ASI survey ; ಸುಪ್ರೀಂ ಕೋರ್ಟ್ ಮೊರೆ ಹೋದ ಜ್ಞಾನವಾಪಿ ಮಸೀದಿ ಸಮಿತಿ
ತುರ್ತು ವಿಚಾರಣೆಯನ್ನು ಕೋರಿ ಅರ್ಜಿ
Team Udayavani, Aug 3, 2023, 5:59 PM IST
ವಾರಾಣಸಿ: ಜ್ಞಾನವಾಪಿ ಮಸೀದಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಮುಸ್ಲಿಂ ಸಂಘಟನೆ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಗುರುವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.
370 ನೇ ವಿಧಿಯಲ್ಲಿನ ವಾದವನ್ನು ಆಲಿಸುತ್ತಿರುವ ಐವರು ನ್ಯಾಯಾಧೀಶರ ಸಂವಿಧಾನ ಪೀಠದ ನೇತೃತ್ವದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಮುಂದೆ ವಕೀಲ ನಿಜಾಮ್ ಪಾಷಾ ಅವರು ಈ ವಿಷಯವನ್ನು ಪ್ರಸ್ತಾಪಿಸಿ ತುರ್ತು ವಿಚಾರಣೆಯನ್ನು ಕೋರಿದ್ದಾರೆ.
ಅಲಹಾಬಾದ್ ಹೈಕೋರ್ಟ್ ಗುರುವಾರ ಆದೇಶ ನೀಡಿದೆ. ಆದೇಶದ ವಿರುದ್ಧ ನಾವು ಎಸ್ಎಲ್ಪಿ ಸಲ್ಲಿಸಿದ್ದೇವೆ. ಸಮೀಕ್ಷೆಗೆ ಮುಂದಾಗದಿರಲಿ ಎಂದು ತುರ್ತು ವಿಚಾರಣೆಯನ್ನು ಕೋರಿ ನಾನು ಇಮೇಲ್ ಕಳುಹಿಸಿದ್ದೇನೆ . ’’ ಎಂದು ಪಾಷಾ ಹೇಳಿದ್ದಾರೆ.
ಸಿಜೆಐ “ನಾನು ತಕ್ಷಣ ಇಮೇಲ್ ಅನ್ನು ನೋಡುತ್ತೇನೆ” ಎಂದು ಹೇಳಿದ್ದಾರೆ. ‘ಈ ವಿಚಾರದಲ್ಲಿ ತಮ್ಮ ವಿಚಾರಣೆ ನಡೆಸದೆ ಯಾವುದೇ ಆದೇಶ ಹೊರಡಿಸಬಾರದು’ ಎಂದು ಹಿಂದೂ ಪರ ಪಕ್ಷವೊಂದು ಸುಪ್ರೀಂ ಕೋರ್ಟ್ಗೆ ಕೇವಿಯಟ್ ಅರ್ಜಿ ಸಲ್ಲಿಸಿದೆ.
ಪುರಾತತ್ವ ಇಲಾಖೆ ಸಮೀಕ್ಷೆ ನಡೆಸಲು ಅಲಹಾಬಾದ್ ಉಚ್ಛ ನ್ಯಾಯಾಲಯವು ಅನುಮತಿ ನೀಡಿ, ಸಮೀಕ್ಷೆಗೆ ಅವಕಾಶ ನೀಡಿದ್ದ ವಾರಾಣಸಿ ನ್ಯಾಯಾಲಯದ ಆದೇಶವನ್ನು ಹಿಡಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.