ವೀಡಿಯೋ ಪ್ರಕರಣ ಮುಚ್ಚಿಹಾಕಲು ಯತ್ನ: ಶಾಸಕ ಯಶ್ಪಾಲ್ ಆರೋಪ
Team Udayavani, Aug 3, 2023, 12:41 AM IST
ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ನಡೆದ ವೀಡಿಯೋ ಪ್ರಕರಣವನ್ನು ಮುಚ್ಚಿ ಹಾಕಲು ಆ ಕಾಲೇಜಿನ ಆಡಳಿತಾಧಿಕಾರಿ ಪ್ರಯತ್ನಿಸಿದ್ದಾರೆ. ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿನಿಯರ ಅಂಕಪಟ್ಟಿಯನ್ನು ತೆಗೆದಿಟ್ಟುಕೊಂಡು ಈ ವಿಚಾರದ ಬಗ್ಗೆ ಧ್ವನಿ ಎತ್ತದಂತೆ ಬೆದರಿಸಿ¨ªಾರೆ ಎಂದು ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದ್ದಾರೆ.
ಬುಧವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತ ನಾಡಿದ ಅವರು, ಪ್ರಕರಣದ ಬಗ್ಗೆ ಪ್ರತಿಭಟಿಸಿದ ವಿದ್ಯಾರ್ಥಿನಿಯರಿಗೆ, “ಠಾಣೆಯಲ್ಲಿ ದೂರು ದಾಖಲಾದರೆ ಎಲ್ಲಿಯೂ ನಿಮಗೆ ಕೆಲಸ ಸಿಗುವುದಿಲ್ಲ, ಹೊರದೇಶಗಳಿಗೆ ತೆರಳಲು ಸಾಧ್ಯವಿಲ್ಲ” ಎಂದು ಬೆದರಿಸುವ ಮೂಲಕ ಬಾಯಿ ಮುಚ್ಚಿಸಲು ಯತ್ನಿಸಿದ್ದಾರೆ. ಕಾಲೇಜಿನಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ ಎಂದು ನೊಂದ ವಿದ್ಯಾರ್ಥಿನಿಯರು ನಮ್ಮ ಬಳಿ ನೋವು ಹಂಚಿಕೊಂಡಿದ್ದಾರೆ ಎಂದರು.
ಆರೋಪ ಹೊತ್ತಿರುವ ಮೂವರು ವಿದ್ಯಾರ್ಥಿನಿಯರ ಸಂಬಂಧಿಗಳು ಪಿಎಫ್ಐನಲ್ಲಿ ಸಕ್ರಿಯರಾಗಿದ್ದರು ಎಂಬ ಮಾಹಿತಿ ದೊರೆತಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಯವರ ಗಮನಕ್ಕೆ ತರಲಾಗಿದ್ದು, ತನಿಖೆ ಮಾಡುವಂತೆ ಆಗ್ರಹಿಸಿದ್ದೇವೆ ಎಂದರು.
ಡಿವೈಎಸ್ಪಿ ಬೆಳ್ಳಿಯಪ್ಪ ಅವರನ್ನು ನೂತನ ತನಿಖಾಧಿಕಾರಿಯನ್ನಾಗಿ ಮಾಡಲಾಗಿದ್ದು, ಅವರ ಮೇಲೆ ವಿಶ್ವಾಸ ಇದೆ. ನೊಂದ ವಿದ್ಯಾರ್ಥಿನಿಯರಿಗೆ ನ್ಯಾಯ ದೊರಕಿಸಿ ಕೊಡುತ್ತಾರೆ ಎಂಬ ನಂಬಿಕೆ ನಮ್ಮದು. ಈಗಾಗಲೇ ನಮ್ಮ ಬಳಿಯಿರುವ ದಾಖಲೆಗಳನ್ನು ಅವರಿಗೆ ನೀಡಿದ್ದೇವೆ. ಮುಂದೆಯೂ ಪ್ರಕರಣದ ಕುರಿತ ದಾಖಲೆಗಳು ದೊರಕಿದರೆ ನೀಡುತ್ತೇವೆ. ಈಗಾಗಲೇ ಪೊಲೀಸರು ಎಫ್ಐಆರ್ ಅನ್ನು ತಡವಾಗಿ ದಾಖಲಿಸಿದ್ದಾರೆ. ಪ್ರಕರಣ ದಲ್ಲಿ ಸರಕಾರ
ಹಸ್ತಕ್ಷೇಪ ಮಾಡದೇ ನಿಷ್ಪಕ್ಷ ತನಿಖೆ ನಡೆಸಲು ಪೊಲೀಸರಿಗೆ ಅವಕಾಶ ನೀಡಬೇಕು ಎಂದರು.
ರಾಜ್ಯಪಾಲರಿಗೆ ಮನವಿ
ಜಿಲ್ಲೆಯ ಐವರು ಶಾಸಕರು ಆ. 4ರಂದು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಕರಣದ ಗಂಭೀರತೆಯನ್ನು ಅವರ ಗಮನಕ್ಕೆ ತಂದು ಎಸ್ಐಟಿ ತನಿಖೆಗೆ ವಹಿಸಬೇಕೆಂದು ಮನವಿ ಸಲ್ಲಿಸುತ್ತೇವೆ ಎಂದು ಯಶ್ಪಾಲ್ ಸುವರ್ಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Kundapura: ಮುಳುಗುತ್ತಿದ್ದ ಬೋಟ್ ರಕ್ಷಣೆ: 6 ಮೀನುಗಾರರು ಪಾರು
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.