Watch video:ಸೇತುವೆಯಲ್ಲಿ ಹೈಡ್ರಾಮಾ…ಕೊನೆಗೂ ಮಹಿಳೆಯ ಪ್ರಾಣ ರಕ್ಷಿಸಿದ ಟ್ರಾಫಿಕ್‌ ಪೊಲೀಸ್‌

ಟ್ರಾಫಿಕ್‌ ಕಾನ್ಸ್‌ ಟೇಬಲ್‌ ಗಳ ಸಮಯಪ್ರಜ್ಞೆಯಿಂದ ಆಕೆಯ ಜೀವ ರಕ್ಷಿಸಿದ್ದಕ್ಕೆ ನೆಟ್ಟಿಗರು ಬಹುಪರಾಕ್‌ ಹೇಳಿದ್ದಾರೆ.

Team Udayavani, Aug 3, 2023, 3:50 PM IST

Watch video:ಸೇತುವೆಯಲ್ಲಿ ಹೈಡ್ರಾಮಾ…ಕೊನೆಗೂ ಮಹಿಳೆಯ ಪ್ರಾಣ ರಕ್ಷಿಸಿದ ಟ್ರಾಫಿಕ್‌ ಪೊಲೀಸ್‌

ಮಹಾರಾಷ್ಟ್ರ: ಇತ್ತೀಚೆಗೆ ದೇಶಾದ್ಯಂತ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಆದರೆ ನವಿ ಮುಂಬೈನ ವಾಶಿ ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಿ ಜೀವ ಕಳೆದುಕೊಳ್ಳಲು ಯತ್ನಿಸಿದ ಮಹಿಳೆಯೊಬ್ಬಳನ್ನು ಮುಂಬೈ ಟ್ರಾಫಿಕ್‌ ಪೊಲೀಸರು ಚಾಕಚಕ್ಯತೆಯಿಂದ ರಕ್ಷಿಸಿದ ಘಟನೆ ನಡೆದಿದ್ದು, ಮಹಿಳೆಯನ್ನು ರಕ್ಷಿಸಿದ ವಿಡಿಯೋ ಇದೀಗ ವೈರಲ್‌ ಆಗಿದೆ.‌

ಇದನ್ನೂ ಓದಿ:ಗಿಳಿ ಕಾಣೆಯಾಗಿದೆ… ಹುಡುಕಿ ಕೊಟ್ಟವರಿಗೆ 10 ಸಾವಿರ ಬಹುಮಾನ

ಮಹಿಳೆಯನ್ನು ಸಮಯಪ್ರಜ್ಞೆಯಿಂದ ಕಾಪಾಡಿದ ಟ್ರಾಫಿಕ್‌ ಪೊಲೀಸರ ನಡೆಗೆ ಸಾರ್ವಜನಿಕರಿಂದ ಹಾಗೂ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ. ಮಹಿಳೆಯನ್ನು ಟ್ರಾಫಿಕ್‌ ಕಾನ್ಸ್‌ ಟೇಬಲ್‌ ಗಳಾದ ಶಿವಾಜಿರಾವ್‌ ಬಾಚ್ರೆ, ರಾಜು ಡಾಂಡೇಕರ್‌, ರಾಥೋಡ್‌ ಮತ್ತು ಟಾಂಬೆ ರಕ್ಷಿಸಿರುವುದಾಗಿ ಎ ಎನ್‌ ಐ ವರದಿ ಮಾಡಿದೆ.

ವಿಡಿಯೋದಲ್ಲೇನಿದೆ?:

ಸೇತುವೆಯ ಆಯಕಟ್ಟಿನ ಭಾಗದಲ್ಲಿ ಪೈಪ್‌ ಅನ್ನು ಹಿಡಿದುಕೊಂಡ ಮಹಿಳೆಯೊಬ್ಬಳು ಅಳುತ್ತಿದ್ದು, ಈ ಸಂದರ್ಭದಲ್ಲಿ ಕೆಲವು ಜನರು (ಕೆಲವರು ಮಹಿಳೆಯ ಕುಟುಂಬದ ಸದಸ್ಯರು) ಆಕೆ ದುಡುಕಿನ ನಿರ್ಧಾರ ತೆಗೆದುಕೊಂಡು ಸಮುದ್ರಕ್ಕೆ ಹಾರದಂತೆ ತಡೆಯಲು ಪ್ರಯತ್ನಿಸುತ್ತಿದ್ದರು. ಆದರೆ ಆಕೆ ಯಾರ ಮಾತನ್ನೂ ಕೇಳಲು ನಿರಾಕರಿಸುತ್ತಿದ್ದು, ಯಾರೂ ಹತ್ತಿರ ಬರಬಾರದು, ದೂರ ಹೋಗಿ, ಇಲ್ಲದಿದ್ದರೆ ಸೇತುವೆ ಮೇಲಿಂದ ಕೆಳಕ್ಕೆ ಹಾರುವುದಾಗಿ ಬೆದರಿಕೆ ಹಾಕುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.


ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಟ್ರಾಫಿಕ್‌ ಪೊಲೀಸ್‌ ಶಿವಾಜಿ ರಾವ್‌ ಆಕೆಯ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದರು. ಯಾವುದೇ ಕಾರಣಕ್ಕೂ ದುಡುಕಬೇಡ ಎಂದು ಆಕೆಗೆ ಹೇಳುತ್ತಿದ್ದು, ಈ ಸಂದರ್ಭದಲ್ಲಿ ಮತ್ತೊಬ್ಬ ವ್ಯಕ್ತಿ ಆಕೆಯ ಸಮೀಪ ತೆರಳಿ ರಕ್ಷಿಸಲು ಮುಂದಾದಾಗ ಆಕೆ ಕೋಪದಿಂದ ಸೇತುವೆ ಮೇಲಿಂದ ಹಾರುವುದಾಗಿ ಬೆದರಿಕೆಯೊಡ್ಡಿದ್ದಳು. ಆಗ ಗುಂಪುಗೂಡಿದ್ದ ಜನರಿಗೆ ದೂರ ಸರಿಯುವಂತೆ ಟ್ರಾಫಿಕ್‌ ಪೊಲೀಸರು ಸೂಚಿಸಿದ್ದರು. ಆಕೆ ಅಳುತ್ತಾ ತನ್ನ ಸಿಟ್ಟನ್ನು ಹೊರಹಾಕುತ್ತಿದ್ಳು. ಈ ಸಂದರ್ಭದಲ್ಲಿ ದಿಢೀರನೆ ಮುನ್ನುಗ್ಗಿದ ಟ್ರಾಫಿಕ್‌ ಪೊಲೀಸ್‌ ಆಕೆಯ ಬೆನ್ನನ್ನು ಹಿಡಿದು ಮೇಲಕ್ಕೆತ್ತಲು ಪ್ರಯತ್ನಿಸಿದ್ದು, ಕೂಡಲೇ ಉಳಿದ ಜನರು, ಪೊಲೀಸರು ನೆರವು ನೀಡುವ ಮೂಲಕ ಆಕೆಯನ್ನು ರಕ್ಷಿಸಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಮಹಿಳೆಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಟ್ರಾಫಿಕ್‌ ಕಾನ್ಸ್‌ ಟೇಬಲ್‌ ಗಳ ಸಮಯಪ್ರಜ್ಞೆಯಿಂದ ಆಕೆಯ ಜೀವ ರಕ್ಷಿಸಿದ್ದಕ್ಕೆ ನೆಟ್ಟಿಗರು ಬಹುಪರಾಕ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.