4 ಕೋಟಿ ವಿಮೆಗಾಗಿ ಚಿನ್ನ ಲೂಟಿ ನಾಟಕ


Team Udayavani, Aug 1, 2023, 10:08 AM IST

4 ಕೋಟಿ ವಿಮೆಗಾಗಿ ಚಿನ್ನ ಲೂಟಿ ನಾಟಕ

ಬೆಂಗಳೂರು: ಈ ಪ್ರಕರಣದಲ್ಲಿ ಸಂತ್ರಸ್ತ ಹಾಗೂ ಆರೋಪಿ ಎಲ್ಲವೂ ಒಬ್ಬನೇ! ಅಂದರೆ ದೂರು ದಾರನೇ ಸುಲಿಗೆಕೋರನಾಗಿದ್ದಾನೆ.! ಹೌದು, ಕೋಟ್ಯಂತರ ರೂ. ವಿಮೆ ಹಣ ಪಡೆ ಯಲು ಹಾಗೂ ಬೇರೆಯವರಿಗೆ ಮಾರಾಟ ಮಾಡಲು ಸಿನಿಮೀಯ ಶೈಲಿಯಲ್ಲಿ ಸಂಚು ರೂಪಿಸಿ ಚಿನ್ನಾಭರಣ ಸುಲಿಗೆಯಾಗಿದೆ ಎಂದು ಸುಳ್ಳು ದೂರು ದಾಖಲಿಸಿದ ಜ್ಯೂವೆಲ್ಲರಿ ಶಾಪ್‌ ಮಾಲೀಕ ಕಾಟನ್‌ಪೇಟೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ರಾಜಸ್ಥಾನ ಮೂಲದ ರಾಜು ಜೈನ್‌ (25) ಬಂಧಿತ ಜ್ಯುವೆಲ್ಲರಿ ಶಾಪ್‌ ಮಾಲೀಕ. ಈತನ ಜತೆ ಕೃತ್ಯಕ್ಕೆ ಸಹಕಾರ ನೀಡಿದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ವಶಕ್ಕೆ ಪಡೆದು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ.

