ಸರ್ಕಾರದ ಧ್ಯೆಯೋದ್ದೇಶ ಅರಿತು ಉತ್ತಮ ಆಡಳಿತ ನೀಡಬೇಕು: ಸಚಿವ ಕೃಷ್ಣ ಬೈರೇಗೌಡ


Team Udayavani, Jul 31, 2023, 2:31 PM IST

ಸರ್ಕಾರದ ಧ್ಯೆಯೋದ್ದೇಶ ಅರಿತು ಉತ್ತಮ ಆಡಳಿತ ನೀಡಬೇಕು: ಸಚಿವ ಕೃಷ್ಣ ಬೈರೇಗೌಡ

ಕಲಬುರಗಿ: ಕಂದಾಯ ಇಲಾಖೆಯು ಸರ್ಕಾರದ‌ ಮಾತೃ ಇಲಾಖೆಯಾಗಿದ್ದು, ಇಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿಗಳು ಸಹ ಮಾತೃ ಹೃದಯಿಗಳಾಗಿರಬೇಕು. ಸರ್ಕಾರದ ಉದ್ದೇಶ ಮತ್ತು ಧ್ಯೆಯೋದ್ದೇಶಗಳನ್ನು ಅರಿತು ಜನರಿಗೆ ಉತ್ತಮ ಆಡಳಿತ ನೀಡಬೇಕು ಎಂದು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಭಾಗದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಮವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರೊಂದಿಗೆ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ. ಅಡಳಿತದಲ್ಲಿ ಬದಲಾವಣೆ ತರಬೇಕು. ಸರಳೀಕರಣಕ್ಕೆ ಆದ್ಯತೆ ಕೊಡಿ. ಕಂದಾಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುವ ಅಧಿಕಾರಿ-ಸಿಬ್ಬಂದಿಗಳು ತಂಡದ ರೂಪದಲ್ಲಿ ಕಾರ್ಯನಿರ್ವಹಿಸಬೇಕು ಎಂದ‌ ಸಚಿವರು, ಕಂದಾಯ ಸಚಿವನಾದ ಮೇಲೆ ಈಗಾಗಲೆ ಬೆಳಗಾವಿ‌ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ್ದು, ಇಂದು‌ ಇಲ್ಲಿ ನಡೆಸಲಾಗುತ್ತಿದೆ. ಮುಂದೆ ಜಿಲ್ಲಾವಾರು ಸಹ ಪ್ರಗತಿ ಪರಿಶೀಲನೆ ಮಾಡುವುದಾಗಿ ಹೇಳಿದರು.

ಕಳೆದ ಜೂನ್ ಮತ್ತು ಜುಲೈನಲ್ಲಿ ಸುರಿದ ಮಳೆಯಿಂದಾಗಿ ವಿಭಾಗದಲ್ಲಿ ನೆರೆ ಹಾವಳಿಯಿಂದ ಮಾನವ ಮತ್ತು ಜಾನುವಾರುಗಳ ಜೀವ ಹಾನಿ‌, ಕೃಷಿ ಬಿತ್ತನೆ ಕುರಿತು ಆಯಾ‌ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಮಾನವ ಸಾವು ಪ್ರಕರಣದಲ್ಲಿ ಜನರಿಗೆ ಪರಿಹಾರ ನೀಡುವುದು ಮುಖ್ಯವಲ್ಲ. ಅವರನ್ನು ಬದುಕಿಸುವುದು ನಮ್ಮ ಆದ್ಯತೆ ಆಗಬೇಕು. ಅದಕ್ಕಾಗಿ ಮಳೆಗಾಲ ಸಂದರ್ಭದಲ್ಲಿ ವಹಿಸಬೇಕಾದ ‌ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆಡಳಿತ ವರ್ಗ ಹೆಚ್ಚಿನ ಗಮನ ನೀಡಬೇಕಿದೆ ಎಂದರು.

