ಭಾರತ ವಿರುದ್ಧದ ಟಿ20 ಸರಣಿಗೆ ಐರ್ಲೆಂಡ್ ತಂಡ ಪ್ರಕಟ: ಸ್ಟರ್ಲಿಂಗ್ ಗೆ ನಾಯಕತ್ವ
Team Udayavani, Aug 5, 2023, 2:57 PM IST
ಮಲಾಹೈಡ್: ಭಾರತದ ವಿರುದ್ಧದ ಮುಂಬರುವ ಟಿ20 ಸರಣಿಗೆ ಐರ್ಲಂಡ್ ತನ್ನ ತಂಡವನ್ನು ಪ್ರಕಟಿಸಿದೆ. ಪೌಲ್ ಸ್ಟರ್ಲಿಂಗ್ ಅವರು ತಂಡವನ್ನು ಮುನ್ನಡೆಸಲಿದ್ದು, ಆಲ್ ರೌಂಡರ್ ಫಿಯಾನ್ ಹ್ಯಾಂಡ್ ಮತ್ತು ಲೆಗ್ ಸ್ಪಿನ್ನರ್ ಗೆರಾತ್ ಡೆಲಾನಿ ತಂಡಕ್ಕೆ ಮರಳಿದ್ದಾರೆ.
ಫಿಯಾನ್ ಹ್ಯಾಂಡ್ ಅವರು ಇತ್ತೀಚಿಗಿನ ಟಿ20 ವಿಶ್ವಕಪ್ ಕ್ವಾಲಿಫಿಕೇಶನ್ ಕೂಟದ ಅಯ್ಕೆಗೆ ಲಭ್ಯವಾಗಿರಲಿಲ್ಲ. ಮತ್ತೊಂದೆಡೆ ಡೆಲಾನಿ ಅವರು ಜಿಂಬಾಬ್ವೆಯಲ್ಲಿ ನಡೆದ ಏಕದಿನ ವಿಶ್ವಕಪ್ ಅರ್ಹತಾ ಕೂಟದಲ್ಲಿ ಗಾಯಗೊಂಡಿದ್ದರು.
“ಆಟಗಾರರಿಗೆ ಅವಕಾಶಗಳನ್ನು ನೀಡುವುದು ಸರಣಿಯನ್ನು ಸ್ವತಃ ಫಿಲ್ಟರ್ ಮಾಡುತ್ತದೆ, ಆದ್ದರಿಂದ ಭಾರತ ಸರಣಿ ತಂಡದಲ್ಲಿ ಹೆಸರಿಸಲಾದ ಎಲ್ಲಾ 15 ಆಟಗಾರರು ಒಂದು ಹಂತದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ. ಐರ್ಲೆಂಡ್ ಗೆ ಆಗಮಿಸುವ ಭಾರತೀಯ ತಂಡವು ಪ್ರೇಕ್ಷಕರಿಗೆ ರೋಮಾಂಚನ ತರಲಿದೆ. ಆಟದ ಮೈದಾನದಲ್ಲಿ ಅವರನ್ನು ಎದುರಿಸಲು ನಾವು ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದೇವೆ. ಮತ್ತೊಂದು ತೀವ್ರ ಪೈಪೋಟಿಯ ಸರಣಿಯನ್ನು ನಾವು ಎದುರು ನೋಡುತ್ತಿದೆ” ಎಂದು ಮುಖ್ಯ ಆಯ್ಕೆಗಾರ ಆ್ಯಂಡ್ರ್ಯೂ ವೈಟ್ ಹೇಳಿದರು.
ಭಾರತ ಮತ್ತು ಐರ್ಲೆಂಡ್ ನಡುವಿನ ಮೂರು ಟಿ20 ಪಂದ್ಯಗಳು ಮಲಾಹೈಡ್ ನಲ್ಲಿ ಆಗಸ್ಟ್ 18, 20 ಮತ್ತು 23 ರಂದು ನಡೆಯಲಿವೆ. 2024 ರ ಪುರುಷರ ಟಿ20 ವಿಶ್ವಕಪ್ ಅರ್ಹತೆಯನ್ನು ಪಡೆದುಕೊಂಡ ನಂತರ ಈ ಸರಣಿಯು ಐರ್ಲೆಂಡ್ ನ ಮೊದಲ ದ್ವಿಪಕ್ಷೀಯ ಟಿ20 ಸರಣಿಯಾಗಿದೆ.
ಐರ್ಲೆಂಡ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಯುವ ಆಟಗಾರರ ತಂಡವನ್ನು ಜಸ್ಪ್ರೀತ್ ಬುಮ್ರಾ ಮುನ್ನಡೆಸಲಿದ್ದಾರೆ.
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಮಾರ್ಕ್ ಅಡೈರ್, ರಾಸ್ ಅಡೈರ್, ಕರ್ಟಿಸ್ ಕ್ಯಾಂಫರ್, ಗೆರಾತ್ ಡೆಲಾನಿ, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಥಿಯೋ ವ್ಯಾನ್ ವೋರ್ಕಾಮ್, ಬೆನ್ ವೈಟ್, ಕ್ರೇಗ್ ಯಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
MUST WATCH
ಹೊಸ ಸೇರ್ಪಡೆ
Belagavi: ಸುವರ್ಣ ವಿಧಾನಸೌಧಕ್ಕೆ ಯು.ಟಿ.ಖಾದರ್, ಬಸವರಾಜ ಹೊರಟ್ಟಿ ಭೇಟಿ
Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Bengaluru: ಎಎಸ್ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು
Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.