ಆ. 14ರಂದು ಆರಂಭವಾಗಬೇಕಿದ್ದ ತರಗತಿ ಮುಂದೂಡಿಕೆ?
ಮಂಗಳೂರು ವಿ.ವಿ.: ಪದವಿ ತರಗತಿ ಆರಂಭ ಅನಿಶ್ಚಿತ!
Team Udayavani, Aug 4, 2023, 1:22 AM IST
ಮಂಗಳೂರು: ವಿವಿಧ ಸೆಮಿಸ್ಟರ್ ಪರೀಕ್ಷೆಗಳು ಇನ್ನೂ ನಡೆಯುತ್ತಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಈ ವರ್ಷವೂ ಪದವಿ ತರಗತಿಗಳು ವಿಳಂಬವಾಗಿ ಆರಂಭವಾಗಲಿವೆ.
ಆ. 14ರಿಂದ ಪದವಿ ತರಗತಿಗಳನ್ನು ಆರಂಭಿಸಲು ಈಗಾಗಲೇ ನಿಗದಿಪಡಿಸಲಾಗಿದೆ. ಆದರೆ ವಿ.ವಿ.ಯ 2, 4 ಹಾಗೂ 6ನೇ ಸೆಮಿಸ್ಟರ್ ಪರೀಕ್ಷೆಗಳು ಜು. 18ರ ಬಳಿಕ ಆರಂಭವಾಗಿದ್ದು, ಮಳೆಯ ಕಾರಣ ರದ್ದಾದ ಪರೀಕ್ಷೆಗಳ ಸಹಿತ ಆ. 16ರ ವರೆಗೆ ನಡೆಯಲಿವೆ. ಬಳಿಕ ಮೌಲ್ಯಮಾಪನ ನಡೆಯಬೇಕಿದೆ. ಉಪನ್ಯಾಸಕರೆಲ್ಲ ಮೌಲ್ಯಮಾಪನಕ್ಕೆ ಹೋದರೆ ಹೊಸ ಪದವಿ ತರಗತಿ ಆರಂಭಿಸುವುದು ಹೇಗೆ ಎಂಬುದು ಪ್ರಶ್ನೆ.
ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವು ಎ. 21ರಂದು ಪ್ರಕಟವಾಗಿದೆ. ಅದಾಗಿ ಕೆಲವು ದಿನಗಳ ಬಳಿಕ ಮಂಗಳೂರು ವಿ.ವಿ. ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಪದವಿಗೆ ದಾಖಲಾತಿ ಆರಂಭವಾಗಿತ್ತು. ಆದರೆ ಮಕ್ಕಳಿಗೆ ಇನ್ನೂ ತರಗತಿಗೆ ಬರುವ ಅವಕಾಶ ಲಭಿಸಿಲ್ಲ. ಆನ್ಲೈನ್ ತರಗತಿ ಬಗ್ಗೆ ಚರ್ಚೆ ನಡೆಯಿತಾದರೂ ಅದು ಜಾರಿಗೆ ಬರಲಿಲ್ಲ. ಸ್ವಾಯತ್ತ ಕಾಲೇಜುಗಳಲ್ಲಿ ಮಾತ್ರ ಈಗಾಗಲೇ ಪದವಿ ತರಗತಿ ನಡೆಯುತ್ತಿದೆ.
ಆ. 14ರಂದು 2023-24ರ ಪದವಿ ತರಗತಿ ಆರಂಭಕ್ಕೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಪರೀಕ್ಷೆ- ಮೌಲ್ಯಮಾಪನದಿಂದ ಕಷ್ಟವಾಗಬಹುದು ಎಂದು ಪ್ರಾಧ್ಯಾಪಕರು ವಿ.ವಿ. ಗಮನಕ್ಕೆ ತಂದಿದ್ದಾರೆ. ಈ ಸಂಬಂಧ ಆ. 8ರಂದು ನಡೆಯುವ ವಿ.ವಿ. ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಪ್ರಕಟಿಸಲಾಗುವುದು.
– ಪ್ರೊ| ಜಯರಾಜ್ ಅಮೀನ್, ಕುಲಪತಿ (ಪ್ರಭಾರ) ಮಂಗಳೂರು ವಿ.ವಿ.
ದಿನೇಶ್ ಇರಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್ಗಳ ವಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.