ವಿಜಯಪುರ: ದ್ರಾಕ್ಷಿ ಬೆಳೆಗಾರರ ಚಿಂತನ ಸಭೆ; ಒಣ ದ್ರಾಕ್ಷಿಗೆ ಬೆಂಬಲ ಘೋಷಣೆಗೆ ಆಗ್ರಹ

ಮಠಾಧೀಶರ ನಿಯೋಗದಲ್ಲಿ ಸಿಎಂ ಭೇಟಿಗೆ ನಿರ್ಧಾರ

Team Udayavani, Aug 5, 2023, 8:03 PM IST

1-sadsdsd

ವಿಜಯಪುರ: ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವ ಮೂಲಕ ಕೇಂದ್ರ-ರಾಜ್ಯ ಸರ್ಕಾರಗಳು ದ್ರಾಕ್ಷಿ ಬೆಳೆಗಾರರ ನೆರವಿಗೆ ಬರಬೇಕು. ಇದಕ್ಕಾಗಿ ಆ.11 ರಂದು ಬೆಳಗಾವಿ ಜಿಲ್ಲೆಯ ಅಥಣಿಗೆ ಭೇಟಿ ನೀಡುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಮಠಾಧೀಶರ ನೇತೃತ್ವದಲ್ಲಿ ನಡೆದ ದ್ರಾಕ್ಷಿ ಬೆಳೆಗಾರರ ಚಿಂತನ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶನಿವಾರ ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಮಠಾಧೀಶರ ನೇತೃತ್ವದಲ್ಲಿ ನಡೆದ ದ್ರಾಕ್ಷಿ ಬೆಳೆಗಾರರ ಚಿಂತನ ಸಭೆಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ಅಲ್ಲದೇ ಚಿಂತನ ಸಭೆಯಲ್ಲಿ ಚರ್ಚಿಸಿ, ನಿರ್ಧರಿಸಿದ ಬೇಡಿಕೆಗಳ ಈಡೇರಿಕೆ ಕುರಿತು ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ ಮೂಲಕ ಸರ್ಕಾರಕ್ಕೆ ಮನವಿಯನ್ನೂ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಸಬಿನಾಳದ ಸಿದ್ಧರಾಮ ಶ್ರೀಗಳು, ಬೆಲೆ ಕುಸಿತದಿಂದಾಗಿ ಒಣ ದ್ರಾಕ್ಷಿ ಬೆಳೇಗಾರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೂಡಲೇ ಒಣದ್ರಾಕ್ಷಿಗೆ ಬೆಂಬಲ ಬೆಲೆ ಯೋಜನೆಯಲ್ಲಿ ಒಣದ್ರಾಕ್ಷಿ ಖರೀದಿಸಬೇಕು. ಖರೀದಿಸಿದ ಒಣದ್ರಾಕ್ಷಿಯನ್ನು ಅಂಗನವಾಡಿ ಮಕ್ಕಳಿಗೆ, ಅಕ್ಷರ ದಾಸೋಹ ಯೋಜನೆಯಲ್ಲಿ ಶಾಲಾ ಮಕ್ಕಳಿಗೆ, ಸೈನಿಕರಿಗೆ ವಿತರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ರೈತರು ವರ್ಷ ಹಲವು ಕಾರಣಗಳಿಂದ ಸಂಕಷ್ಟದಲ್ಲಿದ್ದು, ದ್ರಾಕ್ಷಿ ಬೆಳೆಗಾರರ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ಒಣದ್ರಾಕ್ಷಿ ಸೇವನೆಯಿಂದ ಹಲವು ರೀತಿಯ ಪೌಷ್ಠಿಕಾಂಶ ಲಭ್ಯವಾಗಲಿದ್ದು, 20 ಕ್ಕೂ ಹೆಚ್ಚು ರೋಗಗಳಿಗೆ ಔಷಧಿ ರೂಪದಲ್ಲಿ ಕೆಲಸ ಮಾಡಲಿದೆ.

ದೇವರಹಿಪ್ಪರಗಿಯ ವೀರಗಂಗಾಧರ ಶ್ರೀಗಳು ಮಾತನಾಡಿ, ದ್ರಾಕ್ಷಿ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದ್ದು, ಇದರಲ್ಲಿ ವಿಜಯಪುರ ಜಿಲ್ಲೆಯ ಉತ್ಪಾದನೆಯೇ ಶೇ.70 ರಷ್ಟಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ ಸೇರಿದಂತೆ ಇತರೆ ಜಿಲ್ಲೆಗಳಲ್ಲೂ ದ್ರಾಕ್ಷಿ ಬೆಳೆಯಲಾಗುತ್ತಿದೆ, ಆದರೆ ಒಣದ್ರಾಕ್ಷಿ ಉತ್ಪಾದನೆಯಲ್ಲಿ ವಿಜಯಪುರ ಜಿಲ್ಲೆ ಅಗ್ರ ಸ್ಥಾನದಲ್ಲಿದ್ದು, ವಾರ್ಷಿಕ ಒಟ್ಟು ಉತ್ಪಾದನೆಯಲ್ಲಿ ಶೇ.90 ರಷ್ಟು ಹಸಿದ್ರಾಕ್ಷಿ ಒಣದ್ರಾಕ್ಷಿಯಾಗಿ ಪರಿವರ್ತನೆಗೊಳ್ಳುತ್ತದೆ. ಇದರಿಂದ ವಾರ್ಷಿಕ ಸುಮಾರು 4500 ಕೋಟಿ ರು. ವಹಿವಾಟು ಆಗಲಿದೆ ಎಂದರು.

