ಕಲ್ಪತರು ನಾಡಿನ 104 ಶಾಲಾ ಕಟ್ಟಡಕ್ಕೆ ಮಳೆ ಹೊಡೆತ!


Team Udayavani, Aug 5, 2023, 3:03 PM IST

tdy-17

ತುಮಕೂರು: ಸರ್ಕಾರಿ ಶಾಲೆಗಳ ಉನ್ನತಿಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೂ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬುದು ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳ ದುಸ್ಥಿತಿಯನ್ನು ನೋಡಿದರೆ ಅರ್ಥವಾಗುತ್ತದೆ. ಜಿಲ್ಲೆಯಲ್ಲಿ ಇರುವ 2681 ಸರ್ಕಾರಿ ಪ್ರಾಥಮಿ, ಕಿರಿಯ, ಪ್ರೌಢಶಾಲೆಗಳ ಪೈಕಿ ಕೆಲವು ಶಾಲೆಗಳಲ್ಲಿ ಮಕ್ಕಳು ಕುಳಿತುಕೊಳ್ಳಲು ಆಗದ ಸ್ಥಿತಿಯಿದೆ.

ಬಡಮಕ್ಕಳೇ ವಿದ್ಯಾಭ್ಯಾಸ ಮಾಡು ತ್ತಿರುವ ಸರ್ಕಾರಿ ಶಾಲೆಗಳು ಇಂದಿಗೂ ಅಗತ್ಯ ಮೂಲ ಭೂತ ಸೌಲಭ್ಯದಿಂದ ವಂಚಿತವಾಗಿವೆ. ಹಾಗೆಯೇ  ಮಳೆ ಬಂದರೆ ಪಾಠ ಕೇಳಲೂ ಆಗದ ಸ್ಥಿತಿಯಲ್ಲಿ ಮಕ್ಕಳಿದ್ದಾರೆ.

ಕಳೆದ ಜೂನ್‌, ಜುಲೈನಲ್ಲಿ ಬಂದ ಭಾರೀ ಮಳೆಗೆ ಹಲವು ಶಾಲಾ ಕಟ್ಟಡ ಗಳು ಶಿಥಿಲವಾಗಿವೆ. ಜಿಲ್ಲೆಯಲ್ಲಿ 2022- 23ನೇ ಸಾಲಿನಲ್ಲಿ 104 ಶಾಲೆಗಳಿಗೆ ಹಾನಿಯಾಗಿದೆ. ಕಳೆದ ಮೇ, ಜೂನ್‌ ನಲ್ಲಿ ಸುರಿದ ಮಳೆಯಿಂದಲೂ ಕೆಲವು ಕಡೆ ತೀವ್ರ ಮಳೆಗೆ ಶಾಲಾ ಕಟ್ಟಡಗಳು ಕುಸಿದಿವೆ. ಈ ಕುಸಿದಿರುವ ಶಾಲಾ ಕಟ್ಟಡಗಳ ದುರಸ್ಥಿ ಸೇರಿದಂತೆ ಶಿಥಿಲಗೊಂಡ 11 ಶಾಲೆಗಳ ಕಾಮಗಾರಿ ಇನ್ನೂ ಆರಂಭವೇ ಆಗಿಲ್ಲ.

6 ಶಾಲೆ ಕಾಮಗಾರಿ ಪ್ರಗತಿ: ಇಲ್ಲಿಯವರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ  ದೊರೆತಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ 104 ಶಾಲೆ ಮಳೆಯಿಂದ ಹಾನಿಯಾಗಿವೆ. ಅದರಲ್ಲಿ ಚಿಕ್ಕನಾಯಕನಹಳ್ಳಿ 21, ಗುಬ್ಬಿ  15, ಕುಣಿಗಲ್‌ 21, ತಿಪಟೂರು 13, ತುಮಕೂರು 14, ತುರುವೇಕೆರೆ 20 ಶಾಲೆ ಮಳೆಯಿಂದ ಹಾನಿಗೆ ಒಳಗಾಗಿವೆ. ಹಾನಿ ಗೊಂಡ ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ಇಲಾಖೆಯ ವಿವಿಧ‌ ಮೂಲಗಳ ಅನುದಾನವನ್ನು ಬಳಸಿ ಅಭಿವೃದ್ಧಿಗೆ ಒತ್ತು ನೀಡಿದೆ. ಇನ್ನು ಹಾನಿಗೆ ಒಳಗಾದ ಶಾಲೆ ಪೈಕಿ 87ಶಾಲೆಯ ಅಭಿವೃದ್ಧಿ ಕಾಮಗಾರಿ ಮುಕ್ತಾಯ ಗೊಂಡಿದೆ. 6 ಶಾಲೆಯ ಕಾಮಗಾರಿ ಪ್ರಗತಿಯಲ್ಲಿದ್ದು ಇನ್ನೂ 11 ಶಾಲೆಗಳ ಕಾಮಗಾರಿ ಪ್ರಾರಂಭವಾಗಿಲ್ಲ.

