ಎಂತಹ ದುರಂತ…ಭಿಕ್ಷಾಟನೆಗಿಳಿದಿದ್ದ ತಮಿಳು ಹಾಸ್ಯ ನಟ ಮೋಹನ್‌ ಶವ ಮದುರೈ ಬೀದಿಯಲ್ಲಿ ಪತ್ತೆ

ಕುಬ್ಜ ದೇಹದ ಮೋಹನ್‌ ಗೆ ಅಲ್ಲಿಯೂ ಸೂಕ್ತವಾದ ಕೆಲಸ ಸಿಗದೇ ಅಲೆದಾಟ

Team Udayavani, Aug 3, 2023, 4:53 PM IST

ಎಂತಹ ದುರಂತ…ಭಿಕ್ಷಾಟನೆಗಿಳಿದಿದ್ದ ತಮಿಳು ಹಾಸ್ಯ ನಟ ಮೋಹನ್‌ ಶವ ಮದುರೈ ಬೀದಿಯಲ್ಲಿ ಪತ್ತೆ

ಚೆನ್ನೈ: ಇತ್ತೀಚೆಗಷ್ಟೇ ಖ್ಯಾತ ನಿರ್ದೇಶಕ ನಿತಿನ್‌ ದೇಸಾಯಿ ಆತ್ಮಹತ್ಯೆಗೆ ಶರಣಾಗಿದ್ದ ಸುದ್ದಿಯ  ಬೆನ್ನಲ್ಲೇ ಇದೀಗ 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60ವರ್ಷ) ನಿಗೂಢವಾಗಿ ಸಾವನ್ನಪ್ಪಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:BJP ಅಧಿಕಾರಕ್ಕೆ ಬಂದಿದ್ದೆ ರಕ್ತ ಕ್ರಾಂತಿ ಮಾಡಿ: ಆರ್.ಎಂ.ಮಂಜುನಾಥ್ ಗೌಡ

ಕಮಲ್‌ ಹಾಸನ್‌ ನಟನೆಯ ಸೂಪರ್‌ ಹಿಟ್‌ ಸಿನಿಮಾ ತಮಿಳಿನ ಅಪೂರ್ವ ಸಹೋದರ್‌ ಗಳ್‌ ಹಾಗೂ ನಾನ್‌ ಕಡವುಳ್ ಸೇರಿದಂತೆ ನೂರಾರು ಸಿನಿಮಾಗಳಲ್ಲಿ ಮೋಹನ್‌ ನಟಿಸಿದ್ದರು. ಆದರೆ ಇತ್ತೀಚೆಗೆ ಅವರಿಗೆ ಅವಕಾಶಗಳ ಕೊರತೆಯಿಂದಾಗಿ ತೀವ್ರ ಬಡತನದಲ್ಲಿ ಜೀವನ ಸಾಗಿಸುತ್ತಿದ್ದರು. ಅಷ್ಟೇ ಅಲ್ಲ ನಟ ಮೋಹನ್‌ ತಿರುಪರಂಕುಂದ್ರಂನ ದೇವಸ್ಥಾನದ ಸಮೀಪ ಭಿಕ್ಷೆ ಬೇಡಿ ಜೀವನ ಕಳೆಯುತ್ತಿದ್ದರು ಎಂದು ವರದಿ ವಿವರಿಸಿದೆ.

ರಸ್ತೆಯಲ್ಲಿಯೇ ಕೊನೆಯುಸಿರೆಳೆದ ಮೋಹನ್‌ ಬಗ್ಗೆ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ನಂತರ ಗುರುತುಪತ್ತೆ ಹಚ್ಚಲಾಗಿತ್ತು ಎಂದು ವರದಿ ತಿಳಿಸಿದೆ.

ಬಾಲಾ ನಿರ್ದೇಶನದ ನಾನ್‌ ಕಡವುಳ್‌ ತಮಿಳು ಸಿನಿಮಾ 2009ರಲ್ಲಿ ತೆರೆಕಂಡಿತ್ತು. ಚಿತ್ರ ಭರ್ಜರಿ ಕಲೆಕ್ಷನ್‌ ಕೂಡಾ ಮಾಡಿತ್ತು. ಆದರೆ ಈ ಸಿನಿಮಾದಲ್ಲಿ ಮೋಹನ್‌ ನಟಿಸಿದ ನಂತರ ಯಾವುದೇ ಅವಕಾಶಗಳು ಸಿಕ್ಕಿರಲಿಲ್ಲವಾಗಿತ್ತು. ಈ ಹಿನ್ನೆಲೆಯಲ್ಲಿ ಮೋಹನ್‌ ತಮ್ಮ ಊರಾದ ತಿರುಪರಂಕುಂದ್ರಂಗೆ ತೆರಳಿದ್ದರು. ಕುಬ್ಜ ದೇಹದ ಮೋಹನ್‌ ಗೆ ಅಲ್ಲಿಯೂ ಸೂಕ್ತವಾದ ಕೆಲಸ ಸಿಗದೇ, ರಸ್ತೆಯಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುವ ಸ್ಥಿತಿ ಬಂದೊದಗಿತ್ತು.

ಸುಮಾರು 10 ವರ್ಷಗಳ ಹಿಂದೆ ಮೋಹನ್‌ ಅವರ ಪತ್ನಿ ತೀರಿಕೊಂಡಿದ್ದರು. ಜುಲೈ 31ರಂದು ಮೋಹನ್‌ ಮೃತದೇಹ ಪತ್ತೆಯಾಗಿದ್ದು, ನಟನ ದೇಹ ಗುರುತಿಸಲಾಗದ ಸ್ಥಿತಿಯಲ್ಲಿದ್ದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.