ಕರ್ನಾಟಕ ಫ‌ುಟ್‌ಬಾಲ್‌ ಅಭಿವೃದ್ಧಿಗೆ ಆದ್ಯತೆ: ಹ್ಯಾರಿಸ್‌

ರಾಜ್ಯ ಫ‌ುಟ್‌ಬಾಲ್‌ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಎನ್‌.ಎ. ಹ್ಯಾರಿಸ್‌ ಅವರೊಂದಿಗೆ "ಉದಯವಾಣಿ' ನಡೆಸಿದ ಸಂದರ್ಶನ.

Team Udayavani, Aug 2, 2023, 12:54 AM IST

NA HARRIS

ಕರ್ನಾಟಕ ರಾಜ್ಯ ಫ‌ುಟ್‌ಬಾಲ್‌ ಅಸೋಸಿ ಯೇಶನ್‌ (ಕೆಎಸ್‌ಎಫ್ಎ) ಅಧ್ಯಕ್ಷರಾಗಿ ಎನ್‌.ಎ. ಹ್ಯಾರಿಸ್‌ ಎರಡನೇ ಅವಧಿಗೆ ಪುನರಾಯ್ಕೆ ಆಗಿದ್ದಾರೆ. ಕೆಎಸ್‌ಎಫ್ಎ 54ನೇ ವಾರ್ಷಿಕ ಮಹಾಸಭೆಯಲ್ಲಿ ಮುಂಬರುವ ನಾಲ್ಕು ವರ್ಷಗಳಿಗೆ (2023-2027) ಹ್ಯಾರಿಸ್‌ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಈ ಹಿನ್ನೆಲೆಯಲ್ಲಿ “ಉದಯವಾಣಿ”ಗೆ ಅವರು ನೀಡಿದ ಸಂದರ್ಶನದ ಮುಖ್ಯ ಅಂಶಗಳು ಇಲ್ಲಿದೆ.

·ಎರಡನೇ ಅವಧಿಗೆ ಕೆಎಸ್‌ಎಫ್ಎ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಹೇಗನಿಸುತ್ತಿದೆ?
ಇದು ನಿಜಕ್ಕೂ ಖುಷಿ ತಂದಿದೆ. ಕರ್ನಾಟಕದಲ್ಲಿ ಫ‌ುಟ್‌ಬಾಲ್‌ ಕ್ರೀಡೆಗೆ ಹೆಚ್ಚು ಒತ್ತು ನೀಡಿ, ಸ್ಯಾಫ್ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿರುವುದನ್ನು ಗುರುತಿಸಿ, ಎರಡನೇ ಅವಧಿಗೆ ನನ್ನನ್ನು ಪುನರಾಯ್ಕೆ ಮಾಡಲಾಗಿದೆ. ಇದು ಸಂಸ ತದ ಜತಗೆ ಹೆಚ್ಚು ಜವಾಬ್ದಾರಿಯನ್ನು ನೀಡಿದೆ.

·ಹಿಂದಿನ ನಿಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಫ‌ುಟ್‌ಬಾಲ್‌ ಅಭಿವೃದ್ಧಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿತ್ತು?
ಪ್ರತಿ ಜಿಲ್ಲೆಯಲ್ಲಿ ಫ‌ುಟ್‌ಬಾಲ್‌ ಸಮಿತಿ, ಕ್ಲಬ್‌ಗಳನ್ನು ಹೊಂದಲು ಒತ್ತು ನೀಡಲಾಯಿತು. ಈಗಾಗಲೇ ರಾಜ್ಯದ 28 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಫ‌ುಟ್‌ಬಾಲ್‌ ಸಮಿತಿಗಳಿವೆ. ಹಲವು ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಪಂದ್ಯಗಳನ್ನು ನಡೆಸಲಾಗುತ್ತಿದೆ. ಮುಖ್ಯವಾಗಿ ಬೆಂಗಳೂರಿನಲ್ಲಿ ಸ್ಯಾಫ್ ಪಂದ್ಯಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕುವೈತ್‌, ಭೂತಾನ್‌, ಲೆಬನಾನ್‌, ಮಾಲ್ಡೀವ್ಸ್‌, ನೇಪಾಲ, ಪಾಕಿಸ್ಥಾನ, ಬಾಂಗ್ಲಾದೇಶ ತಂಡಗಳು ಇದರಲ್ಲಿ ಭಾಗವಹಿಸಿದ್ದವು. ಇನ್ನೊಂದೆಡೆ, ಕರ್ನಾಟಕ ತಂಡವು ಪ್ರತಿಷ್ಠಿತ ಸಂತೋಷ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