ಆರಂಭಿಸಬೇಕಿದೆ: ತುಮಕೂರು ಶೈಕ್ಷಣಿಕ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 31 ಕೊಠಡಿ, ಗುಬ್ಬಿಯಲ್ಲಿ 29 ಶಾಲೆಗಳ  38 ಕೊಠಡಿ, ಕುಣಿಗಲ್‌ನ 18 ಶಾಲೆಗಳ 20 ಕೊಠಡಿ,  ತಿಪಟೂರಿನ 42 ಶಾಲೆಯ 62 ಕೊಠಡಿ, ತುಮಕೂರು ನಗರದ 16 ಶಾಲೆಯ 34 ಕೊಠಡಿ, ತುಮಕೂರು ಗ್ರಾಮಾಂತರ ಕ್ಷೇತ್ರದ 21 ಶಾಲೆಗಳ 27 ಕೊಠಡಿ, ತುರುವೇಕೆರೆ 32 ಶಾಲೆಗಳ 32 ಕೊಠಡಿ ಸೇರಿ 188 ಶಾಲೆಗಳ 224 ಶಾಲಾ ಕೊಠಡಿ ನಿರ್ಮಾಣಕ್ಕೆ ಕಾರ್ಯಾದೇಶ ನೀಡಿದ್ದು 24 ಕಟ್ಟಡಗಳ ಕಾಮಗಾರಿ ಮುಗಿದಿದೆ.  ಅದರಲ್ಲಿ 160 ಕಾಮಗಾರಿ ಪ್ರಗತಿಯಲ್ಲಿದ್ದು ಇನ್ನೂ 60 ಶಾಲಾ ಕಟ್ಟಡ ಕಾಮಗಾರಿ ಪ್ರಾರಂಭಿಸಬೇಕಿದೆ.

ಇದಲ್ಲದೇ ಶಿಥಿಲಗೊಂಡಿರುವ ಕಟ್ಟಡಗಳ ದುರಸ್ಥಿ ಗಾಗಿ 2.10 ಕೋಟಿ ಬಿಡುಗಡೆಯಾಗಿದ್ದು ಅದರಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ 11 ಶಾಲೆಗಳ 12 ಕೊಠಡಿ, ಗುಬ್ಬಿಯ 10 ಶಾಲೆಯ 11 ಕೊಠಡಿ, ಕುಣಿಗಲ್‌ ನ 15 ಶಾಲೆ 25 ಕೊಠಡಿ, ತಿಪಟೂರು 9ಶಾಲೆ 14 ಕೊಠಡಿ, ತುಮಕೂರು ನಗರ 8 ಶಾಲೆಗಳ 18 ಕೊಠಡಿ, ತುಮಕೂರು ಗ್ರಾಮಾಂತರ 20 ಶಾಲೆಗಳ 47 ಕೊಠಡಿ, ತುರುವೇಕೆರೆ 10 ಶಾಲೆಗಳ 10 ಕೊಠಡಿ ಸೇರಿ 83 ಶಾಲೆಗಳ 137 ಕೊಠಡಿಗಳಲ್ಲಿ 65 ಕಾಮಗಾರಿ ಮುಗಿದಿದೆ. ಇನ್ನೂ 7 ಪ್ರಗತಿಯಲ್ಲಿದ್ದು 11 ಶಾಲಾ ಕಟ್ಟಡಗಳ ಕಾಮಗಾರಿ ನಡೆಯುತ್ತಿದೆ.

