ಹರ್ಯಾಣ ಗಲಭೆಗೆ ಪಾಕ್ ಯೂಟ್ಯೂಬ್ ಚಾನೆಲ್ ಕುಮ್ಮಕ್ಕು
- ಭಾರತೀಯ ಅಧಿಕಾರಿಗಳ ಆಕ್ಷೇಪದ ಹಿನ್ನೆಲೆ ಚಾನೆಲ್ ನಿಷೇಧಿಸಿದ ಯೂಟ್ಯೂಬ್
Team Udayavani, Aug 6, 2023, 6:47 AM IST
ಚಂಡೀಗಢ: ಹರ್ಯಾಣದ ಮೇವತ್ನಲ್ಲಿ ಕೋಮು ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಪಾಕಿಸ್ತಾನದ ಯೂಟ್ಯೂಬ್ ಚಾನೆಲ್ “ಅಹ್ಸಾನ್ ಮೇವಾಟಿ ಪಾಕಿಸ್ತಾನಿ’ ಅನ್ನು ನಿಷೇಧಿಸಲಾಗಿದೆ.
ಮೇವತ್ನಲ್ಲಿ ಎರಡು ಕೋಮುಗಳ ನಡುವೆ ದ್ವೇಷ ಕೆರಳಿಸಲು ನಿರ್ದಿಷ್ಟವಾಗಿ ವಿಡಿಯೋ ಕಂಟೆಂಟ್ ತಯಾರಿಸಿ, ಈ ಚಾನೆಲ್ ಹರಿಬಿಟ್ಟಿದೆ ಎಂದು ಭಾರತೀಯ ಅಧಿಕಾರಿಗಳು ಆಕ್ಷೇಪ ಎತ್ತಿರುವ ಹಿನ್ನೆಲೆಯಲ್ಲಿ ಯೂಟ್ಯೂಬ್ ಈ ಕ್ರಮ ಕೈಗೊಂಡಿದೆ.
ಈ ಚಾನೆಲ್ ನಿಷೇಧಕ್ಕೂ ಮೊದಲು 273 ವಿಡಿಯೋಗಳು ಹಾಗೂ 80,000 ಫಾಲೋವರ್ಗಳನ್ನು ಹೊಂದಿತ್ತು. ಹರ್ಯಾಣ ಕೋಮು ಗಲಭೆ ಸಂದರ್ಭದಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ಹಿಂಸೆಯನ್ನು ಉತ್ತೇಜಿಸುವ ಕಾರ್ಯದಲ್ಲಿ ನಿರತವಾಗಿತ್ತು. ಈ ಚಾನೆಲ್ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ವಾಸಿಸುವ ಜೀಶಾನ್ ಮುಷ್ತಾಕ್ ಅಲಿಯಾಸ್ ಅಹ್ಸಾನ್ ಮೇವಾಟಿ ಪಾಕಿಸ್ತಾನ್ ಅವರಿಗೆ ಸೇರಿದ್ದಾಗಿದೆ.
ಇದರ ಐಪಿ ವಿಳಾಸ ಪಾಕಿಸ್ತಾನ ಶಿಕ್ಷಣ ಮತ್ತು ಸಂಶೋಧನಾ ಜಾಲ(ಪಿಇಆರ್ಎನ್)ಕ್ಕೆ ಸೇರಿದ್ದಾಗಿದೆ. ಇದು ಪಾಕಿಸ್ತಾನ ಸರ್ಕಾರದ ಮಾಹಿತಿ ತಂತ್ರಜ್ಞಾನ ಕ್ರಿಯಾ ಯೋಜನೆ-2002ರ ಭಾಗವಾಗಿದೆ. ಪಿಇಆರ್ಎನ್ ಪಾಕಿಸ್ತಾನದ ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರೀಕೃತ ಅಂತರ್ಜಾಲ ನೆಟ್ವರ್ಕ್ ಅನ್ನು ಒದಗಿಸುತ್ತದೆ.
ಮುಂದುವರಿದ ಬುಲ್ಡೋಜರ್ ದಾಳಿ:
ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ನೂಹ್ ಜಿಲ್ಲಾಡಳಿತ ಮೂರನೇ ದಿನವಾದ ಶನಿವಾರವೂ ಮುಂದುವರಿಸಿದೆ. 2.6 ಎಕರೆ ಸರ್ಕಾರ ಸ್ಥಳದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ 20ಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಹಾಗೂ ಇತರೆ ಅಂಗಡಿಗಳನ್ನು ನೆಲಸಮಗೊಳಿಸಿದೆ. “ಈ ಅಕ್ರಮ ಕಟ್ಟಡಗಳ ಮಾಲೀಕರ ಪೈಕಿ ಕೆಲವರು ಇತ್ತೀಚೆಗೆ ವಿಶ್ವ ಹಿಂದೂ ಪರಿಷತ್ ಮೆರವಣಿಗೆ ಮೇಲೆ ದಾಳಿ ನಡೆಸಿದ ಆರೋಪಿಗಳು ಸಹ ಇದ್ದಾರೆ. ಕಟ್ಟಡ ಖಾಲಿ ಮಾಡುವಂತೆ ಕಟ್ಟಡಗಳ ಮಾಲೀಕರಿಗೆ ತಿಂಗಳ ಹಿಂದೆಯೇ ನೋಟಿಸ್ ನೀಡಲಾಗಿತ್ತು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ, “ನೂಹ್ ಗಲಭೆಯ ಕುರಿತು ಗುಪ್ತಚರ ಇಲಾಖೆಗೆ ಮೊದಲೇ ಮಾಹಿತಿ ಇತ್ತೇ ಎಂಬುದರ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಡಿಜಿಪಿ ಅವರಿಗೆ ವಿಚಾರಿಸಿದೆ. ಅವರು ಕೂಡ ತಮಗೆ ಮೊದಲೇ ಮಾಹಿತಿ ಇರಲಿಲ್ಲ ಎಂದು ಹೇಳಿದ್ದರು” ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.