ಮತ್ತಷ್ಟು ಹೈಟೆಕ್‌ ಆಗಲಿದೆ ರಾಜ್ಯದ 8 ರೈಲ್ವೆ ನಿಲ್ದಾಣ


Team Udayavani, Aug 5, 2023, 2:53 PM IST

tdy-16

ಹಾಸನ: ಪ್ರಧಾನಿ ಮೋದಿ ಅವರು 2023-24ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಆಮೃತ್‌ ಭಾರತ್‌ ರೈಲು ನಿಲ್ದಾಣ ಯೋಜನೆಯಡಿ ಕರ್ನಾಟಕದ 55 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ನೈರುತ್ಯ ರೈಲ್ವೆ ಯೋಜಿಸಿದೆ. ಅದರಲ್ಲಿ ಹಾಸನ ಜಿಲ್ಲೆಯ ಅರಸೀಕೆರೆ ರೈಲು ನಿಲ್ದಾಣ ಸೇರಿದಂತೆ 8 ರೈಲು ನಿಲ್ದಾಣಗಳ ಅಭಿವೃದ್ಧಿಯನ್ನು ಮೊದಲ ಹಂತದಲ್ಲಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ. ಈ 8 ರೈಲು ನಿಲ್ದಾಣಗಳ ಪುನರಾಭಿವೃದ್ಧಿಯ 171.17 ಕೋಟಿ ರೂ. ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಲಾಗುತ್ತಿದೆ.

ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಯಲ್ಲಿ ನಿಲ್ದಾಣಗಳ ಆಕರ್ಷಣೀಯ ಪ್ರವೇಶ ದ್ವಾರ ನಿರ್ಮಾಣ, ಸಂಚಾರ ಪ್ರದೇಶ, ಪ್ರಯಾಣಿಕರ ವಿಶ್ರಾಂತ ಕೊಠಡಿ ವ್ಯವಸ್ಥೆ, ವಿಶೇಷ ಚೇತನ ಹಾಗೂ ವೃದ್ಧ ಪ್ರಯಾಣಿಕರಿಗೆ ಅನು ಕೂಲ ಆಗುವಂತೆ ಲಿಫ್ಟ್ ಮತ್ತು ಎಸ್ಕಲೇಟರ್‌ ವ್ಯವಸ್ಥೆ, ಸ್ಥಳೀಯವಾಗಿ ತಯಾರಿಸಿದ ವಸ್ತುಗಳನ್ನು ಒಂದು ನಿಲ್ದಾಣ ಮತ್ತು ಒಂದು ಉತ್ಪನ್ನ ಮಳಿಗೆಗಳ ನಿರ್ಮಾಣ, ರೀಟೈಲ್‌ ಮಳಿಗೆಗಳ ನಿರ್ಮಾಣ ಎಕ್ಸಿಕ್ಯೂಟಿವ್‌ ಲಾಂಜ್‌ ಸೇರಿದಂತೆ ಹಲವು ಸೌಕರ್ಯಗಳನ್ನೊಳಗೊಂಡ ಮಾಸ್ಟರ್‌ ಪ್ಲಾನ್‌ಗೆ ಆ.6ರಂದು ಚಾಲನೆ ಸಿಗುತ್ತಿದೆ.

ಪರಿಸರ ಸ್ನೇಹಿ ರೈಲು ನಿಲ್ದಾಣ: ರೈಲು ನಿಲ್ದಾಣದ ಕಟ್ಟಡವನ್ನು ಆಧುನಿಕ ವಾಸ್ತು ವಿನ್ಯಾಸದೊಂದಿಗೆ ಪುನರ್‌ ರೂಪಿಸುವುದು. ನಿಲ್ದಾಣದ ಎರಡೂ ಬದಿಗಳನ್ನು ನಗರದೊಂದಿಗೆ ಸಂಪರ್ಕಿಸುವ ವ್ಯವಸ್ಥೆ, ಜಲ್ಲಿಕಲ್ಲು ರಹಿತ ಟ್ರ್ಯಾಕ್‌ಗಳ ನಿರ್ಮಾಣ, ರೂಫ್ ಫ್ಲಾಜಾಗಳ ವ್ಯವಸ್ಥೆ, ಸುಸ್ಥಿರ ಹಾಗೂ ಪರಿಸರ ಸ್ನೇಹಿ ಅಭಿವೃದ್ಧಿಯೊಂದಿಗೆ ರೈಲು ನಿಲ್ದಾಣಗಳನ್ನು ನಗರ ಕೇಂದ್ರ (ಸಿಟಿ ಸೆಂಟರ್‌) ಗಳಾಗಿ ರೂಪಿಸುವುದು ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಪ್ರಮುಖ ಉದ್ದೇಶವಾಗಿದೆ. ಆ.6 ರ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಮೂಲಕ ಕರ್ನಾಟಕದ 8 ರೈಲು ನಿಲ್ದಾಣಗಳೂ ಸೇರಿದಂತೆ ದೇಶದ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಚಾಲನೆ ನೀಡುತ್ತಿದ್ದಾರೆ.