ಜುಲೈ 12ರಂದು ತನ್ನ ಸಂಬಂಧಿ ಬಾಲಕರ ಮೂಲಕ ನಾಲ್ಕು ಕೋಟಿ ರೂ. ಮೌಲ್ಯದ 3 ಕೆ.ಜಿ.780 ಗ್ರಾಂ ತೂಕದ ಚಿನ್ನಾಭರಣ ಸುಲಿಗೆ ಆಗಿದೆ ಎಂದು ದೂರು ನೀಡಿದ್ದ. ಸದ್ಯ ಆರೋಪಿಗಳಿಂದ 1 ಕೆ.ಜಿ. ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನ ಮೂಲದ ರಾಜುಜೈನ್‌ ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಚಾಮರಾಜಪೇಟೆಯಲ್ಲಿ ವಾಸವಾಗಿದ್ದಾನೆ. ನಗರತ್‌ ಪೇಟೆಯ ಕೇಸರ್‌ ಎಂಬ ಜ್ಯೂವೆಲ್ಲರಿ ಅಂಗಡಿ ನಡೆಸುತ್ತಿದ್ದಾನೆ. ತನ್ನ ಊರಿನ ಇಬ್ಬರು ಅಪ್ರಾಪ್ತ ಬಾಲಕರಿಗೆ ಓದಿಸುವ ಜತೆಗೆ ಜ್ಯೂವೆಲ್ಲರಿ ಶಾಪ್‌ ನಲ್ಲೂ ಕೆಲಸ ನೀಡಿದ್ದ. ಈ ಮಧ್ಯೆ ಮುಂಬೈ ಹಾಗೂ ನೆರೆ ರಾಜ್ಯಗಳಿಂದ ಕೆ.ಜಿ.ಗಟ್ಟಲೇ ಚಿನ್ನಾಭರಣ ಖರೀದಿಸಿದ್ದ. ಆದರೆ, ಅದನ್ನು ಅಕ್ರಮವಾಗಿ ಮಾರಾಟ ಮಾಡಿ ಹಣ ಪಡೆಯಲು ಸಂಚು ರೂಪಿಸಿದ್ದಾನೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹೇಗಿತ್ತು ಸಂಚು?: ಜುಲೈ 12ರಂದು ಸಂಜೆ 7.30ರ ಸುಮಾರಿಗೆ ಇಬ್ಬರು ಬಾಲಕರ ಮೂಲಕ 3 ಕೆ.ಜಿ. 780 ಗ್ರಾಂ ತೂಕದ ಚಿನ್ನಾಭರಣವನ್ನು ಅಂಗಡಿಯಲ್ಲಿ ಬ್ಯಾಗ್‌ಗೆ ತುಂಬಿಸಲಾಗಿತ್ತು. ಬಳಿಕ ಅದನ್ನು ಹೈದರಾಬಾದ್‌ಗೆ ಕಳುಹಿಸುವ ಸಲುವಾಗಿ ತನ್ನ ದ್ವಿಚಕ್ರ ವಾಹನದಲ್ಲಿ ಬಾಲಕರ ಮನೆಗೆ ಕಳುಹಿಸಿದ್ದ. ಮಾರ್ಗ ಮಧ್ಯೆ ಮೈಸೂರು ರಸ್ತೆಯ ಮೇಲು ಸೇತುವೆ ಬಳಿ ಇಬ್ಬರು ಅಪರಿಚಿತ ವ್ಯಕ್ತಿ ಗಳು, ಕಾಲಿನಿಂದ ಒದ್ದು ಚಿನ್ನಾಭರಣ ತುಂಬಿದ್ದ ಬ್ಯಾಗ್‌ ಕದ್ದೊಯ್ದಿದ್ದಾರೆ ಎಂದು ರಾಜು ಜೈನ್‌ ದೂರು ನೀಡಿದ್ದ. ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿದರೂ, ಬಾಲಕರ ಹೇಳಿಕೆ ಹಾಗೂ ರಾಜುಜೈನ್‌ ಹೇಳಿಕೆ ಪಡೆದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಅಲ್ಲದೆ, ಬಾಲಕರಿಂದ ಅಂಗಡಿಯಲ್ಲೇ ಸಿಸಿ ಕ್ಯಾಮೆರಾಗೆ ಕಾಣುವಂತೆ ಚಿನ್ನಾಭರಣ ತುಂಬಿ ಸಿದ್ದ. ಬೈಕ್‌ನಲ್ಲಿ ಬ್ಯಾಗ್‌ ತೆಗೆದುಕೊಂಡು ಹೋಗುವ ದೃಶ್ಯ ಸೆರೆಯಾಗುವಂತೆಯೂ ನೋಡಿಕೊಂಡಿದ್ದ.