ಕಷ್ಟದಲ್ಲಿದ್ದವರಿಗೆ ಪರಿಹಾರ ವಿತರಣೆ ಮಾಡುವುದು ಒಳ್ಳೆಯದ್ದೆ. ನೊಂದವರಿಗೆ ಸರ್ಕಾರ ಸಹಾಯ ಹಸ್ತ ಚಾಚುವುದು ಉತ್ತಮ. ಆದರೆ ಇದನ್ನು ದುರಪಯೋಗವಾಗಬಾರದು ಎಂಬುದು ನಮ್ಮ‌ ಕಳಕಳಿಯಾಗಿದೆ. ವಿಪತ್ತು ನಿರ್ವಹಣೆ ಹೆಸರಿನಲ್ಲಿ ಹಣ ದುರಪಯೋಗವಾದಲ್ಲಿ ಅದು ಕೆಟ್ಟ ಆಡಳಿತಕ್ಕೆ ಅವಕಾಶ ಮಾಡಿಕೊಡುತ್ತದೆ. ಪರಿಹಾರ ವಿತರಣೆಯ ಕೆಲವೊಂದು ಪ್ರಕರಣದಲ್ಲಿ ಸ್ಯಾಟಲೈಟ್ ಫೋಟೋ ಗಳನ್ನು ಪರೀಕ್ಷಿಸಿ ಜಿಲ್ಲಾಧಿಕಾರಿಗಳು ಪರಿಹಾರ ನೀಡಬೇಕು ಎಂದು ಕಂದಾಯ ಸಚಿವ‌ ಕೃಷ್ಣ ಬೈರೇಗೌಡ ತಿಳಿಸಿದರು.

ಭೂಮಿ ತಂತ್ರಾಂಶದಲ್ಲಿ ಪಹಣಿ ಪತ್ರಿಕೆ ತಿದ್ದುಪಡಿ, ವರ್ಗಾವಣೆ ವಿಷಯ ಕುರಿತು ಚರ್ಚೆಯಲ್ಲಿ ಕಲಬುರಗಿ ವಿಭಾಗದಲ್ಲಿ 6 ತಿಂಗಳಿನಿಂದ 5 ವರ್ಷದೊಳಗಿನ 5,266 ಪ್ರಕರಣಗಳು ಬಾಕಿ ಇರುವುದನ್ನು ಗಮನಿಸಿದ ಸಚಿವ ಕೃಷ್ಣ‌ ಬೈರೇಗೌಡ ಅವರು, ಇಂತಹ ಪ್ರಕರಣಗಳಿಂದಲೇ ಜನರು ಬೇಸತ್ತು ಹೋಗಿ ನನ್ನನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಬರುತ್ತಿದ್ದಾರೆ ಎಂದು‌ ಬೇಸರ ವ್ಯಕ್ತಪಡಿಸಿದರು. ಮ್ಯುಟೇಷನ್ ಡಿಸ್ಪೂಟ್ ಪ್ರಕರಣಗಳನ್ನು 4-5 ವಿಚಾರಣೆಗಳಲ್ಲಿ‌ ಮುಗಿಸಿ ಜನರಿಗೆ ನೆಮ್ಮದಿ ಕಲ್ಪಿಸಿ ಎಂದು ತಹಶೀಲ್ದಾರರಿಗೆ ಖಡಕ್ ಸೂಚನೆ ನೀಡಿದರು.

