370ನೇ ವಿಧಿ ರದ್ದತಿ, ಕಾಶ್ಮೀರಕ್ಕೆ ಶಾಂತಿಯ ಲಾಭ


Team Udayavani, Aug 5, 2023, 5:38 AM IST

ARTICLE 370

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದು ಮಾಡಿ ಶನಿವಾರಕ್ಕೆ ನಾಲ್ಕು ವರ್ಷಗಳು ತುಂಬಿದ್ದು, ಕಣಿವೆ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಅಭಿವೃದ್ಧಿಯ ಜತೆ ಜತೆಗೆ ಶಾಂತಿಯ ಸ್ಥಾಪನೆಯಾಗಿದ್ದು, ಕಾಶ್ಮೀರದ ಮಂದಿ ನೆಮ್ಮದಿಯಿಂದ ಬಾಳ್ವೆ ಮಾಡುವ ವಾತಾವರಣ ಸೃಷ್ಟಿಯಾಗಿದೆ ಎಂಬುದು ಹೊರಜಗತ್ತಿಗೆ ಅರಿವಾಗುತ್ತಿದೆ.

2019ರ ಆ.5ರಂದು ಸಂಸತ್‌ನಲ್ಲಿ ಕೇಂದ್ರ ಸರ್ಕಾರ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಯಾರೊಬ್ಬರೂ ಊಹೆ ಮಾಡಿರಲಿಲ್ಲ. ಇದಕ್ಕೆ ಕಾರಣಗಳೂ ಇದ್ದವು. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿರುವ ಈ ವಿಶೇಷ ಸ್ಥಾನಮಾನವನ್ನು ತೆಗೆಯುವ ಸಾಧ್ಯತೆಗಳೇ ಇಲ್ಲ ಎಂದೇ ವಿಶ್ಲೇಷಿಸಲಾಗುತ್ತಿತ್ತು. ಅಲ್ಲದೆ 370ನೇ ವಿಧಿ ರದ್ದತಿ ಮಾಡಿದರೆ ಕಣಿವೆಯಲ್ಲಿ ರಕ್ತಪಾತವೇ ಆಗಲಿದೆ, ಇಂಥದ್ದೊಂದು ನಿರ್ಧಾರಕ್ಕೆ ಯಾರೊಬ್ಬರು ಕೈಹಾಕಲಾರರು ಎಂಬ ರಾಜಕೀಯ ಪಂಡಿತರ ಹಲವಾರು ಲೆಕ್ಕಾಚಾರಗಳು ತಲೆಕೆಳಗಾದವು. 2019ರಿಂದ ಇಲ್ಲಿವರೆಗೆ ಕಣಿವೆ ರಾಜ್ಯದಲ್ಲಿ ಹಿಂಸೆ ಸಾಕಷ್ಟು ಪ್ರಮಾಣದಲ್ಲಿ ಕಡಿಮೆಯಾಗಿದ್ದು, ಅಭಿವೃದ್ಧಿಯತ್ತ ರಾಜ್ಯ ದಾಪುಗಾಲಿಡುತ್ತಿದೆ. ಜತೆಗೆ, ಕೇಂದ್ರ ಸರ್ಕಾರವೂ ಅಭಿವೃದ್ಧಿಗೆ ಬೇಕಾದಷ್ಟು ಅನುದಾನವನ್ನೂ ಬಿಡುಗಡೆ ಮಾಡುತ್ತಿದೆ.

