ಬಡವರ ಅಕ್ಕಿ ಕಿತ್ತುಕೊಂಡಿದ್ದಕ್ಕೆ ಶಾಪ ತಟ್ಟಿ ಬಿಜೆಪಿ ಅಧಿಕಾರ ಕಳಕೊಂಡಿದೆ: ಪ್ರಿಯಾಂಕ್
Team Udayavani, Aug 4, 2023, 11:28 AM IST
ಕಲಬುರಗಿ: ರಾಜ್ಯದಲ್ಲಿ ಬಡವರ ಅಕ್ಕಿ ಕಿತ್ತುಕೊಂಡ ಪರಿಣಾಮ ಬಿಜೆಪಿ ಸರಕಾರ ಜನರ ಶಾಪ ತಟ್ಟಿ ಅಧಿಕಾರ ಕಳೆದುಕೊಂಡಿದೆ ಎಂದು ಸ್ವತಃ ಬಿಜೆಪಿಯ ರೇಣುಕಾಚಾರ್ಯ ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 4.22 ಕೋಟಿ ಜನರಿಗೆ ಶೇ 70 ರಷ್ಟು ಜನರಿಗೆ ಅಕ್ಕಿ ಹಣ ಹಾಕಲಾಗುತ್ತಿದೆ. ಬಡವರಿಗೆ ಅಕ್ಕಿ ಕೊಡುವಲ್ಲಿ ಬಿಜೆಪಿ ರಾಜಕೀಯ ಮಾಡಿದೆ. ಆದರೆ ನಾವು ಪ್ರಜಾದನಿಯಲ್ಲಿ ಮಾತು ಕೊಟ್ಟಂತೆ ಗ್ಯಾರಂಟಿ ನೀಡಲು ಮುಂದಾಗಿದೆ ನಮ್ಮ ಸರಕಾರ. ಇದು ಬಿಜೆಪಿಯವರಿಗೆ ಹಿಡಿಸುತ್ತಿಲ್ಲ. ಜನರಿಗಿಂತ ಬಿಜೆಪಿಯವರಿಗೆ ದೊಡ್ಡ ಚಿಂತೆಯಾಗಿದೆ ಎಂದರು.
ಶಕ್ತಿ ಯೋಜನೆ ಗ್ಯಾರಂಟಿ ಕೂಡ ಈಡೇರಿಸಿದ್ದೇವೆ. ಪ್ರತಿ ನಿತ್ಯ 55 ಲಕ್ಷ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಓಡಾಡುತ್ತಿದ್ದಾರೆ. ಮೊದಲು 16 ಲಕ್ಷ ಮಹಿಳೆಯರು ಓಡಾಡುತ್ತಿದ್ದರು. ಈಗ ಹೆಚ್ಚಾಗಿದ್ದು ದೇವಸ್ಥಾನಗಳಲ್ಲೂ ಜನ ಬರುತ್ತಿರುವುದರಿಂದ ಖುಷಿಯಾಗಿದೆ ಎಂದು ಧರ್ಮಸ್ಥಳದ ಹೆಗ್ಗಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.
ಈಗ ಇನ್ನೊಂದು ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ತರುತ್ತಿದ್ದೇವೆ. 1.41 ಕೋಟಿ ಜನರಿಗೆ ಲಾಭ ದೊರೆಯಲಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ 54.99 ಲಕ್ಷ, ಚಾಮುಂಡೇಶ್ವರಲ್ಲಿ 20.48 ಲಕ್ಷ, ಹೆಸ್ಕಾಂ 30.66 ಲಕ್ಷ, ಮೆಸ್ಕಾಂ 43.61 ಲಕ್ಷ ಹಾಗೂ ಜೆಸ್ಕಾಂನಲ್ಲಿ 20.21 ಲಕ್ಷ ಮನೆ ಉಪಯೋಗಿಗಳಿಗೆ ಸಿಗಲಿದೆ ಎಂದರು.
ಬಿಜೆಪಿಯಲ್ಲಿ ತಂಡವೇ ಇಲ್ಲ: ರಾಜ್ಯದಲ್ಲಿ ಬಿಜೆಪಿ ತನ್ನ ನಾಯಕನ ಆಯ್ಕೆ ಮಾಡಲಿಕ್ಕಾಗದೆ ಒದ್ದಾಡುತ್ತಿದೆ. ಅದೂ ಅಲ್ಲದೆ ಆಟ ಆಡುವವರನ್ನು ಬಿಟ್ಟು 12 ನೇ ಆಟಗಾರರನ್ನು ಹುಡುಕಿ ನಾಯಕ ಮಾಡಲು ಹೊರಟಿದ್ದಾರೆ. ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಸಾಂಗತ್ಯ ಪ್ರಸ್ತಾಪ ಮಾಡಿದರು.
ಅಲ್ಲದೆ ಜೆಡಿಎಸ್ ಮುಗಿದು ಹೋಗಿದೆ. ಸುಖಾ ಸುಮ್ಮನೆ ಪೆನ್ ಡ್ರೈವ್ ಇದೆ ಎನ್ನುತ್ತಾ ಓಡಾಡುವುದು ಬಿಡಿ ಎಂದರು.
ಕೆಕೆಆರ್ಡಿಬಿ ಅಧ್ಯಕ್ಷ ಸದ್ಯಕ್ಕೆ ಚರ್ಚೆಯಿಲ್ಲ: ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ಸದ್ಯಕ್ಕೆ ಚರ್ಚೆಗೆ ಬಂದಿಲ್ಲ. ಸಚಿವರು, ಶಾಸಕರು ಯಾರಾಗುತ್ತಾರೋ ಅಧ್ಯಕ್ಷರು ಎನ್ನುವುದು ಸಿಎಂ ಅವರಿಗೆ ಬಿಟ್ಟ ವಿಚಾರ ಎಂದರು.
ಶಾಸಕ ಅಲ್ಲಂಪ್ರಭು ಪಾಟೀಲ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.