![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 4, 2023, 2:53 PM IST
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಸ್ಟ್ 5 ರಂದು ಮಧ್ಯಾಹ್ನ 12.30 ಗಂಟೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಮಧುಮಲೈಗೆ ತೆರಳುವರು. ನಂತರ ಸಂಜೆ 5.45 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ನಿರ್ಗಮಿಸುವರು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿ ರಾಜೇಂದ್ರ ಅವರು ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು. ರಾಷ್ಟ್ರಪತಿ ಆಗಮಿಸುವ ಸಂದರ್ಭದಲ್ಲಿ ಯಾವುದೇ ರೀತಿಯ ಅನನುಕೂಲ ಆಗದಂತೆ ಶಿಷ್ಟಾಚಾರ ಪ್ರಕಾರ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು, ಗೊಂದಲಕ್ಕೆ ಆಸ್ಪದ ಇಲ್ಲದಂತೆ ಇಲಾಖೆಗಳು ಸಮನ್ವಯದೊಂದಿಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ರೂಮ್ ಗಳ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಗಳು ಪರಿಶೀಲಿಸಬೇಕು. ಅದೇ ರೀತಿ ವಿದ್ಯುಚ್ಛಕ್ತಿ ಹಾಗೂ ಪರ್ಯಾಯ ವ್ಯವಸ್ಥೆ ಸಮರ್ಪಕವಾಗಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ವರದಿ ನೀಡಬೇಕೆಂದರು. ವಿಮಾನ ನಿಲ್ದಾಣ, ಕಾರ್ಯಕ್ರಮ ಸ್ಥಳದಲ್ಲಿ ತುರ್ತು ವೈದ್ಯಕೀಯ ವ್ಯವಸ್ಥೆ, ವೈದ್ಯರ ತಂಡ, ಆಂಬ್ಯುಲೆನ್ಸ್ಗಳನ್ನು ನಿಯೋಜಿಸಬೇಕು ಎಂದು ಅವರು ತಿಳಿಸಿದರು.
ಆಹಾರ ಸುರಕ್ಷತೆ, ಭದ್ರತೆ ಮತ್ತು ಶಿಷ್ಟಾಚಾರ ಪಾಲನೆಗೆ ಅಧಿಕಾರಿಗಳ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.