ ಕೊಡುವುದಿಲ್ಲ. “ಶಕ್ತಿ’ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ಇದಕ್ಕೆ ಬಜೆಟ್‌ನಲ್ಲಿ ಈಗಾಗಲೇ 2,800 ಕೋಟಿ ರೂ. ಮೀಸಲಿಟ್ಟಿದ್ದು, ಅನುಮೋದನೆಯೂ ಸಿಕ್ಕಿದೆ. ಎರಡು ದಿನಗಳ ಹಿಂದೆಯಷ್ಟೇ ರಾಜ್ಯಪಾಲರ ಅಂಕಿತ ಮುದ್ರೆಬಿದ್ದಿದೆ. ಒಂದೆರಡು ದಿನಗಳಲ್ಲಿ ನಿಗಮದ ಖಾತೆಗೆ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಯೊಬ್ಬರು ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಈ ಸಂಬಂಧ ಈಗಾಗಲೇ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ತಿಂಗಳ ಕೊನೆಯ ವಾರದಲ್ಲಿ ಬಜೆಟ್‌ಗೆ ಅನುಮೋದನೆ ಸಿಕ್ಕಿದೆ. ಬೆನ್ನಲ್ಲೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವ ಪ್ರಕ್ರಿಯೆ ಕೂಡ ಸರಕಾರದ ಮಟ್ಟದಲ್ಲಿ ತ್ವರಿತ ಗತಿಯಲ್ಲಿ ನಡೆದಿದೆ. ಸದ್ಯಕ್ಕೆ “ಶಕ್ತಿ’ ಯೋಜನೆ ಅಡಿ ಅನುದಾನ ಬಿಡುಗಡೆ ಆಗಿಲ್ಲ. ಆದರೆ ಶೀಘ್ರ ಬರಲಿದ್ದು, ಎಂದಿನಂತೆ ನೌಕರರಿಗೆ ವೇತನವೂ ಪಾವತಿ ಆಗಲಿದೆ.
– ವಿ. ಅನ್ಶುಕುಮಾರ್‌, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ.

ಜುಲೈ 29ರ ಅಂತ್ಯಕ್ಕೆ
* 28.87 ಕೋಟಿ ಒಟ್ಟು 50 ದಿನಗಳಲ್ಲಿ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸಿದ ಮಹಿಳೆಯರು
* 675 ಕೋಟಿ ರೂ. ಪ್ರಯಾಣಿಕರ ಟಿಕೆಟ್‌ ಮೊತ್ತ
* 255 ಕೋಟಿ ರೂ. ಕೆಎಸ್‌ಆರ್‌ಟಿಸಿಗೆ ಸರಕಾರದಿಂದ ಬರಬೇಕಾದ ಮೊತ್ತ
* 120.75 ಕೋಟಿ ರೂ. ಬಿಎಂಟಿಸಿಗೆ ಬರಬೇಕಾದ ಮೊತ್ತ
* 169 ಕೋಟಿ ರೂ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಬರಬೇಕಾದ ಮೊತ್ತ
* 129.20 ಕೋ. ರೂ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಬರಲಿರುವ ಅನುದಾನ

ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.