![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 31, 2023, 12:40 PM IST
ಲಕ್ನೋ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ವಿಷಯ ಮತ್ತೊಮ್ಮೆ ವಿವಾದ ರೂಪವನ್ನು ಪಡೆಯುತ್ತಿದೆ. ಜ್ಞಾನವಾಪಿಯನ್ನು ಮಸೀದಿ ಎಂದು ಕರೆದರೆ ಅದು ತಪ್ಪಾಗುತ್ತದೆ, ಜ್ಞಾನವಾಪಿ ಮಸೀದಿ ಎಂದು ಕರೆಯುವುದಾದರೆ ಅದರೊಳಗೆ ತ್ರಿಶೂಲ ಹೇಗೆ ಬಂತು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪ್ರಶ್ನೆ ಮಾಡಿದ್ದಾರೆ.
ವಾರಣಾಸಿ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಕ್ಯಾಂಪಸ್ನ ವಿವಾದಿತ ವಾಜು ಖಾನಾ ಭಾಗವನ್ನು ಹೊರತುಪಡಿಸಿ ಎಲ್ಲಾ ಪ್ರದೇಶಗಳ ಎಎಸ್ಐ ಸಮೀಕ್ಷೆಗೆ ಆದೇಶಿಸಿತ್ತು. ಈ ಆದೇಶದ ವಿರುದ್ಧ ಮಸೀದಿ ಸಮಿತಿ ಪರವಾಗಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಸರ್ವೆ ನಿಲ್ಲಿಸಿದ ಸುಪ್ರೀಂ ಕೋರ್ಟ್ ಪ್ರಕರಣವನ್ನು ಹೈಕೋರ್ಟ್ಗೆ ವರ್ಗಾಯಿಸಿತು. ಹೈಕೋರ್ಟ್ ವಿಚಾರಣೆಯನ್ನು ಪೂರ್ಣಗೊಳಿಸಿದೆ. ಎಎಸ್ಐ ಸಮೀಕ್ಷೆಯ ಕುರಿತು ನಿರ್ಧಾರ ಇನ್ನಷ್ಟೇ ಹೊರಬೀಳಲಿದೆ.
ಇನ್ನೊಂದೆಡೆ ಈ ವಿಚಾರದಲ್ಲಿ ರಾಜಕೀಯ ಬಿಸಿ ಏರತೊಡಗಿದೆ. ಒಂದೆಡೆ ಸಮಾಜವಾದಿ ಪಕ್ಷದ ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿಯವರು ಪ್ರತಿ ಮಸೀದಿಯಲ್ಲಿ ದೇವಾಲಯವನ್ನು ಹುಡುಕಿದರೆ ಜನರು ಪ್ರತಿ ದೇವಾಲಯದಲ್ಲಿ ಬೌದ್ಧ ಮಠವನ್ನು ಹುಡುಕಲು ಪ್ರಾರಂಭಿಸುತ್ತಾರೆ ಎಂದು ಹೇಳಿದ್ದಾರೆ..
ಅದೇ ಸಮಯದಲ್ಲಿ ಇದೀಗ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ದೊಡ್ಡ ಹೇಳಿಕೆಯೊಂದು ಮುನ್ನೆಲೆಗೆ ಬಂದಿದೆ. ಜ್ಞಾನವಾಪಿ ಮಸೀದಿ ಎಂದು ಕರೆದರೆ ವಿವಾದವಾಗುತ್ತದೆ ಎಂದು ಹೇಳಿದ್ದಾರೆ. ಮುಸ್ಲಿಂ ಕಡೆಯಿಂದ ತಪ್ಪು ನಡೆದಿದ್ದರೆ ಅವರ ಕಡೆಯಿಂದ ಪ್ರಸ್ತಾವನೆ ಬರಬೇಕು.
ಜ್ಞಾನವಾಪಿ ಒಳಗೆ ದೇವಾನುದೇವತೆಗಳಿವೆ, ಜ್ಞಾನವಾಪಿ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಸರಕಾರ ಪ್ರಯತ್ನಿಸುತ್ತಿದೆ. ಮಸೀದಿ ಒಳಗೆ ಹಿಂದೂಗಳು ಪ್ರತಿಮೆಯನ್ನು ಇಟ್ಟಿಲ್ಲ ಆದರೆ ಒಳಗೆ ತ್ರಿಶೂಲ, ಜೋತಿರ್ಲಿಂಗ ಇದೆ. ಹಾಗಾಗಿ ಜ್ಞಾನವಾಪಿ ಮಸೀದಿ ಎಂದು ಕರೆದರೆ ವಿವಾದವಾಗುತ್ತದೆ ಎಂದು ಸಿಎಂ ಯೋಗಿ ಹೇಳಿದ್ದಾರೆ. ಮುಸ್ಲಿಂ ಸಮಾಜದಿಂದ ಚಾರಿತ್ರಿಕ ಪ್ರಮಾದ ನಡೆದಿದ್ದು, ಅದನ್ನು ಬಗೆಹರಿಸಲು ಮುಸ್ಲಿಂ ಸಮಾಜ ಮುಂದಾಗಬೇಕು. ಒಂದು ವೇಳೆ ಜ್ಞಾನವಾಪಿ ಮಸೀದಿಯಾಗಿದ್ದರೆ ಅಲ್ಲಿ ತ್ರಿಶೂಲ ಯಾಕೆ ಬಂತು ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಸ್ಫೋಟಕ ವಸ್ತು ಪತ್ತೆ… ಬಾಂಬ್ ನಿಷ್ಕ್ರಿಯ ತಂಡ ದೌಡು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.