ಸಿಡಿಲು, ಮಿಂಚು ಕುರಿತು ಅರಿವು ಮೂಡಿಸಿ: ಕಲಬುರಗಿ ವಿಭಾಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ 3 ತಿಂಗಳಿನಲ್ಲಿ 24 ಸೇರಿದಂತೆ ರಾಜ್ಯದಲ್ಲಿ ಈ ವರ್ಷ ಸಿಡಿಲು, ಮಿಂಚಿನಿಂದ 80 ಜನ ಸಾವನಪ್ಪಿದ್ದಾರೆ. ಸಿಡಿಲು ಕುರಿತು ಹೆಚ್ಚಿನ ಅರಿವು ನೀಡಿದಲ್ಲಿ ಈ ಸಾವು ತಪ್ಪಿಸಬಹುದಿತ್ತು. ಜಿಲ್ಲಾಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ಗಮನ ಕೊಡಿ. ಮಳೆಗಾಲ‌ ಸಂದರ್ಭದಲ್ಲಿ ಸಿಡಿಲಿನಿಂದ ಸಾವನಪ್ಪುವರ ಸಂಖ್ಯೆ ಇತ್ತೀಚಿನ‌ ವರ್ಷದಲ್ಲಿ ಹೆಚ್ಚುತ್ತಿದೆ. ಅರಿವಿನ ಕೊರತೆಯೇ ಇದಕ್ಕೆ ಮುಖ್ಯ ಕಾರಣ. ಇದನ್ನು ನಿಯಂತ್ರಿಸಬೇಕಿದೆ. ನೊಂದ ಕುಟುಂಬಗಳಿಗೆ ಸರ್ಕಾರ 24 ಗಂಟೆಯಲ್ಲಿ ಪರಿಹಾರ ನೀಡಬಹುದು, ಆದರೆ ಹೋದ ಜೀವ ಮತ್ತೆ ಮರುಕಳಿಸಲು ಸಾಧ್ಯವಿಲ್ಲ ಎಂದರು.

ವಿಪತ್ತು ನಿರ್ವಹಣೆ ಕೆಲಸ ವಿಳಂಬ ಸಲ್ಲ: ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ 2020-21ನೇ ಸಾಲಿನ ನೆರೆ ಹಾವಳಿಯ ಕಾಮಗಾರಿಗಳು ಇನ್ನು ಪ್ರಗತಿಯಲ್ಲಿರುವುದಕ್ಕೆ ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ವ್ಯಕ್ತಪಡಿಸಿ, ರಸ್ತೆ, ಶಾಲೆ, ಸೇತುವೆ ದುರಸ್ತಿಗೆ ವಿಪತದರು ನಿರ್ವಹಣೆಯಲ್ಲಿ 1-2 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಮಳೆಗಾಲ ಹೋಗಿ ಮತ್ತೆ ಮಳೆಗಾಲ ಬಂದರೂ ಕೆಲಸ ಇನ್ನು ಮುಗಿಯಲ್ಲ ಎಂದರೆ ಏನರ್ಥ. ನೀಡಲಾದ ಅನುದಾನ ಉದ್ದೇಶ ಈಡೇರುತ್ತಾ ಎಂದು ಡಿ.ಸಿ.ಗಳನ್ನು ಪ್ರಶ್ನಿಸಿದರು. ಕಲಬುರಗಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ 2020-21ರಲ್ಲಿ 640 ಕೆಲಸ ಕೈಗೆತ್ತಿಕೊಂಡಿದ್ದು, ಇದರಲ್ಲಿ 514 ಮುಕ್ತಾಯವಾಗಿದ್ದು, 132 ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಂದಿನ 15 ದಿನದಲ್ಲಿ‌ ಮುಗಿಸುವುದಾಗಿ ಸಚಿವರಿಗೆ ತಿಳಿಸಿದರು. ಒಟ್ಟಾರೆಯಾಗಿ ಹಳೇ ವರ್ಷದ ವಿಪತ್ತು ನಿರ್ವಹಣೆ ಕೆಲಸಗಳನ್ನು ಮತ್ತು ಕೊಪ್ಪಳ, ಯಾದಗಿರಿಯಲ್ಲಿ ಕೋವಿಡ್ ನಿರ್ವಹಣೆಯ ಬಾಕಿ ಅನುದಾನ ಮುಂದಿನ 10 ದಿನದಲ್ಲಿ ಖರ್ಚು ಮಾಡಿ ಇಲ್ಲ ಸರ್ಕಾರಕ್ಕೆ ಅನುದಾನ ಅಧ್ಯರ್ಪಿಸಿ ಎಂದು ಡಿ.ಸಿ.ಗಳಿಗೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.