ಪಿಎಸ್ಐ ಹಗರಣ: ತನಿಖೆ ಬಳಿಕ ಹೊಸ ನೇಮಕಾತಿ ಇಲ್ಲ: ಪರಮೇಶ್ವರ್
Team Udayavani, Jul 31, 2023, 10:29 PM IST
ತುಮಕೂರು: ಪಿಎಸ್ಐ ನೇಮಕಾತಿ ಹಗರಣ ಮುಕ್ತಾಯಗೊಳ್ಳುವವರೆಗೂ ಹೊಸ ನೇಮಕಾತಿ ಸಾಧ್ಯವಿಲ್ಲ. ಹಗರಣದ ತನಿಖೆ ಮುಕ್ತಾಯಗೊಂಡು ಸಮಸ್ಯೆ ಬಗೆಹರಿದ ಬಳಿಕವಷ್ಟೇ ಹೊಸ ನೇಮಕಾತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಹಗರಣದಿಂದ ಬಹಳಷ್ಟು ಮಂದಿಗೆ ತೊಂದರೆಯಾಗಿದೆ. ನೇಮಕಾತಿಯೂ ನಿಂತು ಹೋಗಿದೆ. ಎಲ್ಲವೂ ಸರಿ ಹೋಗಿದ್ದರೆ 545 ಮಂದಿ ಪಿಎಸ್ಐಗಳ ನೇಮಕಾತಿಯಾಗಬೇಕಾಗಿತ್ತು, ಈಗ ಮತ್ತೆ ಗೃಹ ಇಲಾಖೆ 400 ಮಂದಿ ಪಿಎಸ್ಐಗಳ ನೇಮಕ ಮಾಡಿಕೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದೆ. ಈ ಎರಡೂ ಸೇರಿ ಒಟ್ಟು ಸಾವಿರ ಮಂದಿ ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.
ಹಗರಣದ ತನಿಖೆ ಮುಕ್ತಾಯಗೊಂಡು ಸಮಸ್ಯೆ ಬಗೆಹರಿದ ಬಳಿಕವಷ್ಟೆ ಹೊಸ ನೇಮಕಾತಿ ಮಾಡಬೇಕಾಗಿದೆ. ಆದಷ್ಟು ಶೀಘ್ರ ಇದನ್ನು ಬಗೆಹರಿಸುತ್ತೇವೆ. ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಕ್ಷಮೆ ಕೇಳುವ ಅಗತ್ಯವಿಲ್ಲ: ಶಾಸಕ ಬಿ.ಆರ್. ಪಾಟೀಲ್ ಕ್ಷಮೆ ಕೇಳಬೇಕಾಗಿಲ್ಲ, ಕ್ಷಮೆ ಕೇಳಿ ಎಂದು ಯಾರೂ ಹೇಳಿಲ್ಲ. ಬೇರೆ ಉದ್ದೇಶಕ್ಕೆ ನಾವು ಈ ರೀತಿ ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಸಿಎಲ್ಪಿ ಸಭೆ ಕರೆಯುವಂತೆ ಶಾಸಕರು ಮನವಿ ಮಾಡಿದ್ದರು. ಅದರಂತೆ ಸಭೆ ಕರೆದು ಚರ್ಚೆ ಮಾಡಲಾಗಿದೆ ಅಷ್ಟೆ. ಈ ಬಗ್ಗೆ ವಿನಾ ಕಾರಣ ಅರ್ಥ ಕಲ್ಪಿಸುವುದು ಅನಗತ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ
Railway Development: ರಾಜ್ಯದಲ್ಲಿ ರೈಲ್ವೇ ಕ್ರಾಂತಿಗೆ ಬದ್ಧ: ಕೇಂದ್ರ ಸಚಿವ ಸೋಮಣ್ಣ
Kunigal; ಬೈಕ್ ಗೆ ಕ್ಯಾಂಟರ್ ಡಿಕ್ಕಿ:ಇಬ್ಬರು ಯುವಕರು ಸ್ಥಳದಲ್ಲೇ ಮೃ*ತ್ಯು
Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ
Koratagere: ನರೇಗಾ ಕಾಮಗಾರಿ ಹಣ ದುರುಪಯೋಗ, ಗ್ರಾ.ಪಂ. ಪಿಡಿಓ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.