·ಕಂಠೀರವ ಕ್ರೀಡಾಂಗಣದಲ್ಲೇ ಹೆಚ್ಚು ಫ‌ುಟ್‌ ಬಾಲ್‌ ಪಂದ್ಯಗಳು ನಡೆಯುತ್ತವೆ. ಈ ಒತ್ತಡ ಕಡಿಮೆ ಮಾಡುವುದು ಹೇಗೆ?
ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಅನುಗುಣ ವಾಗಿ ಶೀಘ್ರದಲ್ಲೇ ಫ‌ುಟ್‌ಬಾಲ್‌ ಕ್ರೀಡಾಂಗಣ ತಲೆ ಎತ್ತಲಿದೆ. ಅಗತ್ಯಕ್ಕೆ ತಕ್ಕಂತೆ ನ್ಯಾಚುರಲ್‌ ಟಟರ್ಫ್‌ ಮತ್ತು ಆರ್ಟಿಫಿಶಿಯಲ್‌ ಟರ್ಫ್‌ ಗಳಲ್ಲಿ ಪಂದ್ಯಗಳನ್ನು ಆಯೋಜಿಲಾಗುವುದು.

·ಕರ್ನಾಟಕದಲ್ಲಿ ಫ‌ುಟ್‌ಬಾಲ್‌ ಬೆಳೆಸಲು ಏನೆಲ್ಲ ಪ್ರಯತ್ನಗಳನ್ನು ನಡೆಸಿದ್ದೀರಿ?
ಫ‌ುಟ್‌ಬಾಲ್‌ ಬಡವರ ಕ್ರೀಡೆಯಾಗಿದೆ. ಕೇವಲ ಚೆಂಡು ಇದ್ದರೆ ಸಾಕು. ಹೀಗಾಗಿ ಇದು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಗರಿಷ್ಠ ಪ್ರಯತ್ನ ನಡೆಸಿದ್ದೇವೆ. ಸ್ಯಾಫ್ ಪಂದ್ಯಾವಳಿಯಲ್ಲಿ ಕಕ್ಕಿರಿದು ತುಂಬಿದ್ದ ಅಭಿಮಾನಿಗಳೇ ಸಾಕ್ಷಿ. ಈಗಾಗಲೇ ಅನೇಕ ಮಹಿಳಾ ಫ‌ುಟ್‌ಬಾಲ್‌ ಕ್ಲಬ್‌ಗಳು, ಅಕಾಡೆಮಿಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿ ತಾಲೂಕಿನಲ್ಲಿ ಫ‌ುಟ್‌ಬಾಲ್‌ ಸಮಿತಿಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು.

·ಫ‌ುಟ್‌ಬಾಲ್‌ಗೆ ಸರಕಾರ ಹೇಗೆ ಪ್ರೋತ್ಸಾಹ ನೀಡುತ್ತಿದೆ?
ಬೇರೆ ರಾಜ್ಯಗಳಲ್ಲಿ ಸಂತೋಷ್‌ ಟ್ರೋಫಿ ಗೆದ್ದರೆ, ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡುತ್ತಾರೆ. ಆದರೆ ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಯಾವುದೇ ನಗದು ಬಹುಮಾನ ನೀಡಲಿಲ್ಲ. ಇದೀಗ, ಪ್ರತಿ ಜಿಲ್ಲೆಯಲ್ಲೂ ಫ‌ುಟ್‌ಬಾಲ್‌ ಕ್ರೀಡಾಂಗಣ ನಿರ್ಮಿಸಲು ಜಮೀನಿಗಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು.

· ಸಂತೋಷ್‌ ಪಿ.ಯು.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.