ಬಳಿಕ ಸಿಸಿ ಕ್ಯಾಮೆರಾ ಇಲ್ಲದ ಮೇಲ್ಸೇತುವೆ ಬಳಿ ಅದೇ ಬಾಲಕರ ಮೂಲಕ ಚಿನ್ನಾಭರಣವನ್ನು ಮತ್ತೂಂದು ಬ್ಯಾಗ್‌ಗೆ ತುಂಬಿಸಿ, ಖಾಲಿ ಬ್ಯಾಗ್‌ ಎಸೆದು, ನಂತರ ಘಟನಾ ಸ್ಥಳದಿಂದಲೇ ತನಗೆ ಕರೆ ಮಾಡಿಸಿಕೊಂಡು, ಸ್ಥಳಕ್ಕೆ ಸಂಬಂಧಿಕರು ಹಾಗೂ ಪೊಲೀಸರನ್ನು ಕರೆಸಿಕೊಂಡಿದ್ದ. ಈ ವೇಳೆಯೇ ಒಬ್ಬ ಬಾಲಕನಿಂದ ಮನೆಗೆ ಚಿನ್ನಾಭರಣ ತುಂಬಿದ ಬ್ಯಾಗ್‌ ಕಳುಹಿಸಿ, ಮತ್ತೆ ಘಟನಾ ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ನಂತರ ತನ್ನ ಬಳಿಯಿದ್ದ ಚಿನ್ನಾಭರಣ ಸುಲಿಗೆಯಾಗಿದೆ ಎಂದು ಠಾಣೆಯಲ್ಲಿ ದೂರು ದಾಖಲಿಸಿ, ಬಳಿಕ ಪೊಲೀಸರ ತನಿಖೆಯಲ್ಲಿ ಚಿನ್ನಾಭರಣ ಸಿಕ್ಕಿಲ್ಲ ಎಂದು ಪ್ರಮಾಣ ಪತ್ರ ಪಡೆದು, ವಿಮಾ ಕಂಪನಿಗೆ ನೀಡಿ 4 ಕೋಟಿ ರೂ. ಪಡೆಯಲು ರಾಜು ಜೈನ್‌ ಯೋಜನೆ ರೂಪಿಸಿದ್ದ. ಅದಕ್ಕಾಗಿ ಸುಮಾರು ಒಂದು ತಿಂಗಳ ಮೊದಲೇ ಯೋಜನೆ ರೂಪಿಸಿದ್ದಾನೆ.

ಎಲ್ಲೆಲ್ಲಿ ಸಿಸಿ ಕ್ಯಾಮೆರಾಗಳಿವೆ ಎಂದು ತನ್ನ ಅಂಗಡಿಯಿಂದ ಮನೆವರೆಗಿನ ರಸ್ತೆಗಳಲ್ಲಿ ಪರಿಶೀಲಿಸಿದ್ದ. ಹೇಗೆ ಕೃತ್ಯವೆಸಗಬೇಕು? ತಾನೂ ಹಾಗೂ ಬಾಲಕರು ಯಾವ ರೀತಿ ಪೊಲೀಸರ ಪ್ರಶ್ನೆಗಳಿಗೆ ಉತ್ತರ ನೀಡಬೇಕು? ಪೊಲೀಸರ ಜತೆ ಹೇಗೆ ವರ್ತಿಸಬೇಕು? ಎಂದು ಬಾಲಕರಿಗೆ ಸಂಪೂರ್ಣವಾಗಿ ತರಬೇತಿ ನೀಡಿದ್ದ. ಅದಕ್ಕೆ ಪೂರಕವೆಂಬಂತೆ ಚಿನ್ನಾಭರಣ ಸಮೇತ ಬಾಲಕರನ್ನು ಹೈದರಾಬಾದ್‌ಗೆ ಕಳುಹಿಸಿದ್ದೇನೆ ಎಂದು ಬಿಂಬಿಸಲು ಬಸ್‌ ಟಿಕೆಟ್‌ ಬುಕ್‌ ಮಾಡಿದ್ದ. ಜತೆಗೆ ಸಿಸಿ ಕ್ಯಾಮೆರಾ, ಮೊಬೈಲ್‌ ಟವರ್‌ ಲೋಕೇಷನ್‌, ಮೊಬೈಲ್‌ ಕರೆಗಳ ಪರಿಶೀಲಿಸಿದರೂ ಕೃತ್ಯ ನಡೆದಿದೆ ಎಂದು ಹೊಂದಾಣಿಕೆ ಮಾಡಿದ್ದಾನೆ ಎಂದು ಆಯುಕ್ತರು ಹೇಳಿದರು.