ಯಾವ ನಿಲ್ದಾಣಗಳಿಗೆ ಎಷ್ಟು ವೆಚ್ಚ ?: ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಮೊದಲ ಹಂತದಲ್ಲಿ ನೈರುತ್ಯ ರೈಲ್ವೆ ವಲಯದ ಹುಬ್ಬಳಿ ವಿಭಾಗದ 6 ನಿಲ್ದಾಣಗಳು ಹಾಗೂ ಮೈಸೂರು ವಿಭಾಗದ 2 ರೈಲು ನಿಲ್ದಾಣಗಳ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಹುಬ½ಳ್ಳಿ ವಿಭಾಗದ ಅಳ್ನಾವರ ನಿಲ್ದಾಣದ ಅಭಿವೃದ್ಧಿಗೆ 17.2 ಕೋಟಿ ರೂ., ಘಟಪ್ರಭಾ ನಿಲ್ದಾಣ – 19.2 ಕೋಟಿ ರೂ.,ಗೋಕಾಕ್‌ ರೋಡ್‌ ನಿಲ್ದಾಣ – 17 ಕೋಟಿ ರೂ., ಗದಗ ನಿಲ್ದಾಣ – 23.2 ಕೋಟಿ ರೂ., ಕೊಪ್ಪಳ ನಿಲ್ದಾಣ – 21.1 ಕೋಟಿ ರೂ., ಬಳ್ಳಾರಿ ನಿಲ್ದಾಣ – 16.7 ಕೋಟಿ ರೂ., ಮೈಸೂರು ವಿಭಾಗದ ಅರಸೀಕೆರೆ ನಿಲ್ದಾಣ – 34.1 ಕೋಟಿ ರೂ. ಮತ್ತು ಹರಿಹರ ನಿಲ್ದಾಣದ ಪುನರಾಭಿವೃದ್ಧಿಗೆ 25.2 ಕೋಟಿ ರೂ.ನಿಗದಿಯಾಗಿದೆ.

ರೈಲು ನಿಲ್ದಾಣದ ಸಮೀಪ ಹಳಿಗಳ ಮೂಲಕ ಸುಬ್ರಹ್ಮಣ್ಯ ನಗರ, ಮಲ್ಲೇಶ್ವರ ನಗರ, ಕಾಳನ ಕೊಪ್ಪಲು ಮತ್ತು ಕಾಟೀಕೆರೆ ಗೆ ಸಂಚರಿಸುವ ಮಾರ್ಗವಿತ್ತು. ಅಲ್ಲಿಗೆ ಒಂದು ರೈಲ್ವೆ ಗೇಟ್‌ ಕೂಡ ಇತ್ತು. ಆದರೆ ಫ್ಲಾಟ್‌ ಫಾರಂ ಉದ್ದ ಹೆಚ್ಚಳವಾಗಿದ್ದರಿಂದ ರೈಲ್ವೆ ಗೇಟ್‌ ಬಂದ್‌ ಮಾಡಿ ಜನರು ಹಾಗೂ ವಾಹನ ಸಂಚಾರ ಬಂದ್‌ ಮಾಡಿದ್ದರಿಂದ ನಾಲ್ಕು ಬಡಾವಣೆಗಳ ಜನರು ಕಿ.ಮೀ. ಗಟ್ಟಲೆ ಸುತ್ತಿ ಬಳಸಿ ಸಂಚರಿಸಬೇಕಾಗಿದೆ. ರೈಲ್ವೆ ಮೇಲ್ಸೆತುವೆ ನಿರ್ಮಾಣ ಮಾಡಿದರೆ ಈ ಬಡಾವಣೆಗಳ ಜನರಿಗೆ ಸಂಚಾರ ಸುಗಮವಾಗಲಿದ್ದು, ರೈಲು ನಿಲ್ದಾಣದ ಸಂಪರ್ಕವೂ ಸನಿಹವಾಗುತ್ತದೆ. ಆದರೆ, ರೈಲ್ವೆ ಇಲಾಖೆ ಮೇಲ್ಸೆತುವೆ ಬೇಡಿಕೆ ಈಡೇರಿ ಸಲು ಮನಸ್ಸು ಮಾಡುತ್ತಿಲ್ಲ. ಈ ಸಮಸ್ಯೆ ಹೊರತುಪಡಿಸಿ ಅರಸೀಕೆರೆ ರೈಲು ನಿಲ್ದಾಣವು ನಗರದ ಮಧ್ಯೆ ಹಾಗೂ ಪ್ರಮುಖ ವಾಣಿಜ್ಯ ಪ್ರದೇಶಗಳ ಸನಿಹವಿದೆ. ಜತೆಗೆ ಈಗ 34 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿ ರುವುದರಿಂದ ಇನಷ್ಟು ಆಕರ್ಷಣೀಯ ಹಾಗೂ ಮೂಲ ಸೌಕರ್ಯ ಹೊಂದಲಿದೆ.

ಅರಸೀಕೆರೆ ಫ್ಲೈಓವರ್‌ ಕನಸು:

ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಯ ಮೊದಲ ಹಂತದಲ್ಲಿ ಕೈಗೆತ್ತಿಕೊಳ್ಳುತ್ತಿರುವ 8 ನಿಲ್ದಾಣಗಳ ಅಭಿವೃದ್ಧಿಯ ಯೋಜನೆಯಲ್ಲಿ ಅರಸೀಕೆರೆ ರೈಲು ನಿಲ್ದಾಣಕ್ಕೆ ಅತಿ ಹೆಚ್ಚು 34. 1 ಕೋಟಿ ರೂ. ನಿಗದಿಯಾಗಿದೆ. ಆದರೆ ಅರಸೀಕೆರೆ ರೈಲು ನಿಲ್ದಾಣ ದ ಬಳಿ ಮೇಲ್ಸೆತುವೆ ನಿರ್ಮಾಣ ಮಾಡಿ ಮೂರು ಬಡಾವಣೆಗಳಿಗೆ ಸಂಪರ್ಕ ಕಲ್ಪಿಸಬೇಕೆಂಬ ಒಂದು ದಶಕದ ಬೇಡಿಕೆ ಮಾತ್ರ ಈಡೇರುವ ಸೂಚನೆಗಳು ಕಾಣುತ್ತಿಲ್ಲ.

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.