Maski: ಬಸ್ ಸಂಚಾರ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Aug 1, 2023, 10:06 AM IST
ಮಸ್ಕಿ: ಶಾಲಾ ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಹತ್ತಿಸಿಕೊಳ್ಳುತ್ತಿಲ್ಲ, ಶಾಲಾ ವೇಳೆಗೆ ಬಸ್ ಬಿಡುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಆ.1ರ ಮಂಗಳವಾರ ತಾಲೂಕಿನ ಹಾಲಾಪೂರ ಗ್ರಾಮದಲ್ಲಿ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಮಸ್ಕಿ ಸಾರಿಗೆ ಘಟಕದಿಂದ ಬಸ್ ಗಳನ್ನು ಕಡಿಮೆಗೊಳಿಸಲಾಗಿದ್ದು, ಮಾಸ್ಕಿ-ಕವಿತಾಳ ಮಾರ್ಗದಲ್ಲಿ ಶಾಲಾ ಕಾಲೇಜು ವೇಳೆಗೆ ಬಸ್ ಬಿಡುತ್ತಿಲ್ಲ. ಮಸ್ಕಿ-ರಾಯಚೂರು, ಮಸ್ಕಿ-ಕವಿತಾಳ, ಮಸ್ಕಿ-ದೇವದುರ್ಗ ಮಾರ್ಗಗಳಲ್ಲಿ ವಿದ್ಯಾರ್ಥಿಗಳಿದ್ದಲ್ಲಿ ಬಸ್ ನಿಲ್ಲಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಬೆಳಗ್ಗೆ 7 ಗಂಟೆಯಿಂದಲೇ ಮಸ್ಕಿ-ಕವಿತಾಳ ಮಾರ್ಗದ ಎಲ್ಲ ಬಸ್ ಗಳನ್ನು ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಕವಿತಾಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮನವೊಲಿಸಲು ಯತ್ನಿಸಿದರೂ ಪಟ್ಟು ಬಿಡದ ವಿದ್ಯಾರ್ಥಿಗಳು ಸಾರಿಗೆ ಘಟಕದ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಭರವಸೆ ನೀಡುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.