ಪ್ರಸಕ್ತ ಸಾಲಿನಲ್ಲಿ ಮಳೆಯಿಂದ ಹಾನಿಯಾಗಿರುವ ಜತೆಗೆ ಹಳೆಯ ಶಾಲಾ ಕಟ್ಟಡ ತೆರವು ಮಾಡಿ ಹೊಸ ಶಾಲಾ ಕಟ್ಟಡಕಟ್ಟಲು ನರೇಗಾ ಯೋಜನೆಯಲ್ಲಿ ಕಾಮಗಾರಿ ಆರಂಭಿಸಲು ಚಿಕ್ಕನಾಯಕನಹಳ್ಳಿ 44, ಗುಬ್ಬಿ 74, ಕುಣಿಗಲ್‌ 62, ತಿಪಟೂರು 49, ತುಮ ಕೂರು 79, ತುರುವೇಕೆರೆ 50 ಸೇರಿ ಒಟ್ಟು 358 ಶಾಲಾ ಕಟ್ಟಡಗಳ ಕಾಮಗಾರಿಗೆ ಯೋಜನೆ ಪ್ರಗತಿಯಲ್ಲಿದೆ.

ಮೇ, ಜೂನ್‌ನ ಮಾಹಿತಿ ಸಂಗ್ರಹ ಆಗಬೇಕಿದೆ:

ಕಳೆದ ಮೇ, ಜೂನ್‌ ತಿಂಗಳಿನಲ್ಲಿ ಸುರಿದ ಮಳೆಯಿಂದಲೂ ಕೆಲವು ಕಡೆ ಶಾಲಾ ಕಟ್ಟಡಗಳಿಗೆ ಹಾನಿಯಾಗಿದ್ದು ಅದರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ ಹಳೆಯ ಶಾಲಾ ಕಟ್ಟಡಗಳ ನವೀಕರಣ ಹಾಗೂ ಮಳೆಹಾನಿಯಿಂದ ತೊಂದರೆಗೆ ಒಳಗಾಗಿರುವ 188 ಶಾಲೆಗಳಲ್ಲಿ 2022-23 ನೇ ಸಾಲಿನಲ್ಲಿ ವಿವೇಕ ಯೋಜನೆಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿ ಇದೆ. ಅದರಲ್ಲಿ 188 ಶಾಲೆಗಳ 244 ಕೊಠಡಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾಗಿರುವ ಸರ್ಕಾರಿ ಶಾಲಾ ಕಟ್ಟಡಗಳ ಮಾಹಿತಿ ಪಡೆಯಲಾಗುತ್ತಿದೆ. ಕಳೆದ ವರ್ಷ ಮಳೆ ಯಿಂದ ಹಾನಿಯಾದ ಕಟ್ಟಡಗಳ ದುರಸ್ತಿ ಪ್ರಗತಿಯಲ್ಲಿದೆ. ಜತೆಗೆ ಹಳೆಯ ಕಟ್ಟಡಗಳ ಕಾಮಗಾರಿಯೂ ನಡೆಯುತ್ತಿದ್ದು ವಿದ್ಯಾರ್ಥಿ ಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. -ಸಿ.ರಂಗಧಾಮಯ್ಯ, ಉಪನಿರ್ದೇಶ ಕರು, ಸಾರ್ವಜನಿಕ ಶಿಕ್ಷಣ ಇಲಾಖೆ

– ಚಿ.ನಿ.ಪುರುಷೋತ್ತಮ್‌

 

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು

Turuvekere: ಗಣೇಶ ವಿಸರ್ಜನೆ ವೇಳೆ ಮುಳುಗಿ ತಂದೆ, ಮಗ ಸೇರಿ ಮೂವರ ಸಾವು

8-koratagere

ಬಲಿಗಾಗಿ ಕಾದುಕುಳಿತ ಅರಳಿ ಮರ; ಯಾವುದೇ ಅಹಿತಕರ ಘಟನೆಯಾಗುವ ಮುನ್ನ ಅರಳಿ ಮರ ತೆರವುಗೊಳಿಸಿ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.