ವಿಜಯಪುರ ಜಿಲ್ಲೆಯಲ್ಲಿ 1 ಲಕ್ಷ ಕೃಷಿ ಕುಟುಂಬಗಳು ದ್ರಾಕ್ಷಿ ಬೆಳೆಯಯನ್ನೇ ಅವಲಂಬಿಸಿದ್ದು, 15 ಕೋಟಿ ಮಾನವ ದಿನಗಳ ಕೆಲಸ ನೀಡುವ ಮೂಲಕ ವರ್ಷಪೂರ್ತಿ ಗ್ರಾಮೀಣ ಕೃಷಿ ಕಾರ್ಮಿಕರಿಗೆ ನಿರಂತರ ಉದ್ಯೋಗ ಕಲ್ಪಿಸುತ್ತಿದೆ ಎಂದರು.

ಅಖಿಲ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಸಾಮಾನ್ಯ ಮಾರುಕಟ್ಟೆಯಲ್ಲಿ ಹಸಿದ್ರಾಕ್ಷಿಗೆ 30-50 ರೂ. ಬೆಲೆ ಇರುತ್ತಿದ್ದು, ಈಚಿನ ವರ್ಷಗಳಲ್ಲಿ ಈ ದರ 15-20 ರೂ. ಕುಸಿದಿದೆ. ಒಣದ್ರಾಕ್ಷಿ ಬೆಲೆ ಇದೀಗ 150-250 ರೂ. ಗೆ ಬದಲಾಗಿ 60-110 ರೂ.ಗೆ ಕುಸಿದಿದ್ದು, ದ್ರಾಕ್ಷಿ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಮಸ್ಯೆ ನಿವೇದಿಸಿದರು.

ಮಾರುಕಟ್ಟೆ ಹಾಗೂ ದರದ ಸಮಸ್ಯೆ ಮಾತ್ರವಲ್ಲದೇ 1 ಎಕರೆ ದ್ರಾಕ್ಷಿ ಬೆಳೇ ನಿರ್ವಹಣೆಗೆ ವಾರ್ಷಿಕ ಕನಿಷ್ಟ 2.25 ಲಕ್ಷ ರೂ. ಖರ್ಚು ತಗುಲುತ್ತದೆ. ಸಾಲ ಸೂಲ ಮಾಡಿ ದ್ರಾಕ್ಷಿ ಬೆಳೆಯುವ ರೈತರಿಗೆ ಈಚಿನ ವರ್ಷಗಳಲ್ಲಿ ಪ್ರಕೃತಿ ವಿಕೋಪವೂ ದೊಡ್ಡ ಸಮಸ್ಯೆಯನ್ನೇ ಸೃಷ್ಡಿಸುತ್ತಿದೆ. ಅಧಿಕ ವೆಚ್ಚ, ಪ್ರಕೃತಿ ವಿಕೋಪದಂಥ ಸಮಸ್ಯೆಗಳ ಮಧ್ಯೆ ಕಂಗಾಲಾರಿರುವ ದ್ರಾಕ್ಷಿ ಬೆಳೆಗಾರರು, ಆರ್ಥಿಕ ಸಮಸ್ಯೆಯಿಂದಾಗಿ ಸಾಲದ ಸುಳಿಗೆ ಸಿಲುಕಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಪ್ರತಿ ಟನ್ ಒಣದ್ರಾಕ್ಷಿಗೆ 1.50 ದಿಂದ 2,50 ಲಕ್ಷ ರೂ. ವರೆಗೆ ಬೆಂಬಲ ಘೋಷಿಸಿ, ತ್ವರಿತವಾಗಿ ಖರೀದಿಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಬಂಥನಾಳ ವೃಷಭಲಿಂಗ ಶ್ರೀಗಳು, ಕರಭಂಟನಾಳ ಗಂಗಾಧರ ಮಠದ ಶಿವಕುಮಾರ ಶ್ರೀಗಳು, ಬಸವನಬಾಗೇವಾಡಿಯ ಹಿರೇಮಠ ಶಿವಪ್ರಕಾಶ ಶ್ರೀಗಳು, ಕುಮಸಿ ಶ್ರೀಗಳು ಮಡಿವಾಳೇಶ್ವರ ಶ್ರೀಗಳು, ವಡವಡಗಿಯ ನಂದಿಮಠದ ವೀರಸಿದ್ಧ ಶ್ರೀಗಳು, ಅಥಣಿ ಮಾಜಿ ಶಾಸಕ ಶಹಜಾನ್ ಡೊಂಗರಗಾಂವ, ರವಿ ತೊರವಿ, ಎಸ್.ಎಲ್.ಜೀರಗಾಳ, ಡಾ.ಕೆ.ಎಚ್.ಮುಂಬಾರೆಡ್ಡಿ, ಭೀಮಸೇನ ರಾಕ್ಸೆ, ಸಂಗನಗೌಡ ಚಕ್ಕೊಂಡ, ಅಶೋಕ ಗಂಗಾನವರ, ಮಹೇಶಚಂದ್ರ ಯಂಕಂಚಿ, ನಾನಾಗೌಡ ಪಾಟೀಲ ನಾಗರಹಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.