ಕಂಚಿನಡ್ಕದಲ್ಲಿ ಟೋಲ್‌ಗೆ ಸಿದ್ಧತೆ: ವಾಹನ ಸವಾರರ ಕಿಸೆಗೆ ಕತ್ತರಿ “ಸಿದ್ಧ”!


Team Udayavani, Aug 3, 2023, 12:49 AM IST

Udayavani Kannada Newspaper

ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್‌) ಈಗಾಗಲೇ ಪಡುಬಿದ್ರಿ ಕಾರ್ಕಳದ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಟೋಲ್‌ ನಿರ್ಮಾಣಕ್ಕಾಗಿ ಮೂರನೇ ಬಾರಿಗೆ ಟೆಂಡರನ್ನು ಆಹ್ವಾನಿಸಿದೆ.

ಈ ಹಿಂದಿನ ಟೆಂಡರ್‌ಗಳಿಗೆ ನಿರೀಕ್ಷಿತ ಪ್ರತಿಕ್ರಿಯೆ ಇರಲಿಲ್ಲ. ಈ ಟೋಲ್‌ ಕುರಿತು ಈ ಹಿಂದೆ ನಡೆದಿದ್ದ ಹೋರಾಟಗಳ ಬಳಿಕವೂ ರಾಜ್ಯ ಸರಕಾರವು ಖಜಾನೆ ತುಂಬಿಸಿಕೊಳ್ಳಲು ಈ ದಾರಿಯನ್ನು ಹಿಡಿದಿದೆ.

ಕಂಚಿನಡ್ಕ ಪ್ರದೇಶದಲ್ಲಿನ ಈ ಟೋಲ್‌ ಮುಂದೆ ಬೆಳ್ಮಣ್‌ನಲ್ಲಿ ಸ್ಥಾಪಿತವಾಗುವ ಸುದ್ದಿ ಹರಡಿದಾಗ ಅಲ್ಲಿಯೂ ಪಕ್ಷ ರಹಿತ ನೆಲೆಯಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿತ್ತು. ಆದರೆ ಬೆಳ್ಮಣ್‌ನಲ್ಲಿ ಟೋಲ್‌ ಗೇಟ್‌ ಇದ್ದಲ್ಲಿ ಮುದರಂಗಡಿ ರಸ್ತೆಯ ಮೂಲಕ ಒಂದಷ್ಟು ಸೋರಿಕೆಯಾಗಬಹುದೆನ್ನುವ ನಿರೀಕ್ಷೆಯಲ್ಲಿ ಅದನ್ನು ಕೈಬಿಟ್ಟು ಕಂಚಿನಡ್ಕವನ್ನೇ ಸೂಕ್ತ ಎಂದು ಆಯ್ದುಕೊಳ್ಳಲಾಗಿದೆ. ಈಗ ಇಲ್ಲಿ ಕಂಚಿನಡ್ಕ ಟೋಲ್‌ ನಿರ್ಮಾಣಗೊಂಡಲ್ಲಿ ಹೆಜಮಾಡಿ ಟೋಲ್‌ ಜತೆಗೇ ವಾಹನ ಸವಾರಿಗೆ ಇದು ಇನ್ನಷ್ಟು ತುಟ್ಟಿ ಎನಿಸಲಿದೆ.
ಕೆಆರ್‌ಡಿಸಿಎಲ್‌ ಟೆಂಡರ್‌ ಆಹ್ವಾನಿಸಿರುವ ಪ್ರಕಟನೆಯನ್ನು ಜು. 21ರ ಹೊರಡಿಸಿದೆ. ಅದರನ್ವಯ ಗುಬ್ಬಿ ಬಳಿಯ ಕೆ.ಎಸ್‌. ಪಾಳ್ಯ ಗ್ರಾಮದಲ್ಲಿ ರಾಜ್ಯ ಹೆದ್ದಾರಿ 84ರಲ್ಲಿ 49.03 ಕಿ.ಮೀ. ವ್ಯಾಪ್ತಿಗೆ ಮತ್ತು ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿ ರಾಜ್ಯ ಹೆದ್ದಾರಿ 1ರಲ್ಲಿ 27.38 ಕಿ.ಮೀ. ವ್ಯಾಪ್ತಿಗೆ ನಿರ್ಮಾಣವಾಗಲಿದೆ. ಟೆಂಡರ್‌ ಸಲ್ಲಿಕೆಗೆ ಆ. 5 ಕಡೆಯ ದಿನ; ಆ. 7ರಂದು ಟೆಂಡರ್‌ ಪರಿ ಶೀಲಿಸಲಾಗುವುದೆಂದೂ ತಿಳಿಸಲಾಗಿದೆ.

ಇಲ್ಲಿರುವ ಸ್ವಾರಸ್ಯವೆಂದರೆ 49.03 ಕಿ.ಮೀ. ದೂರಕ್ಕಾಗಿ ಘಟ್ಟದ ಮೇಲಿನ ರಾಜ್ಯ ಹೆದ್ದಾರಿಯಲ್ಲಿ ವಾರ್ಷಿಕ 102.08 ಲಕ್ಷ ರೂ. ಸಂಗ್ರಹಿಸುವ ಗುರಿ ಇದ್ದರೆ ಕರಾವಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಗುರಿಯು ಕೇವಲ 27.38 ಕಿ.ಮೀ.ಗೆ 278.32 ಲಕ್ಷ ರೂ. ಎಂದು ಅಂದಾಜಿಸಲಾಗಿದೆ!

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.