ಈ ನಾಲ್ಕು ವರ್ಷಗಳ ಅವಧಿಯ ಸ್ಥಿತಿ ಮತ್ತು ಅದರ ಹಿಂದಿನ ಸ್ಥಿತಿ ಬಗ್ಗೆ ಹೋಲಿಕೆ ಮಾಡಿದಾಗ, ಹಿಂಸಾಚಾರ, ಗದ್ದಲಗಳು ಕಡಿಮೆಯಾಗಿರುವುದು ಕಂಡು ಬರುತ್ತಿದೆ. ಗ್ರೆನೇಡ್‌ ದಾಳಿಗಳಂಥ ಪ್ರಕರಣಗಳು ಶೇ.15, ಐಇಡಿ ಸ್ಫೋಟಗಳಲ್ಲಿ ಮರಣ ಹೊಂದುವವರ ಸಂಖ್ಯೆ ಶೇ.57, ಹಿಟ್‌ ಆ್ಯಂಡ್‌ ರನ್‌ ಕೇಸುಗಳಲ್ಲಿ ಶೇ.42, ಆಯುಧಗಳ ಕಳವು ಪ್ರಕರಣಗಳಲ್ಲಿ ಶೇ.60, ಕಲ್ಲು ಎಸೆತ ಪ್ರಕರಣಗಳಲ್ಲಿ ಶೇ.92, ಹರತಾಳ ಮತ್ತು ಬಂದ್‌ ಕರೆಯಂಥ ಪ್ರಕರಣಗಳು ಶೇ.90, ಎನ್‌ಕೌಂಟರ್‌ಗಳು ಶೇ.32, ಭಯೋತ್ಪಾದಕರಿಂದ ನಾಗರಿಕರ ಸಾವು ಶೇ.11, ಕಾನೂನು ಮತ್ತು ಸುವ್ಯವಸ್ಥೆ ವೇಳೆ ನಾಗರಿಕರ ಸಾವು ಶೇ.100, ಪೊಲೀಸರ ಸಾವು ಶೇ.57, ಭಯೋತ್ಪಾದಕರ ನೇಮಕಾತಿ ಶೇ.58, ಅಪಹರಣ ಶೇ.58ರಷ್ಟು ಕಡಿಮೆಯಾಗಿವೆ.

ಹೀಗಾಗಿ, 370ನೇ ವಿಧಿ ತೆಗೆದುಹಾಕಿದ್ದರಿಂದ ಕಣಿವೆ ರಾಜ್ಯದ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. 2019ಕ್ಕೂ ಮುನ್ನ ಇದ್ದ ಸ್ಥಿತಿಯೂ ಈಗಿಲ್ಲ ಎಂಬುದು ಅಲ್ಲಿನ ನಾಗರಿಕರೇ ಮಾತನಾಡುತ್ತಿದ್ದಾರೆ. ಇದಕ್ಕೆ ಇತ್ತೀಚಿನ ಉದಾಹರಣೆ ಮೊಹರಂ ಕಡೇ ದಿನದ ಮೆರವಣಿಗೆ. ಇದನ್ನು ಶಿಯಾ ಮುಸಲ್ಮಾನರು ಮಾಡುತ್ತಿದ್ದು, ಕಳೆದ 37 ವರ್ಷಗಳಿಂದ ನಿಷೇಧಿಸಲಾಗಿತ್ತು. ಕಣಿವೆ ರಾಜ್ಯದಲ್ಲಿ ಶಿಯಾ ಮುಸ್ಲಿಮರ ಸಂಖ್ಯೆ ಕಡಿಮೆ ಇದ್ದು, ಬಹುಸಂಖ್ಯಾತರು ಇದಕ್ಕೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಜತೆಗೆ, ಮೆರವಣಿಗೆ ಮೇಲೆ ಕಲ್ಲು ಎಸೆತದಂಥ ಪ್ರಕರಣಗಳು ಹೆಚ್ಚಾಗಿದ್ದರಿಂದ ನಿಷೇಧ ಮಾಡಲಾಗಿತ್ತು. ಆದರೆ, ಇತ್ತೀಚಿಗೆ ಈ ಮೆರವಣಿಗೆ ನಡೆಯಿತಲ್ಲದೇ, ಅಲ್ಲಿನ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಕೂಡ ಭಾಗಿಯಾಗಿದ್ದರು.

ಏನೇ ಆಗಲಿ, ಈ ನಾಲ್ಕು ವರ್ಷಗಳಲ್ಲಿ ಕಣಿವೆ ರಾಜ್ಯ ಬದಲಾಗಿದೆ ಎಂಬುದನ್ನು ತಳ್ಳಿಹಾಕಲಾಗದು. ಹಾಗಂಥ ಮೈಮರೆತು ಕುಳಿತುಕೊಳ್ಳಲು ಸಾಧ್ಯವಿಲ್ಲ. ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕರು ಹಿಂಸೆಗಾಗಿ ಕಾಯುತ್ತಲೇ ಇರುತ್ತಾರೆ. ಇದರ ಮೇಲೂ ಗಮನ ಇರಿಸಿಕೊಂಡು, ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿಕೊಂಡು ಹೋಗಬೇಕಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.