ವಾಟ್ಸ್‌ಆ್ಯಪ್‌ ಕರೆ ಕೊಟ್ಟ ಸುಳಿವು: ಆದರೆ, ಆರೋಪಿಯ ಮೊಬೈಲ್‌ ವಶಕ್ಕೆ ಪಡೆದು ಪರಿಶೀಲಿಸಿದಾಗ ಘಟನಾ ಸಂದರ್ಭದಲ್ಲಿ ವಾಟ್ಸ್‌ಆ್ಯಪ್‌ಕರೆ ಮಾಡಿರುವುದು ಬೆಳಕಿಗೆ ಬಂದಿತ್ತು. ಇಂತಹ ಸಂದರ್ಭದಲ್ಲಿ ವಾಟ್ಸ್‌ಆ್ಯಪ್‌ ಕರೆ ಏಕೆ ಮಾಡಲಾಗಿದೆ? ಜತೆಗೆ ಒಂದೇ ಟವರ್‌ನಲ್ಲಿ ಲೋಕೇಷನ್‌ ಬದಲಾವಣೆ ಮಾಡಿದ್ದ. ಹೀಗಾಗಿ ಅನುಮಾನಗೊಂಡ ಪೊಲೀಸರು, ಅಂಗಡಿಯಿಂದ ಘಟನಾ ಸ್ಥಳಕ್ಕೆ ತೆರಳಲು 7 ನಿಮಿಷ ಆಗಿದೆ. ಈ ನಡುವೆ ಯಾರು ಕೃತ್ಯ ಎಸಗಲು ಸಾಧ್ಯ ಎಂದು ತಾಂತ್ರಿಕ ತನಿಖೆ ನಡೆಸಿದಾಗ ದೂರುದಾರನೇ ಮಾಸ್ಟರ್‌ ಮೈಂಡ್‌ ಎಂಬುದು ಗೊತ್ತಾಗಿದೆ. ಆದರೂ ಆತ ಒಪ್ಪಿಕೊಂಡಿರಲಿಲ್ಲ. ಬಳಿಕ ಸಾಕ್ಷ್ಯಾಧಾರಗಳು ತೋರಿಸಿದಾಗ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು. ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ, ಎಸಿಪಿ ಕೆ.ಸಿ.ಗಿರಿ ನೇತೃತ್ವದಲ್ಲಿ ಠಾಣಾಧಿಕಾರಿ ಜಿ.ಬಾಲರಾಜ್‌ ತಂಡ ಕಾರ್ಯಾಚರಣೆ ನಡೆಸಿದೆ.

ಸ್ನೇಹಿತ, ನೆಟ್‌ಫ್ಲಿಕ್ಸ್ ಪ್ರೇರಣೆ: ಮುಂಬೈನಲ್ಲಿ ಈತನ ಸ್ನೇಹಿತನೊಬ್ಬ ಇದೇ ಮಾದರಿಯಲ್ಲಿ ಚಿನ್ನಾಭರಣ ಸುಲಿಗೆ ಮಾಡಿ, ವಿಮೆ ಹಣ ಪಡೆದುಕೊಂಡಿದ್ದ. ಈ ವೇಳೆ ಪೊಲೀಸರ ತನಿಖೆ ಹೇಗೆ ನಡೆಯುತ್ತದೆ? ಪ್ರಶ್ನೆಗಳೇನು? ಸೇರಿ ಒಟ್ಟಾರೆ ಪೊಲೀಸರ ತನಿಖೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡಿದ್ದ. ಜತೆಗೆ ಸ್ನೇಹಿತ, ನೆಟ್‌ಫ್ಲಿಕ್ಸ್ ನಲ್ಲಿ ಬರುವ ಚಿನ್ನಾಭರಣ ಕಳವಿಗೆ ಸಂಬಂಧಿಸಿದ ಕ್ರೈಂ ಸರಣಿಗಳನ್ನು ನೋಡಿ ಸಂಚು ರೂಪಿಸಿದ್ದಾನೆ. ಈ ಮಧ್ಯೆ ದೂರು ನೀಡಿದ ಆರೋಪಿ ಕೆಲ ರಾಜಕೀಯ ಮುಖಂಡರು ಹಾಗೂ ಸಂಘಟನೆಗಳ ಮೂಲಕ ಪೊಲೀಸರಿಗೆ ಪ್ರಕರಣ ಪತ್ತೆ ಹಚ್ಚುವಂತೆ ಒತ್ತಡ ಹಾಕಿಸಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!

5-

Mangaluru: ಸೆನ್‌ ಪೊಲೀಸ್‌ ಠಾಣೆಗಳು ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.