ಶಕ್ತಿ ಯೋಜನೆ ಅವಾಂತರ: ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ
Team Udayavani, Aug 1, 2023, 6:31 AM IST
ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ “ಶಕ್ತಿ ಯೋಜನೆ’ಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಅವಾಂತರಗಳು ಸೃಷ್ಟಿಯಾಗುತ್ತಿವೆ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಈ ವಿಚಾರವಾಗಿ ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸಾರಿಗೆ ಇಲಾಖೆ, ಕೆಎಸ್ಆರ್ಟಿ, ಬಿಎಂಟಿಸಿ, ಎನ್ಡಬ್ಲೂéಕೆಎಸ್ಆರ್ಟಿ, ಕೆಕೆಆರ್ಟಿಸಿ ಈ ನಾಲ್ಕು ಸಾರಿಗೆ ನಿಗಮಗಳನ್ನು ಅರ್ಜಿಯಲ್ಲಿ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಶಕ್ತಿ ಯೋಜನೆ ಜಾರಿಗೆ ಬಂದಾಗಿನಿಂದ ಬಸ್ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಬಸ್ಗಳಲ್ಲಿ ಸೀಟು ಪಡೆದುಕೊಳ್ಳಲು ಗಲಾಟೆ, ಹೊಡೆದಾಟ ಸಂಭವಿಸಿದ ಘಟನೆಗಳು ನಡೆದಿವೆ. ಹಿರಿಯ ನಾಗರಿಕರು, ಮಕ್ಕಳು ಬಸ್ಗಳಲ್ಲಿ ಹತ್ತಲು ಆಗುತ್ತಿಲ್ಲ. ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಶಾಲಾ-ಕಾಲೇಜು ತಲುಪಲು ಆಗುತ್ತಿಲ್ಲ.
ಇದರಿಂದಾಗಿ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಅನುಚಿತ ವರ್ತನೆ, ಅಹಿತಕರ ಘಟನೆಗಳು ನಡೆಯುತ್ತಿವೆ. ಬಸ್ ನಿಲ್ದಾಣ ಮತ್ತು ಸರ್ಕಾರಿ ಬಸ್ಗಳು ಯುದ್ಧ ಭೂಮಿ, ಮೀನು ಮಾರುಕಟ್ಟೆ ಆಗಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಯೋಜನೆ ಜಾರಿಗೆ ಬಂದಾಗಿನಿಂದ ಮೂರು ಕೋಟಿ ಮಹಿಳೆಯರು ಉಚಿತವಾಗಿ ಬಸ್ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಇದರಿಂದ ವಾರಕ್ಕೆ 100 ಕೋಟಿ ರೂ. ತೆರಿಗೆದಾರರ ಹಣ ಸರ್ಕಾರಕ್ಕೆ ನಷ್ಟವಾಗುತ್ತಿದೆ. ಈ ಯೋಜನೆಗೆ ವಾರ್ಷಿಕ 3,200ರಿಂದ 3,400 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಶಾಲಾ ಮಕ್ಕಳು ಹಿರಿಯ ನಾಗರಿಕರಿಗೆ ಬಸ್ ಹತ್ತಿ-ಇಳಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ದೂರದ ಊರಿಗಳಿಗೆ ತೆರಳುವ ಬಸ್ಗಳಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಬಸ್ಗಳಲ್ಲಿ ಹತ್ತಲು ಮೊದಲು ಅವಕಾಶ ಮಾಡಿಕೊಡಬೇಕು. ದೂರದ ಊರುಗಳಿಗೆ ನಿಂತು ಪ್ರಯಾಣಿಸುವುದನ್ನು ನಿಷೇಧಿಸಬೇಕು. ಟಿಕೆಟ್ ಪಡೆದವರಿಗೆ ಶೇ.50ರಷ್ಟು ಸೀಟುಗಳನ್ನು ಮೀಸಲಿಡಬೇಕು. ಕಿಟಿಕಿ ಹಾಗೂ ಚಾಲಕರ ದ್ವಾರದ ಮೂಲಕ ಪ್ರಯಾಣಿಕರು ಹತ್ತುವುದನ್ನು ನಿರ್ಬಂಧಿಸಬೇಕು. ಶಾಲಾ ಮಕ್ಕಳಿಗೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.